ಬೀದರ.14.ಫೆಬ್ರುವರಿ.25:-ಮಾರ್ಚ.2 ರಿಂದ 4 ರವರೆಗೆ ನಡೆಯುವ 15ನೇ ರಾಜ್ಯಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಯಶಸ್ವಿಯಾಗಿ ಆಯೋಜಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ಇಂದು ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಜೀವ ವೈವಿದ್ಯ ಮಂಡಳಿ ಬೆಂಗಳೂರು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು, ಕರ್ನಾಟಕ ರಾಜ್ಯ ಪಾರಂಪರಿಕ ವೈದ್ಯ ಪರಿಷತ್ ಬೆಂಗಳೂರು ಹಾಗೂ ಜಿಲ್ಲಾಡಳಿತ ಬೀದರ ಸಂಯುಕ್ತಾಶ್ರಯದಲ್ಲಿ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾರ್ಚ.1 ರಂದು ಬೆಳಿಗ್ಗೆ 9 ಗಂಟೆಗೆ ಬಿದರನ ಎನ್.ಕೆ.ಜಾಬಶೆಟ್ಟಿ ಆರ್ಯುವೇದಿಕ ಕಾಲೇಜು ಸಿದ್ದಾರೂಢ ಮಠದಿಂದ ಡಾ.ಚನ್ನಬಸವ ಪಟ್ಟದ್ದೇವರ ರಂಗಮಂದಿರ ಸಮ್ಮೇಳನ ಜಾಥಾ ಆಯೋಜಿಸುವುದು. ಈ ಜಾಥಾದಲ್ಲಿ ಬೀದರನ ಎಲ್ಲಾ ಪಾರಂಪರಿಕ ವೈದ್ಯರು, ಆರ್ಯುವೇದಿಕ ಕಾಲೇಜು, ಪಶು ವೈದ್ಯಕೀಯ ಕಾಲೇಜು, ತೋಟಗಾರಿಕೆ ಕಾಲೇಜು, ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸಮ್ಮೇಳನದ ಸ್ವಾಗತ ಸಮಿತಿಗಳು ಪದಾಧಿಕಾರಿಗಳು ಭಾಗವಹಿಸುವುದು.
ಮಾರ್ಚ.2 ರಂದು ಬೆಳಿಗ್ಗೆ 11 ಗಂಟೆಗೆ ಪ್ರತಾಪ ನಗರದ ಬೆಲ್ದಾಳೆ ಕನ್ವೇಷನ್ ಹಾಲ್ದಲ್ಲಿ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಉದ್ಘಾಟನಾ ಸಮಾರಂಭ ಜರುಗುವುದು. ನಂತರ ಸಮ್ಮೇಳನದ ವಿವಿಧ ಗೋಷ್ಠಿಗಳು 3 ದಿನಗಳ ಕಾಲ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜರುವುದು. ಮಾರ್ಚ.4 ರಂದು ಸಾಯಂಕಾಲ ಸಮಾರೋಪ ಸಮಾರಂಭ ಜರುಗಲಿದೆ. ಅಂದು ಸಮ್ಮೇಳನದಲ್ಲಿ ಭಾಗವಹಿಸುವ ವೈದ್ಯರಿಗೆ ಪ್ರಮಾಣ ಪತ್ರ, 5 ಜನ ವೈದ್ಯರಿಗೆ ವೈದ್ಯರತ್ನ ಪ್ರಶಸ್ತಿ ಮತ್ತು ಇಬ್ಬರಿಗೆ ವನೌಷಧಿ ಪ್ರಶಸ್ತಿ ನೀಡಲಾಗುವುದು. ಮಾರ್ಚ.3 ಮತ್ತು 4 ರಂದು ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಪಾರಂಪರಿಕ ವೈದ್ಯರಿಂದ ವಿವಿಧ ರೋಗಗಳ ತಪಾಸಣೆ ಹಾಗೂ ಉಚಿತ ಚಿಕಿತ್ಸೆ, ಸಾಯಂಕಾಲ 6 ರಿಂದ 8 ಗಂಟೆವರೆಗೆ ಸಮ್ಮೇಳನದ ಸಾಂಸ್ಕøತಿಕ ಸಮಿತಿ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿವೆ. ವಿವಿಧ ಔಷದ ಕಂಪನಿಗಳಿಂದ ಜಿಲ್ಲಾ ರಂಗಮಂದಿರದಲ್ಲಿ 3 ದಿನಗಳ ಕಾಲ ಮಳಿಗೆಗಳು ಸ್ಥಾಪಿಸಲಾಗುವುದು ಎಂದರು.

ಭಾಗವಹಿಸುವ ಎಲ್ಲಾ ಪಾರಂಪರಿಕ ವೈದಿರಗೆ 3 ದಿನ ಕಾಲ ಉಪಹಾರ, ಊಟದ ವ್ಯವಸ್ಥೆ ಮಾಡಲಾಗುವುದು. ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇನ್ನಿತರ ಕಡೆ ವಸತಿ ವ್ಯವಸ್ಥೆ ಮಾಡಲಾಗುವುದು. ರಸ್ತೆ ಸಾರಿಗೆ ಸಂಸ್ಥೆ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಬಸ್ಸಗಳ ವ್ಯವಸ್ಥೆ, ನಗರದ ಶಾಲಾ ಕಾಲೇಜುಗಳ ವಾಹನಗಳ ವ್ಯವಸ್ಥೆ ಮಾಡಲು ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ವಿವಿಧ ಸಂಘ-ಸಂಸ್ಥೆ ಪದಾಧಿಕಾರಿಗಳು ಸೇರಿದಂತೆ ಸಮ್ಮೇಳನದ ಕರಪತ್ರ ಬಿಡುಗಡೆಗೊಳಿಸಿದರು.
ಈ ಸಭೆಯಲ್ಲಿ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಂ.ಎಂ.ವಾನತಿ, ಅಪರ ಜಿಲ್ಲಾದಿಕಾರಿಗಳಾದ ಶಿವಕುಮಾರ ಶೀಲವಂತ, ಸಾಮಾಜಿಕ ಅರಣ್ಯ ಸಂರಕ್ಷಣಾಧಿಕಾರಿಳಾದ ಎ.ಬಿ.ಪಾಟೀಲ, ಪ್ರೋ.ಜಗನ್ನಾಥ ಹೆಬ್ಬಾಳೆ, ಶಾಹೀನ ಶಿಕ್ಷಣ ಸಂಸ್ಥೆ ಮುಖ್ಯಸ್ಥರಾದ ಅಬ್ದುಲ್ ಖದೀರ, ಪ್ರೋ.ಎಸ್.ವಿ.ಕಲ್ಮಟ, ಡಾ.ಪ್ರಥ್ವಿರಾಜ ಎಸ್.ಲಕ್ಕಿ ಸೇರಿದಂತೆ ವಿವಿಧ ಸಂಘ ಸಂಸ್ಥೆ ಮುಖ್ಯಸ್ಥರು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
*****