ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪದವಿ 1, 3 ಮತ್ತು 5ನೇ ಸೆಮಿಸ್ಟರ್ ಮೌಲ್ಯಮಾಪಕರು ಗೈರು!

ಬೇಳಗಾವಿ.27.ಫೆ.26:- ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅಧೀನದಲ್ಲಿರುವ ಪದವಿ ಮಹಾವಿದ್ಯಾಲಯ ಪರಿಕ್ಷೆ 1, 3 ಮತ್ತು 5ನೇ ಸೆಮಿಸ್ಟರ್ ಉತ್ತರ ಪತ್ರಿಕೆಗಳು ಮೌಲ್ಯಮಾಪನ್ಕೆ.192 ಜನರಿಗೆ ಆದೇಶಿಸಿದ್ದೇವೆ. ಈವರೆಗೆ 113 ಮಂದಿ ಹಾಜರಾಗಿದ್ದು,

ಆರ್‌ಸಿಯು ವ್ಯಾಪ್ತಿಗೆ ಬರುವ ಬೆಳಗಾವಿ, ವಿಜಯಪುರದ ಕಾಲೇಜುಗಳ ವಿವಿಧ ವಿಭಾಗಗಳ ಪದವಿ 1, 3 ಮತ್ತು 5ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳು ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದಿದ್ದಾರೆ. 1.20 ಲಕ್ಷ ಉತ್ತರ ಪತ್ರಿಕೆಗಳಿದ್ದು, ಫೆ.5ರಿಂದ ಈವರೆಗೆ 75 ಸಾವಿರ ಉತ್ತರ ಪತ್ರಿಕೆಗಳ ಮೌಲ್ಯಮಾಪನವಾಗಿದೆ. 45 ಸಾವಿರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆಗಬೇಕಿದೆ’ ಎಂದು ಆರ್‌ಸಿಯು ಮೌಲ್ಯಮಾಪನ ಕುಲಸಚಿವ ಪ್ರೊ.ರವೀಂದ್ರನಾಥ ಕದಂ ಹೇಳಿದರು.

‘ಮೌಲ್ಯಮಾಪನಕ್ಕೆ ಹಾಜರಾಗಲು 192 ಜನರಿಗೆ ಆದೇಶಿಸಿದ್ದೇವೆ. ಈವರೆಗೆ 113 ಮಂದಿ ಹಾಜರಾಗಿದ್ದು, 79 ಮಂದಿ ಗೈರಾಗಿದ್ದಾರೆ. ಯುಜಿಸಿಯಿಂದ ವೇತನ ಪಡೆಯುವವರು, ಅತಿಥಿ ಶಿಕ್ಷಕರೂ ಈ ಪಟ್ಟಿಯಲ್ಲಿದ್ದಾರೆ. ಕರ್ತವ್ಯಕ್ಕೆ ಬಂದವರು ದಿನಕ್ಕೆ 40 ಉತ್ತರ ‍ಪತ್ರಿಕೆಗಳ ಮೌಲ್ಯಮಾಪನ ಮಾಡುತ್ತಾರೆ. ಒಂದು ವೇಳೆ ನಿಯೋಜನೆಗೊಂಡವರೆಲ್ಲ ಹಾಜರಾಗಿದ್ದರೆ, ಈ ಹೊತ್ತಿಗೆ ಮೌಲ್ಯಮಾಪನ ಪ್ರಕ್ರಿಯೆ ಮುಗಿಯುವ ಹಂತಕ್ಕೆ ಬರುತಿತ್ತು’ ಎಂದರು.

ಈ ಮಧ್ಯೆ ಫೆಬ್ರುವರಿ 20ರಿಂದ ಪದವಿ 2, 4 ಮತ್ತು 6ನೇ ಸೆಮಿಸ್ಟರ್‌ನ ತರಗತಿ ಆರಂಭಗೊಂಡಿವೆ. ‘ಕೆಲವರು ಮೌಲ್ಯಮಾಪನಕ್ಕೆ ಬಂದಿಲ್ಲ. ಹೀಗಿರುವಾಗ ನಾವಷ್ಟೇ ಏಕೆ ಮೌಲ್ಯಮಾಪನ ಮಾಡಬೇಕು. ನಮ್ಮನ್ನು ‍ಪರೀಕ್ಷಾ ಕರ್ತವ್ಯದಿಂದ ಬಿಡುಗಡೆಗೊಳಿಸಿ’ ಎಂದು ಹಲವರು ಒತ್ತಾಯಿಸಿದ್ದಾರೆ.

ಸದ್ಯ ಮೌಲ್ಯಮಾಪನ ಮಾಡುತ್ತಿರುವವರು ಮಾತ್ರ ಕರ್ತವ್ಯ ನಿರ್ವಹಿಸಿದರೆ, ಈ ಪ್ರಕ್ರಿಯೆ ಮುಗಿಯಲು 10ಕ್ಕೂ ಹೆಚ್ಚು ದಿನ ಸಮಯ ಬೇಕು. ಮೌಲ್ಯಮಾಪನದ ನಂತರ ಪ್ರಕ್ರಿಯೆಗಳನ್ನೆಲ್ಲ ಮುಗಿಸಿ, ಫಲಿತಾಂಶ ಪ್ರಕಟಿಸಲು ತಡವಾಗಲಿದೆ. ವಿದ್ಯಾರ್ಥಿಗಳ ಮುಂದಿನ ಹಂತದ ಕಲಿಕೆಗೂ ತೊಂದರೆಯಾಗಲಿದೆ.

‘ಈಗೆಲ್ಲ ಬೇರೆ ಬೇರೆ ವಿಶ್ವವಿದ್ಯಾಲಯದವರು ಪರೀಕ್ಷೆ ಮುಗಿದ ತಿಂಗಳೊಳಗೆ ಫಲಿತಾಂಶ ಪ್ರಕಟಿಸುತ್ತಿದ್ದಾರೆ. ಆದರೆ, ಆರ್‌ಸಿಯುನವರು 1 ತಿಂಗಳಿಗಿಂತ ಹೆಚ್ಚಿನ ಅವಧಿಗೆ ಮೌಲ್ಯಮಾಪನ ಮಾಡಿದರೆ ಹೇಗೆ’ ಎಂಬ ಪ್ರಶ್ನೆ ವಿದ್ಯಾರ್ಥಿಗಳಲ್ಲಿ ಕಾಡುತ್ತಿದೆ.

‘ವಿವಿಧ ವಿಷಯಗಳ ಮೌಲ್ಯಮಾಪನ ಈಗ ಮುಗಿಯುವ ಹಂತಕ್ಕೆ ಬಂದಿದ್ದು, ತ್ವರಿತವಾಗಿ ಫಲಿತಾಂಶ ಪ್ರಕಟಿಸಲು ಪ್ರಯತ್ನ ನಡೆಸಿದ್ದೇವೆ. ಆದರೆ, ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮೂರು ವಿಭಾಗಗಳ ವಿದ್ಯಾರ್ಥಿಗಳು ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದಿದ್ದಾರೆ. ಹೀಗಿರುವಾಗ ಈ ವಿಷಯದ ಮೌಲ್ಯಮಾಪನವಾಗದೆ ಫಲಿತಾಂಶ ಪ್ರಕಟಿಸಲಾಗದು’ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದರು.

– ಪ್ರೊ.ರವೀಂದ್ರನಾಥ ಕದಂ ಮೌಲ್ಯಮಾಪನ ಕುಲಸಚಿವ ಆರ್‌ಸಿಯು ಬೆಳಗಾವಿಮೌಲ್ಯಮಾಪನ ಆರಂಭವಾಗಿ 22 ದಿನಗಳಾದರೂ ಏಕೆ ಹಾಜರಾಗಿಲ್ಲ ಎಂದು ಗೈರಾದವರಿಗೆ ಷೋಕಾಸ್‌ ನೋಟಿಸು ಕೊಡುತ್ತೇವೆ. ತಕ್ಷಣವೇ ಹಾಜರಾಗುವಂತೆ ಸೂಚಿಸುತ್ತೇವೆ. ನಿರ್ಲಕ್ಷ್ಯ ತೋರಿದರೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯುತ್ತೇವೆ.

ರಾಣಿ ಚೆನ್ನಮ್ಮ ವಿಶ್ವಿದ್ಯಾಲಯ -ವಿದ್ಯಾರ್ಥಿಗಳು ಇಂಗ್ಲಿಷ್‌ ವಿಷಯದ ಪರೀಕ್ಷೆ ಬರೆದಿದ್ದಾರೆ. ಹೀಗಿರುವಾಗ ಈ ವಿಷಯದ ಮೌಲ್ಯಮಾಪನವಾಗದೆ ಫಲಿತಾಂಶ ಪ್ರಕಟಿಸಲಾಗದು’ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದರು.

prajaprabhat

Recent Posts

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

5 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

5 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

6 hours ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

14 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

15 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

15 hours ago