13/06/2025 7:06 PM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಎ ಚೀಂಕೋಡೇ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಎ ಚೀಂಕೋಡೇ

Facebook
X
WhatsApp
Telegram

01.ಜಿ.25.ಬೀದರ:-  ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ತಿಳಿಸಿದರು.


ಅವರು ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳಿಂದ ಬಡವರು, ಕೂಲಿ ಕಾರ್ಮಿಕರು ಹಾಗೂ ನಿರುದ್ಯೋಗ ಯುವಕರ ಬದುಕಿಗೆ ಆಸರೆಯಾಗಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು. 


ಜಿಲ್ಲೆಯಾದ್ಯಂತ ಅನ್ನಭಾಗ್ಯ ಯೋಜನೆಯಡಿ ಆಗಸ್ಟ್.2024 ರವರೆಗೆ 343703 ಪಡಿತರ ಚೀಟಿಗಳಿದ್ದು, ರೂ. 188019490 ಕೋಟಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಅಕ್ಟೋಬರ್-2024 ರವರೆಗೆ 335429 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಒಟ್ಟು ರೂ. 9298820000 ಗಳನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ.

ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 376084 ಫಲಾನುಭವಿಗಳಿದ್ದು, ಒಟ್ಟು 231.12 ಕೋಟಿ ರೂ. ವೆಚ್ಚ ಭರಿಸಲಾಗಿದೆ. ಶಕ್ತಿ ಯೋಜನೆಯಡಿಯಲ್ಲಿ ಒಟ್ಟು 62337710 ಅಭ್ಯರ್ಥಿಗಳು ಉಚಿತವಾಗಿ ಪ್ರಯಾಣಿಸುವುದರ ಮೂಲಕ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಹಾಗೂ ಯುವನಿಧಿ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 5395 ಪದವಿ ಹಾಗೂ 81 ಡಿಪ್ಲೋಮಾ ಪೂರ್ಣಗೊಳಿಸಿದ ನೋಂದಾಯಿತ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದು, ಒಟ್ಟು ರೂ. 93234000 ಗಳನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದು ಮಾಹಿತಿ ನೀಡಿದರು.


ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕರಿಗಳಾದ ಡಾ.ಗಿರೀಶ ಬದೋಲೆ ಮಾತನಾಡಿ, ಪ್ರಗತಿ ಪರಿಶೀಲನಾ ಸಭೆಗೆ ಸಂಬಂಧಪಟ್ಟ ಯೋಜನೆಗಳ ಅಧಿಕಾರಿಗಳು ಗೈರು ಹಾಜರಾಗಿ ಸರಿಯಾದ ಮಾಹಿತಿ ನೀಡದ ಅಧಿಕಾರಿಗಳಿಗೆ ನೋಟಿಸ ನೀಡಲು ಸೂಚಿಸಿದರು.


ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿಗಳಾದ ಕಿಶೋರ ದುಬೆ, ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪೂರ್ಜಾ ಚಾರ್ಜ, ಲತಾ ಹಾರಕೂಡೆ, ಮಾರುತಿ ಬಂಗಾರೆ, ಮಹೆರೋಜ್ ಖಾನ್, ಬೀದರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಚಂದ್ರಶೇಖರ ಫೂಲೆಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ, ಜೇಸ್ಕಾಂ ಕಾರ್ಯಪಾಲಕ ಅಭಿಯಂತರರು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿಗಳು ಮತ್ತು ತಾಲ್ಲೂಕ ಮಟ್ಟದ ಗ್ಯಾರಂಟಿ ಸಮಿತಿ ಸದಸ್ಯರುಗಳು ಸೇರಿದಂತೆ ಎಲ್ಲಾ ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬೀದರ ಜಿಲ್ಲೆಯ ಎಲ್ಲಾ ಎಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು ಇದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!