09/06/2025 2:01 AM

Translate Language

Home » ಲೈವ್ ನ್ಯೂಸ್ » ರೈತರ ಪರವಾಗಿ ಸದನದಲ್ಲಿ ಧ್ವನಿ. ಸಂಸದ್ ಶ್ರೀ ಸಾಗರ್ ಖಂಡ್ರೆ

ರೈತರ ಪರವಾಗಿ ಸದನದಲ್ಲಿ ಧ್ವನಿ. ಸಂಸದ್ ಶ್ರೀ ಸಾಗರ್ ಖಂಡ್ರೆ

Facebook
X
WhatsApp
Telegram

ಹೊಸ ದೆಹಲಿ.13.ಮಾರ್ಚ.25:- ಇಂದು ಲೋಕಸಭೆ ಅಧಿವೇಶನದಲ್ಲಿ ನಮ್ಮೆಲ್ಲರ ನೆಚ್ಚಿನ ಬೀದರ ಕ್ಷೇತ್ರದ ಯುವ ಸಂಸದರಾದ ಸನ್ಮಾನ್ಯ ಶ್ರೀ ಸಾಗರ ಈಶ್ವರ ಖಂಡ್ರೆ ಅವರು ಕ್ಷೇತ್ರದ ರೈತರ ಪರವಾಗಿ ಸದನದಲ್ಲಿ ಧ್ವನಿ ಎತ್ತಿದಾರೆ. ಹೆಚ್ಚಿನ ಪ್ರಮಾಣದಲ್ಲಿ ಸೋಯಾಬೀನ್ ಬೆಳೆ ಬೆಳೆಯುತ್ತಿರುವ ಬಗ್ಗೆ ಉಲ್ಲೇಖಿಸಿದರು. ಆದರೆ ಬೆಂಬಲ ಬೆಲೆ (MSP) ಅಡಿಯಲ್ಲಿ ಎಕರೆಗೆ ಕೇವಲ 5 ಕ್ವಿಂಟಲ್‌ನಂತೆ ಒಟ್ಟು 20 ಕ್ವಿಂಟಲ್ ಮಾತ್ರ ಖರೀದಿ ಮಾಡಲಾಗುತ್ತಿರುವುದರಿಂದ ಹೆಚ್ಚಿನ ರೈತರು ಬೆಂಬಲ ಬೆಲೆ ಲಾಭದಿಂದ ವಂಚಿತರಾಗುತ್ತಿದ್ದಾರೆ. ಇದಲ್ಲದೆ, ಸೋಯಾಬೀನ್ ಖರೀದಿಗೆ ಕಡಿಮೆ ಸಮಯ ನೀಡುತ್ತಿರುವುದರಿಂದ ಹೆಚ್ಚಿನ ರೈತರು ತಮ್ಮ ಉತ್ಪನ್ನವನ್ನು ಮಾರಾಟ ಮಾಡಲು ಆಗದೆ, ಬೆಂಬಲ ಬೆಲೆ ಸಿಗದೆ ವಂಚಿತರಾಗುತ್ತಿದ್ದಾರೆ.

ಈ ಸಮಸ್ಯೆಯನ್ನು ಪರಿಹರಿಸಲು ನಮ್ಮ ರೈತರು ಬೆಳೆಸಿದಂತ ಸೋಯಾಬೀನ್ ಅನ್ನು ಸಂಪೂರ್ಣವಾಗಿ ಖರೀದಿ ಮಾಡಬೇಕು ಮತ್ತು ಎಲ್ಲಾ ರೈತರಿಗೆ ಬೆಂಬಲ ಬೆಲೆಯ ಲಾಭ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಇದರೊಂದಿಗೆ ಭವಿಷ್ಯದಲ್ಲಿ ಇಂತಹ ಸಮಸ್ಯೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. *#ಕಾಯಕ ಯೋಗಿ# ಸನ್ಮಾನ್ಯ ಶ್ರೀ:ಈಶ್ವರ ಬಿ. ಖಂಡ್ರೆ* ಯುವರತ್ನ ಸನ್ಮಾನ್ಯ ಶ್ರೀ:ಸಾಗರ ಈಶ್ವರ ಖಂಡ್ರೆ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!