ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಧ್ಯಾರ್ಥಿಗಳಿಗೆ’ಸೇತುಬಂಧ’ಕಾರ್ಯಕ್ರಮ. ಈ ಕಾರ್ಯಕ್ರಮ ಶಾಲಾ ಮಕ್ಕಳಿಗೆ ಅನುಷ್ಠಾನಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ವಿಷಯಕ್ಕೆ ಸಂಬಂಧಿಸಿದಂತೆ, ಮಕ್ಕಳ ವಯೋಮಾನ ಮತ್ತು ತರಗತಿಗೆ ಅನುಗುಣವಾಗಿ ಕಲಿಕಾ ಮಟ್ಟ ಮತ್ತು ಸಾಮರ್ಥ್ಯಗಳನ್ನು ಗುರುತಿಸಿ ಮುಂದಿನ ಕಲಿಕೆಗೆ ಸಿದ್ಧಗೊಳಿಸಲು ಕಲಿತಿರುವ ಮತ್ತು ಕಲಿಯುತ್ತಿರುವ ಪರಿಕಲ್ಪನೆಗಳ ಅಂತರದ ನಡುವೆ ಸಹ ಸಂಬಂಧ ಕಲ್ಪಿಸುವುದು ಸೇತುಬಂಧ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.
2025-26ನೇ ಸಾಲಿಗೆ 1ನೇ ತರಗತಿಗೆ (ಕಲಿ-ನಲಿ) ಶಾಲಾ ಪ್ರಾರಂಭದ ಮೊದಲ 40 ದಿನಗಳು ವಿದ್ಯಾಪ್ರವೇಶ ಹಾಗೂ 2 ರಿಂದ 10ನೇ ತರಗತಿಗಳಿಗೆ ಮೊದಲ 15 ದಿನಗಳನ್ನು ಸೇತುಬಂಧ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ 1 ರಿಂದ 10ನೇ ತರಗತಿವರೆಗೆ ತರಗತಿವಾರು ಮತ್ತು ವಿಷಯವಾರು ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಾಗೂ ಪ್ರಥಮ ಭಾಷೆಗಳಾದ ಉರ್ದು, ಮರಾಠಿ, ತೆಲುಗು ಮತ್ತು ತಮಿಳಿಗೆ ಸಂಬಂಧಿಸಿದ ಕಲಿಕಾ ಸಾಮಗ್ರಿಯು DSERT website ನಲ್ಲಿ ಲಭ್ಯವಿದ್ದು, ಇವುಗಳನ್ನು ಬಳಸಿಕೊಂಡು ಕೆಳಕಂಡ ಕಾರ್ಯತಂತ್ರಗಳನ್ನು ಅನುಸರಿಸಿ ಸೇತುಬಂಧ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದು.
ಸೇತುಬಂಧ ಕಾರ್ಯಕ್ರಮದ ಅನುಷ್ಠಾನ ಕಾರ್ಯತಂತ್ರಗಳು:
2025-26ನೇ ಶೈಕ್ಷಣಿಕ ಸಾಲಿಗೆ ಕನ್ನಡ ಮತ್ತು ಉರ್ದು ಮಾಧ್ಯಮದ ನಲಿ-ಕಲಿಯ 01ನೇ ತರಗತಿಗೆ ವಿದ್ಯಾ ಪ್ರವೇಶ ಹಾಗೂ 02 ಮತ್ತು 03ನೇ ತರಗತಿಗಳಿಗೆ ಸೇತುಬಂಧ ಚಟುವಟಿಕೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಹೊರಡಿಸುವ ಸುತ್ತೋಲೆಯನ್ನು ಅನುಸರಿಸುವುದು.
ಕಲಿ-ನಲಿ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳಿಗೆ 01ನೇ ತರಗತಿಗೆ 40 ದಿನಗಳ ವಿದ್ಯಾಪ್ರವೇಶ ಹಾಗೂ 02 ರಿಂದ 10ನೇ ತರಗತಿಗಳಿಗೆ ಕನ್ನಡ & ಆಂಗ್ಲ ಮಾಧ್ಯಮ ಹಾಗೂ ಉರ್ದು, ಮರಾಠಿ, ತೆಲುಗು ಮತ್ತು ತಮಿಳು ಭಾಷೆಗಳ ಸೇತುಬಂಧ ಸಾಹಿತ್ಯ DSERT website ನಲ್ಲಿ ಲಭ್ಯವಿದೆ.ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ತರಗತಿ ಪ್ರಕ್ರಿಯೆಯನ್ನು ಅನುಕೂಲಿಸಲು ಚಟುವಟಿಕೆ ಆಧಾರಿತವಾಗಿ ಕಲಿಕಾ ತಂತ್ರಗಳನ್ನು ರೂಪಿಸಲಾಗಿದೆ ಮತ್ತು ಈ ಚಟುವಟಿಕೆಗಳ ನಿರ್ವಹಣೆಗೆ ಮಾರ್ಗಸೂಚಿಯನ್ನು ನೀಡಲಾಗಿದ್ದು, ಶಿಕ್ಷಕರು ಸದರಿ ಸಾಹಿತ್ಯವನ್ನು ಬಳಸಿ ತಮ್ಮ ತರಗತಿಯ ಪರಿಸರಕ್ಕೆ ಅನುಗುಣವಾಗಿ ಸೇತುಬಂಧ ಕಾರ್ಯಕ್ರಮವನ್ನು ಆಯೋಜಿಸುವುದು.
ಸಾಹಿತ್ಯದಲ್ಲಿ ನೀಡಿರುವ ಅಥವಾ ತಮ್ಮ ಹಂತದಲ್ಲಿ ಸ್ಥಳೀಯ ಸನ್ನಿವೇಶಕ್ಕೆ ಮತ್ತು ಅಪೇಕ್ಷಿತ ಕಲಿಕಾ ಫಲಗಳಿಗೆ ಅನುಗುಣವಾಗಿ ಚಟುವಟಿಕೆ ರೂಪಿಸಿಕೊಂಡು ಅನುಷ್ಠಾನಿಸಲು ಕ್ರಮವಹಿಸುವುದು.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…