ಕಲಬುರ್ಗಿ: 09.ಜನವರಿ.25:- ರಾಜ್ಯದಲ್ಲಿ ಪ್ರತಿಒಂದು ವಿಶ್ವವಿದ್ಯಾಲಯಗಳಲ್ಲಿ ಪ್ರತೀಕ ವಿಭಾಗಗಳಲ್ಲಿ ಎಲ್ಲಾ ಬೋಧಕ, ಬೋಧಕೇತರ ಖಾಲಿಯಿರುವ ಹುದ್ದೆಗಳನ್ನು ಖಾಯಂ ಆಗಿ ನೇಮಕ ಮಾಡಿಕೊಳ್ಳಲಿ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉನ್ನತ ಶಿಕ್ಷಣ ಪದ್ಧತಿ ಅವನತಿಯತ್ತ ಸಾಗುತ್ತಿದೆ ಎಂಬುವುದಕ್ಕೆ ಕೆಲವೊಂದು ದಿನಪತ್ರಿಕೆಗಳಲ್ಲಿ ಪ್ರಕಟವಾಗಿವೆ.
ಉನ್ನತ ಶಿಕ್ಷಣದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿವೆ, ಖಾಲಿಯಾದ ಖಾಯಂ ಹುದ್ದೆಗಳ ಭರ್ತಿಗಾಗಿ ಈಗಾಗಲೇ ನಾನು ಸದನದಲ್ಲಿ ಪ್ರಶ್ನಿಸಿ ಸಚಿವರ ಗಮನ ಸೆಳೆದಿದ್ದೇನೆ. ಹಲವಾರು ಬಾರಿ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ, ಚರ್ಚಿಸಿರುವೆ ಇಲ್ಲಿಯವರೆಗೂ ಇದಕ್ಕೆ ಪರಿಹಾರ ಒದಗಿಸಲು ಸರ್ಕಾರಗಳು ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಟ್ಟು 2723 ಬೋಧಕ ಹುದ್ದೆಗಳು ಖಾಲಿ ಇದ್ದು, ರಾಜ್ಯದ 32 ವಿಶ್ವವಿದ್ಯಾಲಯಗಳಲ್ಲಿ ಒಟ್ಟು 4709 ಹುದ್ದೆಗಳು ಮಂಜೂರಾಗಿದ್ದರೆ, ಇದರಲ್ಲಿ 2723 ಹುದ್ದೆಗಳು ಖಾಲಿ ಉಳಿದಿವೆ. ಪ್ರಸ್ತುತ ಎಲ್ಲ ವಿವಿಗಳಲ್ಲಿ ಕಾಯಂ ಕಾರ್ಯನಿರ್ವಹಿಸುವವರಿಗಿಂತ ಖಾಲಿ ಹುದ್ದೆಗಳ ಹೆಚ್ಚಿವೆ. ಈ ಹಿಂದೆ ನೇಮಕಗೊಂಡವರೂ ಸಹ ನಿವೃತ್ತಿಯಾಗಿದ್ದು ಕೆಲವರು ಮಾತ್ರ ಉಳಿದಿದ್ದು, ಇವರೂ ಕೆಲದೇ ವರ್ಷಗಳಲ್ಲಿ ನಿವೃತ್ತಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ
ರಾಜ್ಯದ 32 ವಿವಿಗಳಲ್ಲಿ ಬೋಧಕೇತರ ಹುದ್ದೆಗಳು 9317 ಮಂಜೂರಾಗಿದ್ದರೆ ಇದರಲ್ಲಿ 6328 ಹುದ್ದೆಗಳು ಖಾಲಿಯಿವೆ. ಇದರಿಂದ ವಿವಿಯಲ್ಲಿನ ವಿವಿಧ ಕೆಲಸಗಳನ್ನು ಮಾಡಲು ಸಿಬ್ಬಂದಿಯೇ ಇಲ್ಲ. ಹಲವು ಹುದ್ದೆಗಳನ್ನು ಒಬ್ಬರೇ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳು 371(ಜೆ) ನಿಯಮದಂತೆ ಭರ್ತಿ ಮಾಡಿ:
ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ ವಿಶೇಷ ಸ್ಥಾನಮಾನ ವಿಧಿ 371(ಜೆ) ಜಾರಿಯಾಗಿ ದಶಕ ಕಳೆದಿವೆ. ಆ ವಿಶೇಷ ಸ್ಥಾನಮಾನ 371(ಜೆ) ಅನ್ವಯ ಕಲ್ಯಾಣ ಕರ್ನಾಟಕ ಭಾಗದ ಯಾವುದೇ ಖಾಲಿ ಹುದ್ದೆಗಳಿಗೆ ಹಣಕಾಸು ಇಲಾಖೆಯ ಅನುಮತಿ ಬೇಕಾಗಿಲ್ಲ, ಆದರೂ ಈ ನಿಯಮವನ್ನು ಸರ್ಕಾರ ಜಾರಿ ಮಾಡಿಲ್ಲ. ಖಾಲಿ ಹುದ್ದೆ ಭರ್ತಿ ಯಾವಾಗ ಎಂದಾಗ ಹಣಕಾಸು ಇಲಾಖೆಯ ಕಡೆ ತೋರಿಸುವುದು ವಾಡಿಕೆಯಾಗಿದೆ.
ಈಗಲಾದರೂ ವಿಶೇಷ ಸ್ಥಾನಮಾನ ಅನ್ವಯ ನಮ್ಮ ಭಾಗದ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…