ಬೆಂಗಳೂರು.12.ಜೂನ.25:- ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ 8 ಡಿವೈಎಸ್ಪಿ ಹಾಗೂ28 ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸಂಬಂಧಪಟ್ಟ ಘಟಕಾಧಿಕಾರಿಗಳು ಮೇಲ್ಕಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ನಿಯುಕ್ತಿಗೊಳಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಕೂಡಲೇ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಬಿಡುಗಡೆಗೊಂಡ / ವರದಿ ಮಾಡಿದ ಬಗ್ಗೆ ಈ ಕಛೇರಿಗೆ ಪಾಲನಾ ವರದಿ ಸಲ್ಲಿಸುವುದು.
ಸದರಿ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದೆ ಇರುವ ಪಿ.ಐ.(ಸಿವಿಲ್) ವೃಂದದ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಛೇರಿಯಲ್ಲಿ ವರದಿ ಮಾಡಿಕೊಳ್ಳುವುದು ಎಂದು ತಿಳಿಸಿದೆ.






