ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 3000 ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ.!

* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು,

ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ ಇಲ್ಲದಂತಾಗಿದ್ದು, ಉನ್ನತ ಶಿಕ್ಷಣ ಪಡೆಯಲು ಗ್ರಾಮೀಣ ಭಾಗದ ಬಡ ಪ್ರತಿಭಾನ್ವಿತ ವಿಧ್ಯಾರ್ಥಿಗಳು ಅವಲಂಬಿಸುವುದು ಸರ್ಕಾರಿ ವಿಶ್ವ ವಿದ್ಯಾಲಯಗಳನ್ನು. ಆದರೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬಹುತೇಕ ವಿದ್ಯಾರ್ಥಿಗಳ ಕಲಿಕೆಯಲ್ಲಿ ಕುಂಠಿತವಾಗುವುದು ಅಷ್ಟೇ ಅಲ್ಲದೇ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ಈಗಾಗಲೇ ವರದಿಯಾಗಿದೆ. ಈಗ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಪಕರ ಕೊರತೆ ಎದುರಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯ, ನೃಪತುಂಗ ವಿಶ್ವವಿದ್ಯಾಲಯ, ಕೇಂದ್ರ ವಿಶ್ವವಿದ್ಯಾಲಯ ಹಾಗೂ ಮಹರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಪಾಠ ಹೇಳಿಕೊಡಲು ಪ್ರಾಧ್ಯಾಪಕರು ಇಲ್ಲದಂತಾಗಿದೆ. ವಿದ್ಯಾರ್ಥಿಗಳಿಗೆ ಕೇವಲ ಅತಿಥಿ ಶಿಕ್ಷಕರಿಂದ ಪಾಠ ಕೇಳುವ ಭಾಗ್ಯ ದೊರೆಯುತ್ತಿದೆ. ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಪದವಿ ಕೋರ್ಸ್ ಮುಗಿಸಿ ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಸ್ನಾತಕೋತ್ತರ ಪದವಿಗೆ ಅಡ್ಮಿಷನ್ ಪಡೆಯುವ ವಿಧ್ಯಾರ್ಥಿಗಳು ಸಾಕಷ್ಟು ಕನಸುಗಳನ್ನು ಹೊತ್ತು ಬಂದಿರುತ್ತಾರೆ. ಜ್ಞಾನ ದೇಗುಲ ಎಂದೇ ಕರೆಸಿಕೊಳ್ಳುವ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಮಟ್ಟದ ಜ್ಞಾನ ಸಿಗುತ್ತದೆ ಎಂಬ ನಿರೀಕ್ಷೆ ಇಟ್ಟು ಕೊಂಡಿರುತ್ತಾರೆ. ಆದರೆ ವಿಧ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಬೋಧನಾ ಸಿಬ್ಬಂದಿಯನ್ನು ಪೂರೈಸದ ಸರ್ಕಾರದ ನಡೆ ಬೇಸರ ಉಂಟು ಮಾಡುತ್ತಿದೆ ಎಂಬ ಆಕ್ರೋಶದ ಮಾತುಗಳು ಕೇಳಿಬರುತ್ತಿವೆ.


ಒಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಮಾತ್ರ ಅಲ್ಲದೆ ವಿಶ್ವ ವಿದ್ಯಾಲಯಗಳಲ್ಲಿ ಸಹ ಸೂಕ್ತ ಮತ್ತು ಅಗತ್ಯ ಪ್ರಮಾಣದ ಬೋಧನಾ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯಬೇಕಾದ ಪದವಿ ವಿಧ್ಯಾರ್ಥಿಗಳಿಗೆ ಹಿನ್ನಡೆ ಆಗುತ್ತಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದ ಪ್ರಾಧ್ಯಾಪಕರನ್ನು ನೇಮಕ ಮಾಡುವ ಪ್ರಕ್ರಿಯೆಗೆ ವೇಗ ನೀಡಬೇಕಾಗಿದೆ.

ವಿಧ್ಯಾರ್ಥಿಗಳ ಬೇಡಿಕೆಗೆ ತಕ್ಕಂತ ನುರಿತ ಕಾಯಂ ಪ್ರಾಧ್ಯಾಪಕರು ವಿಶ್ವ ವಿದ್ಯಾಲಯಗಳಲ್ಲಿ ಇಲ್ಲದಂತಾಗಿದ್ದು, ಪ್ರತಿ ಬಾರಿಯೂ ಅತಿಥಿ ಉಪನ್ಯಾಸಕರು ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಬೋಧನೆಯಿಂದಲೇ ಸ್ನಾತಕೋತ್ತರ ವಿಧ್ಯಾರ್ಥಿಗಳು ತೃಪ್ತಿ ಪಡುವಂತಾಗಿದೆ. ನುರಿತ ಕಾಯಂ ಉಪನ್ಯಾಸಕರು ಹಾಗೂ ತಾತ್ಕಾಲಿಕ ಉಪನ್ಯಾಸಕರ ಬೋಧನೆ ನಡುವೆ ಸಾಕಷ್ಟು ವ್ಯತ್ಯಾಸ ಇದ್ದು, ವಿಧ್ಯಾರ್ಥಿಗಳ ಕಲಿಕೆಯ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ ಆದಷ್ಟು ಬೇಗ ಕಾಯಂ ಪ್ರಾಧ್ಯಾಪಕರನ್ನು ನೇಮಕ ಮಾಡುವಂತೆ ವಿದ್ಯಾರ್ಥಿಗಳು ಹಾಗೂ ಕುಲಪತಿಗಳು ಒತ್ತಾಯಿಸುತ್ತಿದ್ದಾರೆ.

prajaprabhat

Recent Posts

ಜೂ.16 ರಂದು ಎನ್‌ಎಬಿಎಲ್ ಮಾನ್ಯತೆ,<br>ಅದರ ಲಾಭಗಳು ಕುರಿತು ಜಾಗೃತಿ ಕಾರ್ಯಕ್ರಮ

ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…

35 minutes ago

ಜೂ.15 ರಿಂದ 17 ರವರೆಗೆ ವಿವಿಧ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…

49 minutes ago

UGC NET 2025 ಪರೀಕ್ಷಾ ಪ್ರವೇಶ ಪತ್ರ  ಡೌನ್‌ಲೋಡ್ ಬಗ್ಗೆ ಮಾಹಿತಿ..

ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…

4 hours ago

ಜೂನ್. 16 ರಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ…

5 hours ago

ಹಾಕಿ ಪ್ರೊ ಲೀಗ್: ಅರ್ಜೆಂಟೀನಾ ವಿರುದ್ಧ ಭಾರತಕ್ಕೆ 1-2 ಅಂತರದ ಸೋಲು

ನೆದರ್ಲ್ಯಾಂಡ್ಸ್‌ನ ಆಮ್ಸ್ಟೆಲ್ವೀನ್‌ನಲ್ಲಿರುವ ವ್ಯಾಗೆನರ್ ಹಾಕಿ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಎಫ್‌ಐಎಚ್ ಹಾಕಿ ಪ್ರೊ ಲೀಗ್‌ನಲ್ಲಿ ಭಾರತ ತಂಡವು ಅರ್ಜೆಂಟೀನಾ…

5 hours ago

WTC ಫೈನಲ್: ಆಸ್ಟ್ರೇಲಿಯಾ 2ನೇ ದಿನದ ಅಂತ್ಯಕ್ಕೆ 144/8, ದಕ್ಷಿಣ ಆಫ್ರಿಕಾಕ್ಕಿಂತ 218 ರನ್‌ಗಳ ಮುನ್ನಡೆ

ನಿನ್ನೆ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ, ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್‌ನ 2ನೇ ದಿನದ ಅಂತ್ಯಕ್ಕೆ…

5 hours ago