ಬೆಂಗಳೂರು.14.ಫೆ.25:-ರಾಜ್ಯ ಸರ್ಕಾರದಿಂದ ನೇರವಾಗಿ ನೇಮಕಗೊಂಡ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆ ಜಾರಿಗೆ ತರುವ ಅಥವಾ ವಿಸ್ತರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ:30.01.2025 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ತಿರ್ಮಾನಿಸಿದಂತೆ, ಅಧಿಕಾರಿಗಳು/ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ, ಈ ಕೆಳಗಿನಂತೆ ಆದೇಶಿಸಲಾಗಿದೆ.
👉 ವಿವಿಧ ಬ್ಯಾಂಕುಗಳು ಒದಗಿಸುವ “ಸಂಬಳ ಪ್ಯಾಕೇಜ್ಗಳ* ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿಗಳು / ನೌಕರರಿಗೆ (ಸರ್ಕಾರಿ /ಸರ್ಕಾರಿ ಸಂಸ್ಥೆಗಳು, ಇತ್ಯಾದಿ) ಕಡ್ಡಾಯಗೊಳಿಸುವುದು.
👉ಬ್ಯಾಂಕ್ಗಳು/ಅಂಚೆ ಕಚೇರಿಗಳು ನೀಡುವ PMJJBY ಮತ್ತು PMSBY ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು / ನೌಕರರನ್ನು ಪ್ರೋತ್ಸಾಹಿಸುವುದು.
👉ಬ್ಯಾಂಕ್ಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು / ನೌಕರರನ್ನು ಪ್ರೋತ್ಸಾಹಿಸುವುದು.
ಈ ಹಿನ್ನೆಲೆಯಲ್ಲಿ ಮತ್ತು ಕರ್ನಾಟಕ ಸರ್ಕಾರವು ಸರ್ಕಾರಿ ಮತ್ತು ಇತರೆ ಸರ್ಕಾರಿ ಅಂಗ ಸಂಸ್ಥೆಗಳ ಉದ್ಯೋಗಿಳಿಗೆ ವಿವಿಧ ಕಲ್ಯಾಣ ಕ್ರಮಗಳನ್ನು ನೀಡಿದ್ದು, ಈಗಾಗಲೇ ಜಾರಿಯಲ್ಲಿರುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲುಪಡಿಸಲು ಮತ್ತು ಸುಗಮಗೊಳಿಸುವ ಸಲುವಾಗಿ ಸರ್ಕಾರದಿಂದ ನೇರವಾಗಿ/ಪರೋಕ್ಷವಾಗಿ ನೇಮಕಗೊಂಡಿರುವ ವಿವಿಧ ಅಧಿಕಾರಿಗಳು / ನೌಕರರಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರುವ ಕುರಿತು ಚರ್ಚಿಸಲು ಪ್ರಮುಖ ಬ್ಯಾಂಕುಗಳ ಅಧಿಕಾರಿಗಳೊಂದಿಗೆ ಹಾಗೂ ರಾಜ್ಯದ ಪ್ರಮುಖ ನೌಕರರ ಸಂಘಗಳ ಅಧ್ಯಕ್ಷರು/ಪ್ರತಿನಿಧಿಗಳೊಂದಿಗೆ ಸರ್ಕಾರದ ಕಾರ್ಯದರ್ಶಿ (ವಿತ್ತೀಯ ಸುಧಾರಣೆ) ರವರ ಅಧ್ಯಕ್ಷತೆಯಲ್ಲಿ ದಿನಾಂಕ 17.02.2025ರಂದು ಮಧ್ಯಾಹ್ನ 4.00 ಗಂಟೆಗೆ, ಕೊಠಡಿ ಸಂಖ್ಯೆ: 317, ವಿಕಾಸಸೌಧ, ಬೆಂಗಳೂರು ರಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಸದರಿ ಸಭೆಗೆ ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗುವಂತೆ ಕೋರಿದೆ.
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…
ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…
ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…
ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…