ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಸರ್ಜರಿ: ಎಪಿಸಿ, ಮತ್ತು ಸಿಪಿಸಿ ವರ್ಗಾವಣೆ

ಬೆಂಗಳೂರು.25.ಜುಲೈ.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ  ಎಪಿಸಿ ಹಾಗೂ  ಪಿಸಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಸಂಬಂಧ ಪೊಲೀಸ್ ಇಲಾಖೆಯಿಂದ ವರ್ಗಾವಣೆ ಆದೇಶ ಹೊರಡಿಸಿದ್ದು, 24 ಎಪಿಸಿ ಅವರುಗಳನ್ನು ಸ್ವಂತ ಕೋರಿಕೆಯ ಮೇರೆಗೆ ಸೇವಾ ಜ್ಯೇಷ್ಠತೆಯನ್ನು ಬಿಟ್ಟುಕೊಡುವ ಷರತ್ತಿಗೊಳಪಟ್ಟು ಅಂತರ್ ಜಿಲ್ಲಾ ವರ್ಗಾವಣೆ ಮಾಡಲಾಗಿದೆ ಎಂದಿದೆ.

ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿಗಳ ಅಂತರ ಜಿಲ್ಲಾ ವರ್ಗಾವಣೆಗಾಗಿ ಸರ್ಕಾರವು ಉಲ್ಲೇಖ-1 ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ (ವರ್ಗಾವಣೆ) (ವಿಶೇಷ ನಿಯಮಗಳು 2022)ನ್ನು ಹೊರಡಿಸಿದ್ದು, ಸದರಿ ವರ್ಗಾವಣಾ ನಿಯಮಗಳನ್ನು ಆಧರಿಸಿ ಎಲ್ಲಾ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ವರ್ಗಾವಣೆ ಅರ್ಜಿಗಳನ್ನು ಈ ಕುರಿತಂತೆ ಜಾರಿಗೊಳಿಸಲಾದ ವರ್ಗಾವಣೆ ಪೋರ್ಟಲ್‌ನಲ್ಲಿಯೇ ಸಲ್ಲಿಸಲು ಉಲ್ಲೇಖ-2 ರಲ್ಲಿ ತಿಳಿಯಪಡಿಸಲಾಗಿರುತ್ತದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ವರ್ಗಾವಣೆ) (ವಿಶೇಷ) ನಿಯಮಗಳು 2022 ರಲ್ಲಿ ನಿರ್ಧಿಷ್ಟಪಡಿಸಿರುವ ನಿಬಂಧನೆಗಳನ್ನು ಒಳಗೊಂಡಂತೆ ಹಾಗೂ ಉಲ್ಲೇಖ-3 ರ ಸರ್ಕಾರದ ಆದೇಶದಲ್ಲಿ ಸೂಚಿಸಿರುವ ಮಾರ್ಗಸೂಚಿಯನ್ವಯ ಅಂತರ ಜಿಲ್ಲಾ ಘಟಕ ವರ್ಗಾವಣೆ ಕುರಿತಂತೆ ಇಲಾಖೆಯಿಂದ ರೂಪಿಸಲಾಗಿರುವ ಅಧಿಕೃತ ಆನ್‌ಲೈನ್ ಪೋರ್ಟಲ್ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಸ್ವಂತ ಕೋರಿಕೆ ಮೇರೆಗೆ, ಸ್ವಂತ ಖರ್ಚಿನಲ್ಲಿ ಹಾಗೂ ಸೇವಾ ಜೇಷ್ಠತೆಯನ್ನು ಬಿಟ್ಟುಕೊಡುವ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಸಾಮಾನ್ಯ ವರ್ಗದ ಪ್ರಕರಣದಡಿ 10 ವರ್ಷಗಳ ಮೇಲ್ಪಟ್ಟು ಸೇವೆಯನ್ನು ಪೂರ್ಣಗೊಳಿಸಿರುವ ಈ ಕೆಳಗೆ ನಮೂದಿಸಿರುವ ಎಪಿಸಿ ರವರುಗಳನ್ನು ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾಯಿಸಿ ಆದೇಶಿಸಲಾಗಿದೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

2 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

7 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

8 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

8 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

8 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago