ಬೆಂಗಳೂರು.16.ಜೂನ್.25:- ಸಾಮಾಜಿಕ ಭದ್ರತಾ ಯೋಜನೆಗಳ ಪೈಕಿ ವೃದ್ದಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಪೈಕಿ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸಾಮಾಜಿಕ ಭದ್ರತೆಯ ವಿವಿಧ ಮಾಸಿಕ ಪಿಂಚಣಿ ಯೋಜನೆಗಳ ಪೈಕಿ ವೃದ್ಧಾಪ್ಯ ವೇತನ ಯೋಜನೆಯಡಿ-21.87 ಲಕ್ಷ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯಡಿ-31.33 ಲಕ್ಷ ಫಲಾನುಭವಿಗಳಿದ್ದು, ಸದರಿ ಫಲಾನುಭವಿಗಳ ವಿವರಗಳನ್ನು ಕುಟುಂಬ ದತ್ತಾಂಶದ & Under Age, Income limit, APL, IT Payee 2 HRMS 2ơn Integrate ವೃದ್ಧಾಪ್ಯ ವೇತನ ಯೋಜನೆಯಡಿ ಅಂದಾಜು- 9.04 ಲಕ್ಷ ಮತ್ತು ಸಂಧ್ಯಾಸುರಕ್ಷಾ ಯೋಜನೆಯಡಿ ಅಂದಾಜು-14.15 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ.
ಸದರಿ ಫಲಾನುಭವಿಗಳ ಗ್ರಾಮವಾರು, ತಾಲ್ಲೂಕುವಾರು ಮತ್ತು ಜಿಲ್ಲಾವಾರು ವಿವರಗಳನ್ನು ಉಲ್ಲೇಖದನ್ವಯ ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ಒದಗಿಸಲಾಗಿದ್ದು, ಸದರಿ ಫಲಾನುಭವಿಗಳ ವಿವರಗಳನ್ನು Under Age, Income limit, APL, IT Payee ಮತ್ತು HRMS ಮಾನ ದಂಡಗಳನ್ವಯ ಭೌತಿಕವಾಗಿ ಪರಿಶೀಲಿಸಿ ಅನರ್ಹ ಫಲಾನುಭವಿಗಳ ಪಿಂಚಣಿಯನ್ನು ರದ್ದುಪಡಿಸಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಂಡು, ಅನರ್ಹ ಫಲಾನುಭವಿಗಳ ವಿವರಗಳನ್ನು ದಿನಾಂಕ: 11-06-2025 ರ ಒಳಗಾಗಿ ಈ ಕಚೇರಿಗೆ ಮಾಹಿತಿಯನ್ನು ಒದಗಿಸುವಂತೆ ಸಂಬಂಧಪಟ್ಟ ಎಲ್ಲಾ ತಹಶೀಲ್ದಾರ್ ಮತ್ತು ಅಧೀನ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ.
