ಬೀದರ20.ಜೂನ್.25:- 2025-26 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸೌಲಭ್ಯ ಪಡೆಯಲು ಜಿಲ್ಲೆಯ ಆಸಕ್ತ ರೈತ ಸಮುದಾಯದಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ (ಜಿಲ್ಲಾ ಪಂಚಾಯತ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಸಚೀನ್ ಕೌಠ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯಧನ ನೀಡುವ ಯೋಜನೆಗಳ ವಿವರ: ಹಣ್ಣಿನ ತೋಟಗಳ ಸ್ಥಾಪನೆ, ಹೈಬ್ರಿಡ್ ತರಕಾರಿ ಪ್ರದೇಶ ವಿಸ್ತರಣೆಗೆ, ಹೂವಿನ ತೋಟಗಳ ಸ್ಥಾಪನೆಗೆ, ಸುಗಂಧ ದ್ರವ್ಯ ತೋಟಗಳ ಸ್ಥಾಪನೆಗೆ, ಹಣ್ಣಿನ ತೋಟಗಳ ಪುನಶ್ಚೇತನಕ್ಕೆ, ನೀರು ಸಂಗ್ರಹಣ ಘಟಕಕ್ಕೆ, ಸಂರಕ್ಷಿತ ಬೇಸಾಯ ಕಾರ್ಯಕ್ರಮಕ್ಕೆ, ಯಾಂತ್ರೀಕರಣಕ್ಕೆ, ಕೊಯ್ಲೋತ್ತರ ನಿರ್ವಹಣೆ ಘಟಕಗಳಿಗೆ, ಮಾರುಕಟ್ಟೆ: (ತಳ್ಳುವ ಗಾಡಿ) ಘಟಕಕ್ಕೆ ಸಹಾಯ ಧನ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಕೇಂದ್ರ ಪುರಸ್ಕøತ ರಾಷ್ಟ್ರೀಯ ಖಾದ್ಯ ತೈಲ ಅಭಿವಯಾನ ತಾಳೆ ಬೆಳೆ ಯೋಜನೆ, ತಾಳೆ ಸಸಿಗಳಿಗೆ ಸಹಾಯಧನ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಕೃಷಿ ಯಾಂತ್ರಿಕರಣ ಉಪ ಅಭಿಯಾನ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಸಹಾಯಧನ ನೀಡಲಾಗುತ್ತದೆ.
ಅರ್ಹತೆಗಳು: ಫಲಾನುಭವಿಗಳು ರೈತರಾಗಿದ್ದು, ಜಮೀನು ಅವರ ಹೆಸರಿನಲ್ಲಿ ಇರಬೇಕು ಜಂಟಿಖಾತೆಯಾಗಿದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರವನ್ನು ಪಡೆದಿರಬೇಕು. ತಂದೆ ಅಥವಾ ತಾಯಿಯ ಹೆಸರಿನಲ್ಲಿ ಜಮೀನಿದ್ದು ಅವರು ಮರಣ ಹೊಂದಿದಲ್ಲಿ ಮಾತ್ರ ಗ್ರಾಮಲೆಕ್ಕಿಗರಿಂದ ದೃಢೀಕರಿಸಿದ, ಕುಟುಂಬದ ಇತರೆ ಸದಸ್ಯರಿಂದ ಒಪ್ಪಿಗೆ ಪಡೆದು ತಮ್ಮ ಹೆಸರಿನಲ್ಲಿ ಅರ್ಜಿಯನ್ನು ಸಲ್ಲಿಸುವುದು. ನೀರಿನ ಮೂಲ ಹೊಂದಿರಬೇಕು. ತಾಲ್ಲೂಕು ಕಂದಾಯ ಇಲಾಖೆಯಿಂದ ನೀಡಲಾಗುವ ಇತ್ತೀಚಿನ ಗಣಕಿಕೃತ ಪಹಣಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
ಆಸಕ್ತ ರೈತಬಾಂಧವರು ಅರ್ಜಿಗಳನ್ನು ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ. ಪಂ) ಕಚೇರಿಗೆ ದಿನಾಂಕ: 30-06-2025 ಸಾಯಂಕಾಲ 5.30 ಗಂಟೆಯವರೆಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಹಾಗೂ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂರ್ಪಕಿಸುವಂತೆ ಅವರು ತಿಳಿಸಿದ್ದಾರೆ.
ಬೆಂಗಳೂರು.21.ಜೂನ್.25:- ಸರ್ಕಾರಿ ಇಲಾಖೆಗಳ ನೌಕರರು ಮತ್ತು ಗುತ್ತಿಗೆದಾರರಿಗೆ ಆರೋಗ್ಯ ಇಲಾಖಯಿಂದ ಅರೋಗ್ಯ ಭದ್ರತೆ ಸಿಕ್ಕಿದೆ. ಇನ್ನು ನೌಕರರ ಆರೋಗ್ಯ, ಆಸ್ಪತ್ರೆ…
ಉಡುಪಿ.21.ಜೂನ್.25:-ನೀಟ್ ನಕಲಿ ಅಂಕಪಟ್ಟಿಗೆ ಸಂಬಂಧಿಸಿದಂತೆ ಉಡುಪಿ ಸೆನ್ ಆನ್ಲೈನ್ ನಕಲಿ ನೀಟ್ ಅಂಕಪಟ್ಟಿ: ಪ್ರಕರಣ ದಾಖಲು ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಯ…
2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ…
ಹೊಸ ದೆಹಲಿ.21.ಜೂನ್.25:-11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ, ಇಂದು ವಿಶಾಖಪಟ್ಟಣಂನ ಆಂಧ್ರ ವಿಶ್ವವಿದ್ಯಾಲಯದಲ್ಲಿ ಗಮನಾರ್ಹವಾದ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು…
ಬೀದರ.21.ಜೂನ್.25:- ಬೀದರ ತಾಲ್ಲೂಕಿನ ನೇಮತಾಬಾದ ಗ್ರಾಮದ ಶಿವಾರದ ಜಮೀನಿನ ಹತ್ತಿರ ಮಾಂಜ್ರಾ ನದಿಯಲ್ಲಿ ಅಂದಾಜು 50 ರಿಂದ 55 ವರ್ಷ…
ಬೀದರ.21.ಜೂನ್.25:- ಔರಾದ (ಬಿ) ತಾಲ್ಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ನಕಲಿ ವೈದ್ಯರಾದ ನಾರಾಯಣರಾವ ಕುಲರ್ಕಣಿ, ಬಸವರಾಜ ಒಂಟೆ ಇವರಿಗೆ ತಲಾ…