ರಾಜ್ಯ ಸರ್ಕಾರಿ ನೌಕರರ ಮತ್ತು ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ,ಆದೇಶ.!

ಬೆಂಗಳೂರು.20.ಜೂನ್.25:- ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025, ದಿನಾಂಕ: 12.05.2025ರನ್ವಯ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡಿರುವ ಅಂಶವನ್ನು ಪ್ರತ್ಯೇಕ ವರ್ಗಾವಣೆ ನಿಯಮಗಳನ್ನು ಹೊಂದಿರುವ ಇಲಾಖೆಗಳಿಗೂ ಅನ್ವಯಿಸುವಂತೆ ಕೋರಿರುತ್ತಾರೆ.

ಪರಿಶೀಲಿಸಲಾಗಿ, 2025-26ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ವರ್ಗಾವಣೆಗಳನ್ನು, ವರ್ಗಾವಣಾ ಮಾರ್ಗಸೂಚಿಗಳನ್ನೊಳಗೊಂಡ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025, ದಿನಾಂಕ: 12.05.2025 ರನ್ನಯ ನಿಯಂತ್ರಿಸಲಾಗುತ್ತಿದೆ. ಸದರಿ ಆದೇಶದ ಕಂಡಿಕೆ 8 (5)ರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ಉಲ್ಲೇಖಿಸಲಾಗಿದ್ದು, ಸದರಿ ಉಪಬಂಧವನ್ನು ಈ ಕೆಳಕಂಡಂತೆ ಉದ್ದರಿಸಲಾಗಿದೆ .

8(5) ಒಂದು ವೇಳೆ ಸರ್ಕಾರಿ ನೌಕರನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ಆ ಪದಾಧಿಕಾರದ ಅವಧಿ ಮುಗಿಯುವರೆಗೆ ವರ್ಗಾಯಿಸಬಾರದು. ಒಂದು ವೇಳೆ ಪದಾಧಿಕಾರದ ಅವಧಿ ಮುಗಿದ ನಂತರ 3 ತಿಂಗಳಲ್ಲಿ ಚುನಾವಣೆಗಳು ನಡೆಯದಿದ್ದಲ್ಲಿ ಅಂತಹವರನ್ನು ವರ್ಗಾಯಿಸಬಹುದು. ಒಂದು ವೇಳೆ ಅವನು ಮರುಚುನಾಯಿತನಾದಲ್ಲಿ 2ನೇ ಅವಧಿಗೆ ಮಾತ್ರ ಆತನನ್ನು ಮುಂದುವರೆಸಬಹುದು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ರಾಜ್ಯ ಮಟ್ಟದ ಸಂಘಟನೆಯಾಗಿದ್ದು, ಸದರಿ ಸಂಘಕ್ಕೆ ಸರ್ಕಾರದ ಮಾನ್ಯತೆಯನ್ನು ನೀಡಲಾಗಿರುತ್ತದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ವರ್ಗಾವಣೆ ಮಾರ್ಗಸೂಚಿಗಳು ಪ್ರತ್ಯೇಕ ಅಧಿನಿಯಮ/ನಿಯಮಗಳು ಅನ್ವಯವಾಗುವ ಕೆಲವು ಇಲಾಖೆಗಳನ್ನು ಹೊರತುಪಡಿಸಿ, ಇತರ ಇಲಾಖೆಗಳ ನೌಕರರ ವರ್ಗಾವಣೆಗಳಿಗೆ ಅನ್ವಯವಾಗುತ್ತವೆ. ಆದಾಗ್ಯೂ, ಯಾವುದೇ ನೌಕರನು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ಕಂಡಿಕೆ 8(5)ರ ಪ್ರಕಾರ ವರ್ಗಾವಣೆಯಿಂದ ವಿನಾಯಿತಿ ನೀಡಬೇಕಾಗುತ್ತದೆ.

prajaprabhat

Recent Posts

ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪೆನಿ-500 ಹುದ್ದೆಗೆ ಅರ್ಜಿ ಆಹ್ವಾನ

ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪೆನಿಯೆಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಪದವಿ ಪಾಸಾಗಿದ್ದು, ಒಂದು ಡಿಸೆಂಟ್‌ ಜಾಬ್‌ಗಾಗಿ…

22 minutes ago

ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ಖಚಿತ.

ಬೆಂಗಳೂರು .19.ಜೂನ್.25:- ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ಖಚಿತವಾಗಿದ್ದು, ಆಗಸ್ಟ್ 11, 2025 ರಿಂದ ಈ ಕಲಾಪ ಆರಂಭವಾಗಲಿದೆ.…

9 hours ago

ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲಾಗಿದ್ದು, ಆಸಕ್ತ ಶಾಲೆಗಳಿಂದ ಅರ್ಜಿ ಆಹ್ವಾನಿಸಿದೆ.

ಶಿವಮೊಗ.19.ಜೂನ್.25:- ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು  ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಯುವನೀತಿ 2012…

9 hours ago

ಕಾಲೇಜು ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆಗೆ ಕೌನ್ಸೆಲಿಂಗ್: ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶೀಘ್ರ

ಬೆಂಗಳೂರು: 2025 ನೇ ಸಾಲಿಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್‌ ನಡೆಸುವ…

10 hours ago

ಗುತ್ತಿಗೆ/ಹೊರಗುತ್ತಿಗೆ ನೌಕರರ ಅವಲಂಬಿತರಿಗೆ ಈ ಸೋಲಭ್ಯ ಜಾರಿ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ.

ಬೆಂಗಳೂರು.19.ಜೂನ್.25:- ರಾಜ್ಯ ಸರಕಾರಿ ಸೇವೆಯಲಿ ಗುತ್ತಿಗೆ/ಹೊರಗುತ್ತಿಗೆ ನೌಕರರ ಅವಲಂಬಿತರಿಗೆ ಈ ಸೋಲಭ್ಯ ಜಾರಿ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ.…

12 hours ago

ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ವಿಮಾ ಇಲಾಖೆ ವತಿಯಿಂದ Online Service ವಿಸ್ತರಣೆ, ಆದೇಶ.!

ಬೆಂಗಳೂರು.19.ಜೂನ್.25:- ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ವಿಮಾ ಇಲಾಖೆ ವತಿಯಿಂದ Online Service ವಿಸ್ತರಣೆ ಬಗ್ಗೆ ಸರ್ಕಾರದಿಂದ  ಆದೇಶ…

14 hours ago