ರಾಜ್ಯ ಸರ್ಕಾರದಿಂದ ‘ಅಡುಗೆ ಸಿಬ್ಬಂದಿಗಳಿಗೆ’ ಗೌರವಧನ 1000 ರೂ.ಹೆಚ್ಚಳ ಮಾಡಿ ಆದೇಶ.!

ಬೆಂಗಳೂರು.26.ಮೇ.25:- 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು 1000 ರೂಗಳಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಕ್ರಮಾಂಕ-1ರ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ.ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು.”

ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ನೀಡಲಾಗುವ ಮಾಸಿಕ ಗೌರವ ಸಂಭಾವನೆಯನ್ನು 2022-23ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ತಲಾ ರೂ 1000/- (ಒಂದು ಸಾವಿರ ರೂಪಾಯಿಗಳು ಮಾತ್ರ) ಗಳಷ್ಟು ಹೆಚ್ಚಿಸಿ ಆದೇಶಿಸಲಾಗಿದೆ.

ಮೇಲೆ ಓದಲಾದ ಕ್ರಮಾಂಕ (3)ರ ಆರ್ಥಿಕ ಇಲಾಖೆ ಅನಧಿಕೃತ ಟಿಪ್ಪಣಿಯಲ್ಲಿ (Budget Advice) 2025-26ನೇ ಸಾಲಿನ ಆಯವ್ಯಯ ಕಂಡಿಕೆ-109ರ ಘೋಷಣೆಯನ್ನು ಮುಂದುವರೆದ ಮಾರ್ಪಾಡಿತ ಯೋಜನೆಯೆಂದು ಪರಿಗಣಿಸಲಾಗಿದ್ದು, ಸದರಿ ಕಂಡಿಕೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಅನುದಾನವನ್ನು ರಾಜ್ಯ ಯೋಜನೆ ಕ್ಷೀರಭಾಗ್ಯ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ: 2202-00-101-0-18 (2202-01-196-1-02) ಯ ಉಪ ಶೀರ್ಷಿಕೆ: 324 ರಡಿ ನಿಗದಿಯಾಗಿರುವ ರೂ.41206.31 ಲಕ್ಷಗಳ ಅನುದಾನದಿಂದ ಭರಿಸುವಂತೆಯೂ ಹಾಗೂ ಸದರಿ ಕಂಡಿಕೆಯನ್ನು ಅನುಷ್ಠಾನ ಮಾಡಲು ರೂ.11300.00 ಲಕ್ಷಗಳ ಅನುದಾನವನ್ನು ನಿಗದಿಪಡಿಸಲಾಗಿದೆ

ಮೇಲೆ ಓದಲಾದ ಕ್ರಮಾಂಕ (4)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಪ್ರಸ್ತಾವನೆಯಲ್ಲಿ, 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯನ್ನು ಅನುಷ್ಠಾನಗೊಳಿಸುವ ಸಂಬಂಧ, ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 1.26.103 ಅಡುಗೆ ಸಿಬ್ಬಂದಿಗಳ (ಮುಖ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ಒಳಗೊಂಡಂತೆ) ಅಡುಗೆ ಸಿಬ್ಬಂದಿಗಳ ಮಾಸಿಕ ಸಂಭಾವನೆಯನ್ನು ರೂ.1000/- ಗಳಷ್ಟು (ಒಂದು ಸಾವಿರ ರೂಪಾಯಿಗಳು ಮಾತ್ರ) ಹೆಚ್ಚಿಸಲು ರೂ.1261.03 ಲಕ್ಷಗಳ ಅನುದಾನ ಅಗತ್ಯವಿದ್ದು, ಈ ಅನುದಾನವನ್ನು ರಾಜ್ಯ ಯೋಜನೆ ಕ್ಷೀರಭಾಗ್ಯ : 2202-00-101-0-18 (2202-01-196-1-02) 2 ಅನುದಾನದಿಂದ ಭರಿಸಿಕೊಂಡು ಸದರಿ ಆಯವ್ಯಯ ಕಂಡಿಕೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ಕೋರಿರುತ್ತಾರೆ.

ಮೇಲೆ ಓದಲಾದ ಕ್ರಮಾಂಕ (5)ರ ಆರ್ಥಿಕ ಇಲಾಖೆಯ ಟಿಪ್ಪಣಿಯಲ್ಲಿ 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-109ರ ಯೋಜನೆಯನ್ವಯ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ನೇಮಕಾತಿಗೊಂಡು ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಾಸಿಕ ಗೌರವ ಸಂಭಾವನೆಯನ್ನು ತಲಾ ರೂ.1000/-ಗಳಿಗೆ ಹೆಚ್ಚಿಸಲು ಸಹಮತಿಯನ್ನು ನೀಡಲಾಗಿದೆ.

ಈ ಪ್ರಸ್ತಾವನೆಯಲ್ಲಿ ವಿವರಿಸಲಾದ ಮೇಲ್ಕಂಡ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ. ಈ ಕೆಳಕಂಡಂತೆ ಆದೇಶಿಸಿದೆ.

2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರಿಗೆ ನೀಡಲಾಗುವ ಮಾಸಿಕ ಗೌರವ ಸಂಭಾವನೆಯನ್ನು ದಿನಾಂಕ: 01.06.2025 ಜಾರಿಗೆ ಬರುವಂತೆ ತಲಾ ರೂ.1000/- (ಒಂದು ಸಾವಿರ ರೂಪಾಯಿಗಳು ಮಾತ್ರ) ಗಳಷ್ಟು ಹೆಚ್ಚಿಸಿ ಪಾವತಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ಅನುಮತಿ ನೀಡಿ ಆದೇಶಿಸಿದೆ.

ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪಾಲಿಸಬೇಕಾಗಿರುವ ಷರತ್ತುಗಳು:-

1) 2025-26 ಆಯವ್ಯಯ ಭಾಷಣದಲ್ಲಿನ ಕಂಡಿಕೆ-109ರ ಘೋಷಣೆಯ ಕಾರ್ಯಕ್ರಮವನ್ನು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿ ಹಾಗೂ ಆರ್ಥಿಕ ಇಲಾಖೆಯ ಸಹಮತಿಯಂತೆ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡತಕ್ಕದ್ದು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

4 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago