ಬೀದರ.19.ಫೆಬ್ರುವರಿ.25: -ರಾಷ್ಟ್ರ ಪುರುಷ, ರಾಷ್ಟ್ರವೀರ, ಧರ್ಮನಿರಪೇಕ್ಷ, ಜಾತ್ಯಾತೀತ ಮಹಾವೀರ, ರೈತ ಅಭಿವೃದ್ಧಿ, ಸ್ವದೇಶ ರಾಜ್ಯಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶ ತತ್ವಗಳನ್ನು ಇಂದಿನ ಯುವ ಜನಾಂಗವು ಅಳವಡಿಸಿಕೊಳ್ಳುವ ಅಗತ್ಯವಿದೆಯೆಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಆಶ್ರಯದಲ್ಲಿಂದು ಹಮ್ಮಿಕೊಂಡ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಇಡೀ ದೇಶದಲ್ಲಿ ಶಿವಾಜಿ ಮಹಾರಾಜರಂತಹ ರಾಜರಿಲ್ಲ. ಅವರ ದೇಶಭಕ್ತಿ, ರಾಷ್ಟ್ರಪ್ರೇಮ, ಯುದ್ಧನೀತಿ ಧೈರ್ಯ, ಶೌರ್ಯ ಮಹಿಳಾ ಗೌರವ ಜಾತ್ಯಾತೀತ ಮನೋಭಾವನೆ ಇತರೇ ರಾಜರಲ್ಲಿ ಕಾಣುವುದು ತೀರ ಕಡಿಮೆ. ರೈತರ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು.
ಮುಘಲರೊಂದಿಗೆ ಯುದ್ಧ ಮಾಡಿ ಗೆದ್ದರು. ಗೆರಿಲ್ಲಾ ಯುದ್ಧ ಪರಿಣಿತರಾಗಿದ್ದರು. ತಾಯಿ ಬೀಜಾಮಾತಾ ಮಾರ್ಗದರ್ಶನದಲ್ಲಿ ರಾಷ್ಟ್ರಭಕ್ತಿ ಬೆಳೆಸಿಕೊಂಡ ಶಿವಾಜಿ ಬಾಲ್ಯದಿಂದಲೇ ರಾಮಾಯಣ, ಮಹಾಭಾರತ ಓದಿ ಸ್ವರಾಜ್ಯ ರಾಜ್ಯ ನಿರ್ಮಿಸಿದರು ಎಂದು ಸಚಿವರು ತಿಳಿಸಿದರು.
ಶಿವಾಜಿ ಮಹಾರಾಜರು ಧರ್ಮನಿರಪೇಕ್ಷ, ಧರ್ಮಾತೀತ, ಜಾತ್ಯತೀತ ಆಗಿದ್ದರು. ಅವರ ಅಂಗರಕ್ಷಕರೇ ಮುಸ್ಲಿಂ ಸಮುದಾಯದವರಾಗಿದ್ದರು.
ಅನೇಕ ಹುದ್ದೆಗಳಲ್ಲಿ ಮುಸ್ಲಿಂ ನಾಯಕರನ್ನು ನೇಮಿಸಿದ್ದರು. ಎಲ್ಲ ಸಮುದಾಯದವರನ್ನು ಒಟ್ಟಾಗಿ ಮುನ್ನಡೆಸುತ್ತಿದ್ದರು. ಆದರೆ ಇತ್ತೀಚೆಗೆ ಕೆಲವು ಜಾತಿ-ಜಾತಿಗಳಲ್ಲಿ ಕೋಮು-ದ್ವೇಷ ಬಿತ್ತುವ ಕಾರ್ಯ ಮಾಡುತ್ತಿದ್ದು ಎಲ್ಲ ಸಮುದಾಯಗಳು ಒಟ್ಟಾಗಿ ಸಹೋದರತ್ವದಿಂದ ಬಾಳಬೇಕೆಂದು ಸಚಿವರು ನುಡಿದರು.
ನಮ್ಮ ಕರ್ನಾಟಕ-ಮಹಾರಾಷ್ಟ್ರದ ಸಂಬಂಧಗಳು ಶತಶತಮಾನಗಳಿಂದಲೂ ಭಾತೃತ್ವ ರೀತಿಯಲ್ಲಿವೆ. ಶಿವಾಜಿಯ ತಂದೆಯ ಸಮಾಧಿ ದಾವಣಗೆರೆಯಲ್ಲಿದೆ. ಶಿವಾಜಿಯು ಕರ್ನಾಟಕದಲ್ಲಿ ಅನೇಕ ದಿನ ಉಳಿದು ಅನನ್ಯವಾದ ಸಂಬಂಧ ಹೊಂದಿದ್ದರು. ಕರ್ನಾಟಕ ಮಹಾರಾಷ್ಟ್ರದ ಗಡಿ ಭಾಗದಲ್ಲಿ ಇತ್ತೀಚೆಗೆ ಉತ್ತಮ ಅಭಿವೃದ್ಧಿಯಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಮಾತನಾಡಿ, ಶಿವಾಜಿ ಮಹಾರಾಜರು ಈ ದೇಶ ಕಂಡ ಅತೀ ಪ್ರಸಿದ್ಧ ಮಹಾಪುರುಷ ಆಗಿದ್ದರು. ಶಿವಾಜಿಯು ಯಾರ ವಿರುದ್ಧವು ಇರಲಿಲ್ಲ. ಎಲ್ಲ ಸಮುದಾಯಗಳನ್ನು ಒಟ್ಟಾಗಿ ರಾಜ್ಯಭಾರ ಮಾಡುತ್ತಿದ್ದರು. ಅನೇಕ ದೊಡ್ಡ ಹುದ್ದೆಗಳನ್ನು ಅಲ್ಪಸಂಖ್ಯಾತ ಸಮುದಾಯದವರಿಗೆ ನೀಡಿದ್ದರು. ಸಮಾಜದಲ್ಲಿ ವೈವಿದ್ಯತೆ ಇದೆ. ಬೀದರನಲ್ಲಿ ಎಲ್ಲ ಸಮುದಾಯಗಳು ಶಾಂತಿಯಿಂದ, ಸೌಹಾರ್ದದಿಂದ ಜೀವಿಸುತ್ತಿದ್ದಾರೆ ಎಂದು ತಿಳಿಸಿದರು.
ದೇವರನ್ನು ಕಾಣುವ ವ್ಯವಸ್ಥೆಯಲ್ಲಿಯೂ ವೈವಿದ್ಯತೆ ಇವೆ. ಬೀದರ ಜಿಲ್ಲೆ, ಕರ್ನಾಟಕ, ದೇಶ, ವಿದೇಶಗಳಲ್ಲಿಯೂ ಆಯಾ ಪ್ರದೇಶಕ್ಕನುಗುಣವಾಗಿ ದೇವರನ್ನು ಕಾಣುವ ರೀತಿ, ತತ್ವ, ಕಲ್ಪನೆ ವೈವಿದ್ಯಮಯವಾಗಿದೆ. ಆದರೆ ಈ ಮನುಷ್ಯ ಮಾತ್ರ ಎಲ್ಲೆಡೆ ಒಂದೇ ರೀತಿ ಆಗಿದ್ದಾನೆ. ಈ ನೆಲ, ಜಲ, ವಾಯು ಎಲ್ಲರಿಗೂ ಒಂದೇ, ರಕ್ತವೂ ಒಂದೇ, ಸಸ್ಯಹಾರ, ಮಾಂಸಾಹಾರ ಅವರವರ ಆಹಾರ ಪದ್ಧತಿಯಷ್ಟೆ, ಎಲ್ಲ ಸಮುದಾಯದವರು ಸೇರಿ ಬೀದರ ಜಿಲ್ಲೆಯನ್ನು ಅಭಿವೃದ್ಧಿಗೊಳಿಸೋಣ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಧಾರಶಿವ ಮಹಾರಾಷ್ಟ್ರದ ಮಾಜಿ ಸಂಸದರಾದ ಪ್ರೋ.ರವೀಂದ್ರ ವಿಶ್ವನಾಥರಾವ ಗಾಯಕವಾಡ ಅವರು ಅತಿಥಿ ಉಪನ್ಯಾಸ ನೀಡಿದರು.
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…