ರಾಜ್ಯ ಸರ್ಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ: ಸುನಿಲ್ ಕುಮಾರ್

ಬೆಂಗಳೂರು.16.ಜೂನ್.25:-  ರಾಜ್ಯ ಸರ್ಕಾರ ಗ್ಯಾರಂಟೀ ಯೋಜನೆ ಜಾರಿಗೆ ತಂದಿ ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ ವೇತನ ಯೋಜನೆಯಡಿ 23.19 ಲಕ್ಷ ಫಲಾನುಭವಿಗಳನ್ನು ಅರ್ನಹರೆಂದು ಘೋಷಿಸಿದ್ದು, ಇವರ ಪಿಂಚಣಿಯನ್ನು ರದ್ದುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಆದೇಶ ನೀಡಿದೆ.

ಬಿಜೆಪಿ ಶಾಸಕ ವಿ.ಸುನಿಲ್‌ಕುಮಾರ್‌ ಅವರು ಆದೇಶದ ಪ್ರತಿಯನ್ನು ‘ಎಕ್ಸ್‌’ನಲ್ಲಿ ಟ್ಯಾಗ್‌ ಮಾಡಿ ಸರ್ಕಾರದ ಈ ಕ್ರಮವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಡವರ ಬಗ್ಗೆ ಕಾಳಜಿ, ಸಹಾನುಭೂತಿ ಇರಲಿ ಎಂದು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪ್ರವಚನ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಬಡವರ ಮೇಲೆ ಪ್ರಹಾರ ಮಾಡಲು ಹೊರಟಿದ್ದಾರೆ. ವಿವಿಧ ಸಾಮಾಜಿಕ ಭದ್ರತಾ ಯೋಜನೆಯ ಅಡಿ ವೃದ್ಧರು, ಅಸಹಾಯಕರು, ದುರ್ಬಲರಿಗೆ ನೀಡುತ್ತಿದ್ದ ಪಿಂಚಣಿ ಹಣದ ಮೇಲೆ 60 ಪರ್ಸೆಂಟ್‌ ಸರ್ಕಾರದ ಕಣ್ಣು ಬಿದ್ದಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 21.87 ಲಕ್ಷ ವೃದ್ಧಾಪ್ಯ ಹಾಗೂ31.33 ಲಕ್ಷ ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳಲ್ಲಿ ಅನರ್ಹರನ್ನು ಹುಡುಕುವುದಕ್ಕೆ ಸರ್ಕಾರ ಮುಂದಾಗದೆ. 9.04 ಲಕ್ಷ ವೃದ್ಧಾಪ್ಯ ವೇತನದಾರರು 14.15 ಲಕ್ಷ ಸಂಧ್ಯಾ ಸುರಕ್ಷಾ ಕಾರ್ಡ್‌ಗಳನ್ನು ರದ್ದುಗೊಳಿಸುವುದಕ್ಕೆ ಸಂಬಂಧಿಸಿದಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.

ತಮ್ಮದು ಆಲಿಸುವ ಸರ್ಕಾರ ಎಂದು ಜಾಹೀರಾತಿನಲ್ಲಿ ಫೋಸು ಕೊಡುವ ಕಾಂಗ್ರೆಸ್‌ ಸರ್ಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ. ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದ್ದಾರೆ.

prajaprabhat

Recent Posts

ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ರಾಜ್ಯ ಸರ್ಕಾರ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್…

3 hours ago

ಉಚಿತ ಮೂರು ತಿಂಗಳ UPSC Coaching ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಅರ್ಜಿ ಆಹ್ವಾನ

2025-26 ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಇಲಾಖೆವತಿಯಿಂದ ಬೆಂಗಳೂರು ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ…

4 hours ago

ಉಚಿತ ತರಬೇತಿ ಮತ್ತು ಊಟ ವಸತಿ ಸಹಿತ.ನಾನಾ ತರಬೇತಿಗಳಿಗೆ ಅರ್ಜಿ ಆಹ್ವಾನ

ಉಚಿತ ತರಬೇತಿ ಮತ್ತು ಊಟ ವಸತಿ ಸಹಿತ.ನಾನಾ ತರಬೇತಿಗಳಿಗೆ ಅರ್ಜಿ ಆಹ್ವಾನ ಗ್ರಾಮೀಣ ಕೌಶಲ ಎಂದರೆ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ…

5 hours ago

ಡಿ.ಎಡ್ ಮತ್ತು ಬಿ.ಎಡ್ ವಿಶೇಷ ಶಿಕ್ಷಣ : ಹುದ್ದೆಗಳಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಬಿಐಇಆರ್‍ಟಿ ಪ್ರಾಥಮಿಕ ನಾನಾ ತಾತ್ಕಾಲಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಗ್ರ…

5 hours ago

ರಾಜ್ಯದ ಗ್ರಾ.ಪಂ ಆಸ್ತಿ ತೆರಿಗೆದಾರರಿಗೆ ಮೊಬೈಲ್ `UPI’ ಮೂಲಕವೂ ಪಾವತಿಗೆ ಅವಕಾಶ

2025-26ನೇ ಸಾಲಿನ ಸಂಪೂರ್ಣ ಗ್ರಾಮ ಪಂಚಾಯತಿ ಆಸ್ತಿ ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿಸಲು ಕೊನೆಯ ದಿನಾಂಕ 30-06- 2025,…

6 hours ago

ಸಂಘ ಸಾಂಸ್ಥೆ’ಗಳಿಗೆ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ಅವಧಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು.16.ಜೂನ್.25:- ರಾಜ್ಯದಲ್ಲಿ 2025-26ನೇ ಸಾಲಿಗೆ ಸಂಘ ಸಂಸ್ಥೆ'ಗಳಿಗೆ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ…

7 hours ago