ಬೆಂಗಳೂರು.07.ಜೂನ್.25:- ರಾಜ್ಯ ಸರ್ಕಾರದಿಂದ ಜಾತಿ ಜನಗಣತಿಯ ವರದಿಯ ಬಗ್ಗೆ ನಿರ್ಧಾರ ಕೈಗೊಳ್ಳುವಂತ ಸಲುವಾಗಿ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಿದೆ ಎನ್ನಲಾಗುತ್ತಿದೆ. ಇದಲ್ಲದೇ ಜೂನ್.19ರಂದು ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.
ರಾಜ್ಯ ಸರ್ಕಾರ ಜಾತಿ ಜನಗಣತಿಯ ವರದಿಯ ನಿರ್ಧಾರ ಬಗ್ಗೆ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆ.ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ದಿನಾಂಕ 12-06-2025ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂದಿದೆ.
ಈ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಕುರಿತಂತೆ ಚರ್ಚಿಸಲಾಗುತ್ತದೆ ಎಂಬುದಾಗಿ ತಿಳಿಸಿದೆ.
ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ
ಇನ್ನೂ ದಿನಾಂಕ 19-06-2025ರ ಗುರುವಾರದಂದು ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯನ್ನು ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿರುವಂತ ಮಯೂರ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಹೇಳಿದೆ.
ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…
ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…
ಫ್ರೆಂಚ್ ಓಪನ್ ಟೆನಿಸ್ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…
"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…
ಭಾರತದ ಮೇಲಿನ ಯಾವುದೇ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡಲಾಗುವುದು ಮತ್ತು ಭಯೋತ್ಪಾದಕರು ಮತ್ತು ಅವರ ಅಪರಾಧಿಗಳ ನಡುವೆ ಯಾವುದೇ ವ್ಯತ್ಯಾಸವನ್ನು…
ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ ಅಧಿಕಾರಿಗಳನ್ನು ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ…