ರಾಜ್ಯಾದ್ಯಂತ 11.80 ಲಕ್ಷ ನಕಲಿ ಪಿಂಚಣಿದಾರರು: ಸಚಿವ ಕೃಷ್ಣಬೈರೇಗೌಡ

ಕಾರವಾರ.23.ಜುಲೈ.25:- ರಾಜ್ಯಾದ್ಯಂತ ಸುಳ್ಳು ದಾಖಲೆ ಮೂಲಕ ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುತ್ತಿರುವ 11.80 ಲಕ್ಷ ಅನುಮಾನಾಸ್ಪದ ಪ್ರಕರಣಗಳು ಬಹಿರಂಗ.

ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುತ್ತಿರುವ 11.80 ಲಕ್ಷ ಅನುಮಾನಾಸ್ಪದ ಪ್ರಕರಣಗಳು ಕಂಡು ಬಂದಿದ್ದು, ಇವುಗಳ ನೈಜತೆ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ಮಾತನಾಡಿ, ಅರ್ಹ ವ್ಯಕ್ತಿಗಳಿಗೆ ಸರಕಾರದ ಸಾಮಾಜಿಕ ಭದ್ರತ ಪಿಂಚಣಿ ಪ್ರಯೋಜನ ದೊರೆಯಬೇಕು.

ಆದರೆ ರಾಜ್ಯದಲ್ಲಿ 11.80 ಲಕ್ಷ ಮಂದಿ ಅನುಮಾನಾಸ್ಪದವಾಗಿ ಸುಳ್ಳು ದಾಖಲೆ ಸಲ್ಲಿಸಿ ವೃದ್ಧಾಪ್ಯ ಪಿಂಚಣಿ ಪಡೆಯುತ್ತಿರುವುದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದ್ದು, ಇದರಲ್ಲಿ 13,702 ಮಂದಿ ಆದಾಯ ತೆರಿಗೆ ಪಾವತಿದಾರರು, 117 ಮಂದಿ ಸರಕಾರಿ ನೌಕರರು ಮತ್ತು ಎಪಿಎಲ್‌ ಕಾರ್ಡ್‌ದಾರರಿದ್ದಾರೆ ಎಂದರು.

ಆಧಾರ್‌ ಪರಿಶೀಲನೆ ವೇಳೆ ಇವರ ವಯಸ್ಸು ಯೋಜನೆಗೆ ಅರ್ಹವಾದ ವಯಸ್ಸಿಗಿಂತ ಕಡಿಮೆ ಇರುವುದು ಕಂಡು ಬಂದಿದೆ. ಅಲ್ಲದೇ ಆರೋಗ್ಯಕರವಾಗಿ ಇರುವವರು ಕೂಡ ಅಂಗವಿಕಲ ಪ್ರಮಾಣ ಪತ್ರ ಪಡೆದು ಅಂಗವಿಕಲ ಪಿಂಚಣಿ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇಂತಹ ಪ್ರಕರಣಗಳ ಬಗ್ಗೆ ಪುನರ್‌ ಪರಿಶೀಲನೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಪೌತಿ ಖಾತೆ ಆಂದೋಲನವನ್ನು ಆನ್‌ಲೈನ್‌ ಮೂಲಕ ಆರಂಭಿಸಲಾಗಿದ್ದು, ರಾಜ್ಯದಲ್ಲಿ 52.55 ಲಕ್ಷ ಜಮೀನುಗಳು ಮೃತ ರೈತರ ಹೆಸರಿನಲ್ಲಿ ಮುಂದುವರಿದಿದ್ದು ಕೇಂದ್ರ ಸರಕಾರ ಮೃತರ ಹೆಸರಿನಲ್ಲಿ ಇರುವ ಜಮೀನುಗಳಿಗೆ ಪಿಎಂ ಕಿಸಾನ್‌ ಸೇರಿದಂತೆ ಇತರ ಯೋಜನೆಗಳ ಸಬ್ಸಿಡಿ ನೀಡದಂತೆ ಸೂಚಿಸಿದೆ. ಇದರಿಂದಾಗಿ ಮೃತರ ಹೆಸರಿನಲ್ಲಿರುವ ಜಮಿನುಗಳನ್ನು ಅವರ ವಾರಸುದಾರಿಗೆ ಖಾತೆ ಬದಲಾವಣೆ ಮಾಡುವ ಅನಿವಾರ್ಯತೆ ಇದೆ. ಇದಕ್ಕಾಗಿ ಕಂದಾಯ ಇಲಾಖೆ ಅಧಿಕಾರಿಗಳ ಮೂಲಕ ಜನರ ಮನೆ ಬಾಗಿಲಿಗೆ ತೆರಳಿ ಖಾತೆ ಬದಲಾವಣೆ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಒಂದು ತಿಂಗಳಲ್ಲಿ 20 ಸಾವಿರ ರೈತರ ಜಮೀನುಗಳನ್ನು ಮೃತರ ವಾರಸುದಾರರಿಗೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಕಾರ್ಯವನ್ನು ಆದಷ್ಟು ಶೀಘ್ರ ಮಾಡಲಾಗುವುದು ಎಂದರು.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

2 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

7 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

8 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

8 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

9 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago