ರಾಜ್ಯ ಸರ್ಕಾರದಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು.15.ಜೂನ್.25:- ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ  ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪಸಂಖ್ಯಾತ ಮತ್ತು ದೈಹಿಕ ವಿಕಲಚೇತನರ ಶೇ.24.10%, 7.25% ಮತ್ತು 5% ಯೋಜನೆಯಡಿಯಲ್ಲಿ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ಜಗಳೂರು ಪಟ್ಟಣ ಪಂಚಾಯಿತಿಯ ಕಚೇರಿಯಲ್ಲಿ ಪಡೆದು ಜೂನ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಮುಖ್ಯಾಧಿಕಾರಿ ಲೋಕ್ಯಾನಾಯ್ಕ.ಸಿ ತಿಳಿಸಿದ್ದಾರೆ.

ಅರ್ಚಕರಿಗೆ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

ಜೈನ್ ಸಮುದಾಯ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವಧನ ಪಡೆಯಲಿಚ್ಚಿಸುವ ಅರ್ಹ ಫಲಾನುಭವಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಫಲಾನುಭವಿಗಳು ಜಿಲ್ಲೆಯ ಜೈನ್ ಬಸದಿಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಸಂಘಗಳ ನೊಂದಣಿ ಕಾಯ್ದೆ ಅಥವಾ ಇತರೆ ಸಂಬಂಧಪಟ್ಟ ಕಾಯ್ದೆ ಅನ್ವಯ ನೊಂದಣಿಯಾದ ಪ್ರಧಾನ ಅರ್ಚಕ, ಗ್ರಂಥಿಗೆ ಮಾಸಿಕ ರೂ.6000/, ಸಹಾಯಕ ಗ್ರಂಥಿ, ಅರ್ಚಕರಿಗೆ ಮಾಸಿಕ ರೂ.5000/ ಗೌರವಧನ ನೀಡಲಾಗುವುದು. ಅರ್ಹ ಫಲಾನುಭವಿಗಳು ನಿಗದಿತ ಅರ್ಜಿಯೊಂದಿಗೆ ಅರ್ಚಕ, ಗ್ರಂಥಿಗಳ ಭಾವಚಿತ್ರ, ಬ್ಯಾಂಕ್ ಖಾತೆ ಮತ್ತು ಆಧಾರ್ ಪ್ರತಿ, ಹುದ್ದೆಗೆ ಸಂಬಂಧಪಟ್ಟ ಧಾರ್ಮಿಕ ವಿದ್ಯಾರ್ಹತೆ ಕುರಿತು ದಾಖಲೆ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ಸ್ಥಳೀಯ ತಹಶೀಲ್ದಾರ್ ಅವರಿಂದ ವಾಸಸ್ಥಳ ದೃಢೀಕರಣ ಹಾಗೂ ಸಂಸ್ಥೆಯವರು ಅರ್ಚಕರ ಮಾಹೆವಾರು ಕರ್ತವ್ಯದ ಹಾಜರಾತಿ, ಸೇವಾ ಪ್ರಮಾಣ ಪತ್ರ ನಿಗದಿತ ನಮೂನೆಯಲ್ಲಿ ಜಿಲ್ಲಾಡಳಿತ ಭವನದಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

8 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

8 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

8 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

8 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

8 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

9 hours ago