ಬೆಂಗಳೂರು: ಕರ್ನಾಟಕ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕರು, ಬೋಧಕೇತರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಉತ್ತರ ನೀಡಿದರು. “ಬೋಧಕ, ಬೋಧಕೇತರ ಸಿಬ್ಬಂದಿ ಹಿಂದಿನಿಂದಲೂ ಖಾಲಿ ಇದೆ. 2,800 ಬೋಧಕ ಸಿಬ್ಬಂದಿ ಹೆದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ಹುದ್ದೆಗಳನ್ನು ತುಂಬಿದ್ದೇವೆ.
ಜಾನಪದ ವಿಶ್ವವಿದ್ಯಾಲಯದಲ್ಲಿ ಹಗರಣ ಆಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ ಕೆಇಎ ಮೂಲಕ ಪರೀಕ್ಷೆ ನಡೆದಿದೆ. ಸಚಿವ ಸಂಪುಟದ ಉಪಸಮಿತಿಯನ್ನೂ ಕೂಡ ಮಾಡಲಾಗಿದೆ. ಕೆಲವೆಡೆ ಅವೈಜ್ಞಾನಿಕವಾಗಿ ಹುದ್ದೆ ಸೃಷ್ಟಿ ಮಾಡಲಾಗಿದೆ. ಪರಿಶೀಲನೆಗಾಗಿ ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ” ಎಂದು ಹೇಳಿದರು.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಎಸ್.ವಿ. ಸಂಕನೂರು ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದು, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಸುಮಾರು 2800 ಬೋಧಕರ ಹುದ್ದೆಗಳು ಖಾಲಿ ಇವೆ.
ಶೀಘ್ರದಲ್ಲೇ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ” ಎಂದು ಸಚಿವರು ಉತ್ತರ ನೀಡಿದರು.
ನಿವೃತ್ತಿಯಾದವರಿಗೆ ಪೆನ್ಷನ್ ಕೊಡಬೇಕಿದೆ. ಆದರೆ, ವಿಶ್ವವಿದ್ಯಾಲಯಗಳ ಖಾತೆಯಲ್ಲಿರುವ ಹಣ ಖಾಲಿಯಾಗಿದೆ.
ನಮ್ಮ ಸರ್ಕಾರ ಬಂದಾಗಿನಿಂದ ಹುದ್ದೆಗಳನ್ನು ಭರ್ತಿ ಮಾಡುತ್ತಾ ಬಂದಿದ್ದು, ಹಂತ ಹಂತವಾಗಿ ಎಲ್ಲ ಬೋಧಕರು, ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…