ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ. ಪ್ರದರ್ಶನಕ್ಕಾಗಿ ಮಾಧ್ಯಮ ಪತ್ರಿಕಾ ಫೋಟೊಗ್ರಾಫರ್‌ಗಳಿಂದ ಅರ್ಜಿ  ಆಹ್ವಾನ.!


ಬೀದರ.06.ಫೆಬ್ರುವರಿ.25:-ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ.


ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ ರೂ. 35,000 ರೂ. 25,000 ರೂ. ಹಾಗೂ 15,000 ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.


ಸ್ಪರ್ಧೆಯ ಷರತ್ತುಗಳು: ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ:01-01-2024 ರಿಂದ 31-01-2025 ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.


ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ. ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿoದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ ಮಾಧ್ಯಮ ಮಾನ್ಯತಾ ಕಾರ್ಡ ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.

ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್ಗಳು ಇರಬಾರದು. ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್‌ಗಳನ್ನು ಜೆಪಿಇಜಿ ಪಾಮ್ರ‍್ಯಾಟ್  (JPEG format)  ನಲ್ಲಿ ಮಾತ್ರ ಸಲ್ಲಿಸಬೇಕು.


ಪ್ರದರ್ಶನಕ್ಕೆ ಆಯ್ಕೆಯಾಗುವ ಛಾಯಾಚಿತ್ರಗಳನ್ನು  20”x30”    ಅಳತೆಯಲ್ಲಿ ಮುದ್ರಣ ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್‌ಗಳು 20”x 30” ಅಳತೆಯ 300 ಡಿಪಿಐ ನಲ್ಲಿದ್ದು ಕನಿಷ್ಠ 5 ಎಮ್‌ಬಿ ಗಾತ್ರದಲ್ಲಿರಬೇಕು.


ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿ ಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನು ತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.


ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು  mediaacademy.karnataka.gov.in ವೆಬ್‌ಸೈಟ್‌ನಲ್ಲಿ ಇರುವ ನಿಗದಿತ ಅರ್ಜಿಯನ್ನು  Download  ಮಾಡಿಕೊಂಡು ಭರ್ತಿಮಾಡಿ, ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್‌ಗಳನ್ನು  photo.karnatakamediaacademy@gmail.com ಇ-ಮೇಲ್ ವಿಳಾಸಕ್ಕೆ ಫೆಬ್ರವರಿ 15, 2025 ರಂದು ಸಂಜೆ 5 ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.


ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನು ಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆ ಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದು ಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.


ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448227768 ಹಾಗೂ 9449245980 ನ್ನು ಸಂಪರ್ಕಿಸಬಹುದು ಎಂದು ಮಾಧ್ಯಮ ಅಕಾಡೆಮಿಚಿiÀÄ ಕಾರ್ಯದರ್ಶಿ ಸಹನಾ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

5 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago