10/06/2025 2:35 AM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರ ಶಿಕ್ಷಕರ ನೇಮಕಾತಿಗೆ ಈಗಾಗಲೇ ಸಿದ್ಧತೆ : ಸಚಿವ ಮಧು ಬಂಗಾರಪ್ಪ.!

ರಾಜ್ಯ ಸರ್ಕಾರ ಶಿಕ್ಷಕರ ನೇಮಕಾತಿಗೆ ಈಗಾಗಲೇ ಸಿದ್ಧತೆ : ಸಚಿವ ಮಧು ಬಂಗಾರಪ್ಪ.!

Facebook
X
WhatsApp
Telegram

ಶಿವಮೊಗ್ಗ.22.ಫೆ.25:- ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ  ಈಗಾಗಲೇ ಸಿದ್ಧತೆ ನಡೆಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ರಾಜ್ಯದಲ್ಲಿ ಖಾಲಿಯಿರುವ ಪ್ರಾಥಮಿಕ,ಮಾಧ್ಯಮಿಕ ಮತ್ತು ಪ್ರೌಢಶಾಲಾ  ಶಿಕ್ಷಕರ ನೇಮಕಾತಿ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಶಿಕ್ಷಕರ ನೇಮಕಕ್ಕೆ ನಮ್ಮ ಸರ್ಕಾರ ಈಗಾಗಲೇ ಸಿದ್ಧತೆ ನಡೆಸಿದೆ.

ಕೆಲವು ತಾಂತ್ರಿಕ ಸಮಸ್ಯೆಯಿಂದ ಅತಿಥಿ ಶಿಕ್ಷಕರ ವೇತನ ನಿಲ್ಲಿಸಲಾಗಿದ್ದ ವೇತನವನ್ನು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬಿಡುಗಡೆ ಮಾಡಲಾಯಿತು ಎಂದರು.

ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್‌ ಧರಿಸಿ ಬರುವವರಿಗೆ ಅನುಮತಿ ನೀಡುವ ವಿಚಾರದ ಬಗ್ಗೆ ಮಾತನಾಡಿದ ಅವರು, ಸದ್ಯ ಹಿಜಾಬ್‌ ಪ್ರಕರಣ ಕೋರ್ಟ್‌ನಲ್ಲಿದೆ. ಹೀಗಾಗಿ ಹಿಜಾಬ್‌ ಬಗ್ಗೆ ಯಾವುದೇ ಚರ್ಚಿಸುವುದು ಬೇಡ. ಆದರೆ ಮೊದಲಿನಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಸ್‌ ಮಾರ್ಕ್ಸ್‌ ಇಲ್ಲ ಎಂದು ಹೇಳಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!