ಬೆಂಗಳೂರು.28.ಫೆ .25:- ರಾಜ್ಯದ್ 3 ಮೂರು ಜಿಲ್ಲೆಗಳಲ್ಲಿ ಹಾಕ್ಕಿ ಜ್ವರ ಪತ್ತೆ ಯಾವ ಜಿಲ್ಲೆಯ ನೋಡೋಣಾ ? ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ಪತ್ತೆಯಾಗಿರುವ ವರದಿ, ಆರೋಗ್ಯ ಇಲಾಖೆ ರಾಜ್ಯದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ರಾಯಚೂರಿನ ಜಿಲ್ಲೆಯ (ಮಾನ್ವಿ) ತಾಲ್ಲೂಕು, ಚಿಕ್ಕಬಳ್ಳಾಪುರ ತಾಲ್ಲೂಕು ಮತ್ತು ಬಳ್ಳಾರಿಯ ಜಿಲ್ಲೆಯ (ಸಂಡೂರು) ತಾಲ್ಲೂಕಿನಲ್ಲಿ ಕೋಳಿಗಳಲ್ಲಿ ಹಕ್ಕಿ ಜ್ವರ “H5N1 ಏವಿಯನ್ ಇನ್ಫ್ಲುಯೆಂಜಾ” ಕಂಡುಬಂದಿದ್ದು, ಹಲವಾರು ಕೋಳಿಗಳು ಸಾವಿಗೀಡಾಗಿವೆ.
ಆದರೆ, ರಾಜ್ಯದಲ್ಲಿ ಈವರೆಗೆ ಮನುಷ್ಯರಲ್ಲಿ ಹಕ್ಕಿಜ್ವರ ಪತ್ತೆಯಾಗಿರುವ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಅವರು ಹೇಳಿದರು.
ರಾಜ್ಯದ ಪಾಶು ಸಂಗೋಪನಾ ಏಲಾಖೆ ಅಧಿಕಾರಿಗಳು ಈಗ ಸತ್ತ ಕೋಳಿಗಳ ಮಾದರಿಗಳನ್ನು ಸಂಗ್ರಹಿಸಿ ಭೋಪಾಲ್ನ ಕೇಂದ್ರ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಹಕ್ಕಿ ಜ್ವರದಿಂದ ಪಕ್ಷಿಗಳು ಸಾವಿಗೀಡಾಗಿರುವುದಾಗಿ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಹಕ್ಕಿ ಜ್ವರ ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಪಶುಸಂಗೋಪನಾ ಇಲಾಖೆಯು ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದ ಸ್ಥಳದ ಸುತ್ತಲಿನ 3 ಕಿ.ಮೀ ಪ್ರದೇಶದಲ್ಲಿನ ಕೋಳಿಗಳನ್ನು ಸಾಮೂಹಿಕವಾಗಿ ಕೊಲ್ಲಲು ನಿರ್ಧರಿಸಲಾಗಿದೆ.
ನಾವು ಕಣ್ಗಾವಲು ಹೆಚ್ಚಿಸಿದ್ದೇವೆ ಮತ್ತು ಹಕ್ಕಿ ಜ್ವರ ಪ್ರಕರಣಗಳು ಪತ್ತೆಯಾದ ಹತ್ತಿರದ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳ ಸೌಲಭ್ಯಗಳನ್ನು ಎಂದು ಅವರು ಮಾಹಿತಿನೀಡಿದರು.
ಹಕ್ಕಿ ಜ್ವರ ಅಥವಾ ಬರ್ಡ್ ಫ್ಲೂ (ಕುಶಲವೇ ಕ್ಷೇಮವೇ)
ಸಾರ್ವಜನಿಕರು ಭಯಭೀತರಾಗುವ ಅಗತ್ಯವಿಲ್ಲ. ರಾಜ್ಯದ ಆರೋಗ್ಯ ಮತ್ತು ಪಶುಸಂಗೋಪನೆ ಇಲಾಖೆಗಳು ಜಂಟಿಯಾಗಿ ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಭರವಸೆ ನೀಡಿದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…