ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಿಡಿ-ಪುಸ್ತಕ ಹಿಡಿ ಕಾರ್ಯಕ್ರಮ.!

ಬೆಂಗಳೂರು.24.ಜೂನ್.25:- ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ `ಮೊಬೈಲ್ ಬಿಡಿ-ಪುಸ್ತಕ ಹಿಡಿ’  ಅರಿವಿನ ಅಭಿಯಾನವನ್ನು ಕಾರ್ಯಕ್ರಮ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ರಾಮನಗರ ತಾಲ್ಲೂಕು, ಬಿಡದಿ ಹೋಬಳಿ, ಬನ್ನಿಕುಪ್ಪೆ(ಬಿ)ಕ್ಲಸ್ಟರ್ನಲ್ಲಿ ಸಮೂಹ ಸಂಪನ್ಮೂಲ ಶಿಕ್ಷಕರಾದ (ಸಿ.ಆರ್.ಪಿ) ಶ್ರೀ ಚಿಕ್ಕವೀರಯ್ಯ ಟಿ.ಎನ್ ಹಾಗೂ ಇವರ ಶಿಕ್ಷಕರ ತಂಡದ ವತಿಯಿಂದ ದಿನಾಂಕ:14.02.2025 ರಿಂದ “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಅರಿವಿನ ಅಭಿಯಾನವನ್ನು ಪ್ರಾರಂಭಿಸಿದ್ದು, ಈ ಅಭಿಯಾನವು ವಿದ್ಯಾರ್ಥಿಗಳು/ಪೋಷಕರು ಹಾಗೂ ಸಾರ್ವಜನಿಕರು ಮೊಬೈಲ್ ಬಳಸುವ ಪ್ರಮಾಣವನ್ನು ಕಡಿಮೆಗೊಳಿಸಿ, ಪುಸ್ತಕ ಓದುವ ಅಭಿರುಚಿಗೆ ಪೂರಕವಾಗಿ ಜನಪ್ರಿಯವಾಗುತ್ತಿದೆ.

ಸದರಿ ಅಭಿಯಾನವು ರಾಜ್ಯಾದ್ಯಂತ ಪ್ರಭಾವ ಬೀರಿ ಸದ್ದು ಮಾಡುತ್ತಿದ್ದು, ಬಹುತೇಕ ಎಲ್ಲಾ ದೃಶ್ಯ/ಮುದ್ರಣ ಮಾಧ್ಯಮ/ಆಕಾಶವಾಣಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುತ್ತಿದೆ.

ಆದ್ದರಿಂದ, 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಇಡೀ ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಆರಂಭದ ಮೊದಲ ದಿನದಿಂದಲೇ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರ್ಥನಾ ಅವಧಿಯಲ್ಲಿ ಮತ್ತು ಪೋಷಕರು/ಸಾರ್ವಜನಿಕರಿಗೆ ಅನುಕೂಲಕರವಾದ ವೇಳೆಯಲ್ಲಿ ಈ ಅಭಿಯಾನ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಎಂಬ ವಿನೂತನ ಕಾರ್ಯಕ್ರಮದ ಬಗ್ಗೆ ಸರ್ಕಾರದಿಂದ ಸುತ್ತೋಲೆ ಹೊರಡಿಸಬೇಕೆಂದು ಮತ್ತು ಈ ಮುಖೇನ ಮೊಬೈಲ್ ಬಳಕೆಯಿಂದಾಗಬಹುದಾದ ದುಷ್ಪರಿಣಾಮ ಹಾಗೂ ಪುಸ್ತಕ ಓದುವುದರಿಂದ ವಿದ್ಯಾರ್ಥಿಗಳಿಂದ ಆಗುವ ಜ್ಞಾನವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಬೇಕೆಂದು ಕೋರಿರುತ್ತಾರೆ.

ಈ ಸಂಬಂಧ ಉಲ್ಲೇಖ(01) ಸರ್ಕಾರದ ಪತ್ರದಲ್ಲಿ ಲಗತ್ತಿಸಿರುವ ಪತ್ರದಂತೆ, ತಮ್ಮ ಕಾಲೇಜು/ವಿಭಾಗಗಳಲ್ಲಿ “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಅರಿವಿನ ಅಭಿಯಾನವನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮವಹಿಸುವಂತೆ ಈ ಮೂಲಕ ತಿಳಿಸಲಾಗಿದೆ.

prajaprabhat

Recent Posts

‘ಹರ ಘರ ತಿರಂಗಾ”ಕಾರ್ಯಕ್ರಮ

ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…

3 hours ago

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

5 hours ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

12 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

15 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

15 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

16 hours ago