ರಾಜ್ಯ ಆಡಳಿತಕ್ಕೆ ಸಾಕಷ್ಟು ಸುಧಾರಣೆ ತರುವ ಹಿನ್ನೆಲೆಯಲ್ಲಿ 23 ಇಲಾಖೆಗಳಲ್ಲಿ 15 ಸಾವಿರ ಹುದ್ದೆಗಳು ಖಾಲಿಯಿದ್ದು, ಆ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವಂತೆ ಆಡಳಿತ ಸುಧಾರಣಾ ಆಯೋಗ ಸರಕಾರಕ್ಕೆ ಶಿಫಾರಸು ಮಾಡಿದೆ. ಇಲಾಖೆಗಳಲ್ಲಿ 15 ಸಾವಿರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅಧ್ಯಕ್ಷತೆಯ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ತನ್ನ ಎಂಟನೇ ವರದಿಯಲ್ಲಿ ಶಿಫಾರಸು ಮಾಡಿದೆ.
ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಂಟನೇ ವರದಿಯನ್ನು ಸಲ್ಲಿಸಿದೆ. ಈ ವರದಿಯಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ ಉಲ್ಲೇಖಿಸಿರುವ ದೇವಾಲಯಗಳಲ್ಲಿರುವ ಆಯೋಗ, ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಶಿಫಾರಸು ಮಾಡಿದೆ.
23 ಇಲಾಖೆಗಳಲ್ಲಿ ಒಟ್ಟು 21,442 ಹುದ್ದೆಗಳು ಮಂಜೂರಾಗಿದ್ದು, 15000 ಖಾಲಿ ಹುದ್ದೆಗಳನ್ನು ಗುರುತಿಸಲಾಗಿದೆ. ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ಕಿರಿಯ ತರಬೇತಿ ಅಧಿಕಾರಿಗಳ 1521 ಹುದ್ದೆ, ವೈದ್ಯಕೀಯ ಕಾಲೇಜ್ ಗಳ ಕಿರಿಯ ವೈದ್ಯರು 1080, ವೈದ್ಯಕೀಯ ಕಾಲೇಜ್ ನರ್ಸಿಂಗ್ ಅಧಿಕಾರಿಗಳು 1397, ಪಶು ಸಂಗೋಪನಾ ಇಲಾಖೆಯಲ್ಲಿ 1043 ವೈದ್ಯರು, ಕೃಷಿ ಇಲಾಖೆ ಎಎಒ ಹುದ್ದೆಗಳು 1870, ಕೃಷಿ ಅಧಿಕಾರಿ 732, ಸಹಕಾರ ಇಲಾಖೆಯಲ್ಲಿ 453 ಸೇರಿ ಒಟ್ಟು 15000 ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಶಿಫಾರಸು ಮಾಡಲಾಗಿದೆ ತಿಳಿಸಿದ್ದಾರೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…