04/08/2025 12:50 PM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’59 ತಹಶೀಲ್ದಾರ್’ ವರ್ಗಾವಣೆ

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’59 ತಹಶೀಲ್ದಾರ್’ ವರ್ಗಾವಣೆ

Facebook
X
WhatsApp
Telegram

ಬೆಂಗಳೂರು.16.ಜುಲೈ.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 59 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ಹೊಸನಗರ ತಹಶೀಲ್ದಾರ್ ಆಗಿದ್ದಂತ ರಶ್ಮೀ.ಹೆಚ್ ಅವರನ್ನು ಸಾಗರ ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ.

ಈ ಹುದ್ದೆಯಲ್ಲಿದ್ದಂತ ಚಂದ್ರಶೇಖರ್ ನಾಯ್ಕ್ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ.

ಇನ್ನೂ ಚಿದ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರು ಆಗಿದ್ದಂತ ಸಿದ್ದೇಶ್.ಎಂ ಅವರನ್ನು ಹಿರಿಯೂರು ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಸಿ.ರಾಜೇಶ ಕುಮಾರ್ ಅವರನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ.

ಸ್ಥಳ ನಿರೀಕ್ಷೆಯಲ್ಲಿದ್ದಂತ ಕೆ.ಎಲ್ ನರೇಂದ್ರ ಬಾಬು ಅವರನ್ನು ಚಿಕ್ಕಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಆಗಿ, ಕೆ.ಅಶ್ವಥನಾರಾಯಣ ಅವರನ್ನು ಮಾಲೂರು ತಾಲ್ಲೂಕು ತಹಶೀಲ್ದಾರ್ ಆಗಿ, ಪಿ.ಪರಶುರಾಮ್ ಅವರನ್ನು ರಾಯಚೂರು ತಾಲ್ಲೂತು ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ.

ಡಿ.ಪಾಂಡುರಂಗ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಗ್ರೇಡ್-2 ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಅಶ್ವಿನಿ.ಎಸ್ ಅವರನ್ನು ಹಾಸನ ಜಿಲ್ಲೆಯ ಆಲೂರು ತಾಲ್ಲೂಕು ಗ್ರೇಡ್-2 ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!