ರಾಜ್ಯ ಸರಕಾರ ಒಬಿಸಿ ಮೀಸಲತಿಯೆಲ್ಲಿ: ಭಾರಿ ಬದಲಾವಣೆ

ಬೆಂಗಳೂರು.12.ಏಪ್ರಿಲ್.25:- ರಾಜ್ಯದಲ್ಲಿ (ಒಬಿಸಿ) ಮೀಸಲಾತಿ ಪಟ್ಟಿಯಲ್ಲಿರುವ ವಿವಿಧ ಜಾತಿಗಳ ಮೀಸಲಾತಿಯನ್ನು ಮರುವರ್ಗೀಕರಣ ಮಾಡಿ ಆಯಾ ಜಾತಿಯವರ ಜನಸಂಖ್ಯೆಗೆ ಆಧಾರಮೇಲೆ ಅನುಗುಣಗವಾಗಿ ಈಗಿರುವ ಲಿಂಗಾಯತರು, ಒಕ್ಕಲಿಗರು, ಮುಸ್ಲಿಮರು, ಹಿಂದುಳಿದ ತಳ ಸಮುದಾಯಗಳೂ ಸೇರಿಕೊಂಡಂತೆ ಇತರೆ ಹಿಂದುಳಿದ ಜಾತಿಗಳ ಮೀಸಲು ಪ್ರಮಾಣವನ್ನು ಹೆಚ್ಚಳ ಮಾಡುವಂತೆ ಕೆ.ಜಯಪ‍್ರಕಾಶ್ ಹೆಗ್ಡೆ ಅಧ್ಯಕ್ಷತೆಯ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಈವರೆಗೆ ಶೇಕಡ 32 ಹಾಗೂ ಪರಿಶಿಷ್ಟ ಜಾತಿ-ಪಂಗಡದವರಿಗೆ ಶೇ 24.1ರಷ್ಟು ಮೀಸಲಾತಿ ಇದೆ. ಹಿಂದುಳಿದವರ ಮೀಸಲಾತಿಯನ್ನು ಶೇ 51ಕ್ಕೆ ಏರಿಸುವಂತೆ ಆಯೋಗ ತನ್ನ ಶಿಫಾರಸಿನಲ್ಲಿ ಹೇಳಿದೆ. ಈಗಿರುವ ಕಾನೂನಿನಂತೆ ಒಟ್ಟು ಮೀಸಲಾತಿ ಶೇ 50ರಷ್ಟನ್ನು ಮೀರುವಂತಿಲ್ಲ. ಹಿಂದುಳಿದವರ ಮೀಸಲು ಪ್ರಮಾಣವನ್ನು ಹೀಗೆ ಹೆಚ್ಚಿಸುವ ಶಿಫಾರಸು ಜಾರಿಯಾಗಬೇಕಾದರೆ ಕೇಂದ್ರ ಸರ್ಕಾರವು ಸಂವಿಧಾನದ ಒಂಬತ್ತನೇ ಪರಿಚ್ಛೇದಕ್ಕೆ ತಿದ್ದುಪಡಿ ತಂದು, ಮೀಸಲಾತಿ ಹೆಚ್ಚಳದ ತೀರ್ಮಾನಕ್ಕೆ ರಕ್ಷಣೆ ಒದಗಿಸಬೇಕಾಗುತ್ತದೆ ಎಂದೂ ಆಯೋಗ ಪ್ರತಿಪಾದಿಸಿದೆ.

ಎಚ್.ಕಾಂತರಾಜ ನೇತೃತ್ವದ ಆಯೋಗ ನಡೆಸಿದ್ದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು (ಜಾತಿ ಜನಗಣತಿ) ಆಧರಿಸಿ ಹೆಗ್ಡೆ ನೇತೃತ್ವದ ಆಯೋಗವು 2024ರ ಫೆಬ್ರುವರಿಯಲ್ಲಿ ಸಲ್ಲಿಸಿದ್ದ ‘2015ರ ದತ್ತಾಂಶಗಳ ಅಧ್ಯಯನ ವರದಿ 2024’ರಲ್ಲಿ ಈ ಶಿಫಾರಸುಗಳಿವೆ ಎಂದು ಗೊತ್ತಾಗಿದೆ.

ಕಾಂತರಾಜ ಆಯೋಗದ ವರದಿ ಹಾಗೂ ಹೆಗ್ಡೆಯವರ ಅಧ್ಯಯನ ವರದಿಯ ಶಿಫಾರಸು ಹಾಗೂ ಮುಖ್ಯಾಂಶಗಳನ್ನು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಯಿತು. ಅದರ ವಿವರಗಳು ‘ಪ್ರಜಾವಾಣಿ’ಗೆ ಲಭ್ಯವಾಗಿವೆ.

ಏನಿದೆ ವಿವರ: ಈ ಹಿಂದೆ ನಡೆಸಿದ ಸಮೀಕ್ಷೆಯ ವೇಳೆ ರಾಜ್ಯದಲ್ಲಿ 6.35 ಕೋಟಿ ಜನಸಂಖ್ಯೆ ಇದ್ದು, ಅದರಲ್ಲಿ 5.98 ಕೋಟಿ ಜನರನ್ನು ಸಮೀಕ್ಷೆ ಒಳಗೊಂಡಿತ್ತು. ಸಮೀಕ್ಷೆ ವೇಳೆ ಸಂಗ್ರಹಿಸಲಾದ ಮಾಹಿತಿ ಆಧರಿಸಿ, ವಿವಿಧ ಜಾತಿಯ ಜನಸಂಖ್ಯೆ ಎಷ್ಟಿದೆ? ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಪರಿಸ್ಥಿತಿ ಹೇಗಿದೆ? ಉದ್ಯೋಗವಾರು ಎಷ್ಟು ಪಾಲು ಸಿಕ್ಕಿದೆ? ಭೂ ಹಂಚಿಕೆ ಹೇಗಿದೆ ಎಂಬ ಮಾಹಿತಿಯನ್ನು ಸಮೀಕ್ಷೆ ವೇಳೆ ಸಂಗ್ರಹಿಸಲಾಗಿತ್ತು. ಆ ದತ್ತಾಂಶ ಆಧರಿಸಿ, ಮೀಸಲಾತಿಯನ್ನು ಮರು ಹಂಚಿಕೆ ಮಾಡಬೇಕು ಎಂದು ಹೆಗ್ಡೆಯವರ ನೇತೃತ್ವದ ಆಯೋಗ ಶಿಫಾರಸು ಮಾಡಿದೆ.

ಹಿಂದುಳಿದಿರುವಿಕೆ, ಕುಲಕಸುಬು, ಈಚಿನ ವರ್ಷಗಳಲ್ಲಿ ಮೇಲುಸ್ತರಕ್ಕೆ ಏರಿದ ಜಾತಿಗಳ ಸ್ಥಿತಿಗೆ ಅನುಗುಣವಾಗಿ ಮೀಸಲಾತಿ ಪಟ್ಟಿಯಲ್ಲಿ ಮರುವರ್ಗೀಕರಣ ಮಾಡಲು ಶಿಫಾರಸು ಮಾಡಲಾಗಿದೆ. ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಈವರೆಗೆ ಐದು ಪ್ರವರ್ಗಗಳಿದ್ದು, ಅದನ್ನು ಆರಕ್ಕೆ ಏರಿಸಲು ಶಿಫಾರಸು ಮಾಡಿದೆ. ಪ್ರವರ್ಗ 1, ಪ್ರವರ್ಗ 2 ಎ ಅಡಿ ಇದ್ದ ಜಾತಿಗಳನ್ನು ಮರು ವರ್ಗೀಕರಣ ಮಾಡುವುದಕ್ಕಾಗಿ ಪ್ರವರ್ಗ 1ರ ಬದಲು ಪ್ರವರ್ಗ ‘1 ಎ’ ಎಂದು ಹಾಗೂ ಪ್ರವರ್ಗ ‘1 ಬಿ’ ಎಂಬ ಹೊಸ ವರ್ಗಗಳನ್ನು ಸೃಷ್ಟಿಸುವಂತೆ ಶಿಫಾರಸು ಮಾಡಲಾಗಿದೆ.



ಪ್ರವರ್ಗ 1ರಲ್ಲಿದ್ದ ಹಲವು ಜಾತಿಗಳನ್ನು ಆ ಜಾತಿಯವರ ಕಾಯಕ, ಸಾಮಾಜಿಕ ಪರಿಸ್ಥಿತಿಗೆ ಅನುಗುಣವಾಗಿ ‘1 ಎ’ ನಲ್ಲಿ ಇರಿಸಲಾಗಿದೆ. ಪ್ರವರ್ಗ 1 ಹಾಗೂ ‘2 ಎ’ನಲ್ಲಿದ್ದ ಜಾತಿಗಳನ್ನು ಮರು ವರ್ಗೀಕರಿಸಿ, ಕೆಲವು ಜಾತಿಗಳನ್ನು ಒಳಗೊಂಡ ‘1 ಬಿ’ ಪ್ರವರ್ಗ ಸೃಜಿಸಲಾಗಿದೆ. ‘2 ಎ’ನಲ್ಲಿದ್ದ ಕೆಲವು ಜಾತಿಯವರನ್ನು ‘1 ಬಿ’ಯಡಿ ತರಲಾಗಿದೆ. ಹಿಂದುಳಿದ ಜಾತಿಯವರನ್ನು ‘1 ಬಿ’ಯಲ್ಲಿ ಸೇರಿಸಲಾಗಿದ್ದು, ಇವರಲ್ಲಿ ಅಲೆಮಾರಿ, ಅರೆ ಅಲೆಮಾರಿ ಹಾಗೂ ಆ ಗುಣಲಕ್ಷಣವುಳ್ಳ ಜಾತಿಗಳು ಇವೆ. ಕುಶಲಕರ್ಮಿ ಹಾಗೂ ಕುಲಕಸುಬು ಆಧಾರಿತ ವೃತ್ತಿಪರ ಸಮುದಾಯಗಳನ್ನು ‘2 ಎ’ ನಲ್ಲೇ ಇರಿಸಲಾಗಿದೆ.

ಪ್ರವರ್ಗ 1ಕ್ಕೆ ಇದ್ದ ಮೀಸಲಾತಿಯನ್ನು ಶೇ 4ರಿಂದ 6ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ‘2 ಎ’ಗೆ ಶೇ 15ರಷ್ಟಿದ್ದ ಮೀಸಲಾತಿಯನ್ನು ‘1 ಬಿ’ ಹಾಗೂ ‘2 ಎ’ಗೆ ಮರು ಹಂಚಿಕೆ ಮಾಡಲಾಗಿದೆ. ಹೀಗೆ ಮಾಡುವಾಗ, ‘1 ಬಿ’ಗೆ ಶೇ 12 ಹಾಗೂ ‘2 ಎ’ಗೆ ಶೇ 10ರಷ್ಟು ಹಂಚಿಕೆ ಮಾಡಲಾಗಿದೆ. ಇದರಿಂದಾಗಿ ಹಿಂದುಳಿದ ಜಾತಿ( 2 ಎ)ಯವರಿಗೆ ಇದ್ದ ಶೇ 15ರ ಮೀಸಲಾತಿ ಶೇ 22ಕ್ಕೆ ಏರಿಕೆಯಾಗಿದೆ.

ಲಿಂಗಾಯತ-ಒಕ್ಕಲಿಗರಿಗೂ ಲಾಭ

ರಾಜ್ಯದಲ್ಲಿ ರಾಜಕೀಯವಾಗಿ ಪ್ರಬಲವಾಗಿರುವ ಎರಡು ಸಮುದಾಯವರಿಗೆ ಮೀಸಲಾತಿ ಪ್ರಮಾಣವನ್ನು ತಲಾ ಶೇ 3ರಷ್ಟು ಹೆಚ್ಚಿಸುವಂತೆ ಆಯೋಗವು ತನ್ನ ಶಿಫಾರಸಿನಲ್ಲಿ ಹೇಳಿದೆ.

‘3 ಬಿ’ ಪಟ್ಟಿಯಲ್ಲಿರುವ ಲಿಂಗಾಯತ ಹಾಗೂ ಅದರ ಉಪ ಜಾತಿಗಳ ಒಟ್ಟು ಜನಸಂಖ್ಯೆ 81 ಲಕ್ಷದಷ್ಟಿದ್ದು, ಅದರಲ್ಲಿ ಲಿಂಗಾಯತರ ಸಂಖ್ಯೆ 66 ಲಕ್ಷದಷ್ಟಿದೆ. ಮೀಸಲಾತಿ ಪ್ರಮಾಣ ಶೇ 5ರಷ್ಟಿದೆ. ಜನಸಂಖ್ಯೆಗೆ ಅನುಗುಣವಾಗಿ ಅದನ್ನು ಶೇ 8ಕ್ಕೆ ಏರಿಸಲು ಶಿಫಾರಸು ಮಾಡಲಾಗಿದೆ.

‘3 ಎ’ ಪಟ್ಟಿಯಲ್ಲಿರುವ ಒಕ್ಕಲಿಗ ಮತ್ತು ಅದರ ಉಪ ಜಾತಿಗಳ ಒಟ್ಟು ಜನಸಂಖ್ಯೆ 72 ಲಕ್ಷದಷ್ಟಿದೆ. ಒಕ್ಕಲಿಗರು 61.50 ಲಕ್ಷದಷ್ಟಿದ್ದಾರೆ. ಒಟ್ಟು ಮೀಸಲಾತಿ ಶೇ 4ರಷ್ಟಿದೆ. ಅದನ್ನು ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಲಾಗಿದೆ.

ಮುಸ್ಲಿಮರ ಮೀಸಲು ಶೇ 8ಕ್ಕೆ?

ಮುಸ್ಲಿಂ ಸಮುದಾಯದವರ ಮೀಸಲಾತಿ ಪ್ರಮಾಣವನ್ನು ಈಗಿರುವ ಶೇ 4ರಿಂದ ಶೇ 8ಕ್ಕೆ ಏರಿಸುವಂತೆ ಜಯಪ್ರಕಾಶ ಹೆಗ್ಡೆ ಆಯೋಗವು ತನ್ನ ಶಿಫಾರಸಿನಲ್ಲಿ ಹೇಳಿದೆ. ಮುಸ್ಲಿಂ ಸಮುದಾಯವರ ಜನಸಂಖ್ಯೆಯು ಒಂದು ಜಾತಿಯಾಗಿ 75.27 ಲಕ್ಷದಷ್ಟಿದೆ. ಪರಿಶಿಷ್ಟ ಜಾತಿಯವರ ಸಂಖ್ಯೆಯ 1 ಕೋಟಿಗೂ ಹೆಚ್ಚಿದ್ದು, ಈ ಸಮುದಾಯವರನ್ನು ಬಿಟ್ಟರೆ ಏಕ ಜಾತಿಯಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವುದು ಮುಸ್ಲಿಂ ಸಮುದಾಯವರೇ ಆಗಿದ್ದಾರೆ. ಹೀಗಾಗಿ ಮೀಸಲಾತಿ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ.

17ಕ್ಕೆ ಜಾತಿಗಣತಿ ಭವಿಷ್ಯ?

ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ (ಜಾತಿ ಗಣತಿ) ಕೊನೆಗೂ ‘ಮೋಕ್ಷ’ ಸಿಗುವ ಲಕ್ಷಣಗಳು ಕಾಣಿಸಿದ್ದು, ಇದೇ 17ರ ಗುರುವಾರ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ಭವಿಷ್ಯ ನಿರ್ಧಾರವಾಗಲಿದೆ.

prajaprabhat

Recent Posts

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

46 minutes ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

50 minutes ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

57 minutes ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

59 minutes ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

1 hour ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

1 hour ago