12/06/2025 4:23 PM

Translate Language

Home » ಲೈವ್ ನ್ಯೂಸ್ » ರಾಜ್ಯದ ಸರ್ಕಾರ ಈ ಇಲಾಖೆಯ ನೌಕರರಿಗೆ ‘OPS ಜಾರಿ

ರಾಜ್ಯದ ಸರ್ಕಾರ ಈ ಇಲಾಖೆಯ ನೌಕರರಿಗೆ ‘OPS ಜಾರಿ

Facebook
X
WhatsApp
Telegram

ಬೆಂಗಳೂರು.11.ಜೂನ್.25:- ರಾಜ್ಯದ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿ ಮಾಡುವುದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುವುದಾಗಿ ಹೇಳಿತ್ತು. ಅದರಂತೆ ಈಗ ರಾಜ್ಯ ಸರ್ಕಾರ ಈ ಇಲಾಖೆಯ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ.

ಈ ಸಂಬಂಧ ಬೆಂಗಳೂರು ಜಲ ಮಂಡಳಿಯ ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೊಳಪಟ್ಟ ನೌಕರರು ದಿನಾಂಕ 01-04-2006ರ ಪೂರ್ವದಲ್ಲಿ ಬ್ಯಾಕ್ ಲಾಗ್ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿ ದಿನಾಂಕ 01-04-2006ರ ನಂತ್ರದಲ್ಲಿ ಮಂಡಳಿಯ ಸೇವೆಗೆ ಸೇರಿರುವುದರಿಂದ ಸರ್ಕಾರದ ಆದೇಶದನ್ವಯ ಅವರನ್ನು ಹಿಂದಿನ ಹಳೆಯ ಡಿಫೈನ್ಡ್ ಪಿಂಚಣಿ ಯೋಜನೆಗೆ ( OPS) ವ್ಯಾಪ್ತಿಗೊಳಪಡಿಸಿ ಆದೇಶಿಸಿದ್ದಾರೆ.

ಈ ಅಧಿಕಾರಿ, ನೌಕರರು ಎನ್ ಪಿ ಎಸ್ ವಂತಿಕೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಸರ್ಕಾರದ ಆದೇಶದಲ್ಲಿನ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಅನುಸರಿಸಲು ಕ್ರಮವಹಿಸುವುದು. ಮಂಡಳಿಯ ಎಲ್ಲಾ ಬಟವಾಡೆ ಅಧಿಕಾರಿಗಳು ಮೇಲಿನ ಅಧಿಕಾರಿ, ನೌಕರರ ವೇತನದಿಂದ ಕಟಾವಣೆಯಾಗುವ ಎನ್ ಪಿ ಎಸ್ ವಂತಿಕೆಗಳನ್ನು ಈ ಕೂಡಲೇ ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!