ಬೆಂಗಳೂರು.18.ಏಪ್ರಿಲ್.25:- ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆಯಾಗಿರುವ ಕ್ರೀಡಾಪಟುಗಳು 2024-25ನೇ ಸಾಲಿನ. ನಿರ್ವಹಿಸಬೇಕಾದ ಈ ಕೆಳಕಂಡ ವಿಷಯಗಳ ಬಗ್ಗೆ ಕ್ರಮವಹಿಸಲು ಸೂಚಿಸಿದೆ.
ಜಿಲ್ಲಾ ಮಟ್ಟದ ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಮಾತ್ರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘವು ಈಗಾಗಲೇ ಜಿಲ್ಲಾವಾರು ಬಿಡುಗಡೆ ಮಾಡಿರುವ Online Link ನಲ್ಲಿ ಕೇಳಲಾಗಿರುವ ಸಂಪೂರ್ಣ ಮಾಹಿತಿಯನ್ನು ಭರ್ತಿಮಾಡಿ ಹೆಸರು ನೋಂದಾಯಿಸಿಕೊಳ್ಳುವುದು.
Online Link ನಲ್ಲಿ ಕೇಳಲಾಗಿರುವ ತಮ್ಮ ಟ್ರಾಕ್ಟ್ ಅಳತೆಯನ್ನು ನಮೂದಿಸುವುದು.
ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾಗ್ಯೂ, ಭಾಗವಹಿಸಲಿರುವ ಎಲ್ಲಾ ಕ್ರೀಡೆಗಳನ್ನು ಹೆಸರನ್ನು ನಮೂದಿಸಿ ಒಂದು ಬಾರಿ ಮಾತ್ರ Online ನಲ್ಲಿ ನೋಂದಾಯಿಸಿಕೊಳ್ಳುವುದು.
Online ಹೊರತುಪಡಿಸಿ ಇತರೆ ಮಾರ್ಗಗಳಿಂದ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿರುವುದಿಲ್ಲ. ಹಾಗೂ ಕ್ರೀಡಾಕೂಟ ನಡೆಯುವ ಸ್ಥಳದಲ್ಲಿ ಹೆಸರು ನೋಂದಾಯಿಸಿಕೊಳ್ಳುವುದಿಲ್ಲ.
ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ದಿನಾಂಕ: 25-04-2025 ರೊಳಗೆ ಹೆಸರುಗಳನ್ನು Online ನೋಂದಾಯಿಸಿಕೊಳ್ಳದಿದ್ದಲ್ಲಿ ಅಂತಹ ನೌಕರರನ್ನು ಕ್ರೀಡಾಕೂಟಕ್ಕೆ ಪರಿಗಣಿಸಲಾಗುವುದಿಲ್ಲವೆಂದು ಸ್ಪಷ್ಟವಾಗಿ ತಿಳಿಸಿದೆ.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…