ರೈತರ ಪರವಾಗಿ ಸದನದಲ್ಲಿ ಧ್ವನಿ. ಸಂಸದ್ ಶ್ರೀ ಸಾಗರ್ ಖಂಡ್ರೆ

ಹೊಸ ದೆಹಲಿ.13.ಮಾರ್ಚ.25:- ಇಂದು ಲೋಕಸಭೆ ಅಧಿವೇಶನದಲ್ಲಿ ನಮ್ಮೆಲ್ಲರ ನೆಚ್ಚಿನ ಬೀದರ ಕ್ಷೇತ್ರದ ಯುವ ಸಂಸದರಾದ ಸನ್ಮಾನ್ಯ ಶ್ರೀ ಸಾಗರ ಈಶ್ವರ ಖಂಡ್ರೆ ಅವರು ಕ್ಷೇತ್ರದ ರೈತರ ಪರವಾಗಿ ಸದನದಲ್ಲಿ ಧ್ವನಿ ಎತ್ತಿದಾರೆ. ಹೆಚ್ಚಿನ ಪ್ರಮಾಣದಲ್ಲಿ ಸೋಯಾಬೀನ್ ಬೆಳೆ ಬೆಳೆಯುತ್ತಿರುವ ಬಗ್ಗೆ ಉಲ್ಲೇಖಿಸಿದರು. ಆದರೆ ಬೆಂಬಲ ಬೆಲೆ (MSP) ಅಡಿಯಲ್ಲಿ ಎಕರೆಗೆ ಕೇವಲ 5 ಕ್ವಿಂಟಲ್‌ನಂತೆ ಒಟ್ಟು 20 ಕ್ವಿಂಟಲ್ ಮಾತ್ರ ಖರೀದಿ ಮಾಡಲಾಗುತ್ತಿರುವುದರಿಂದ ಹೆಚ್ಚಿನ ರೈತರು ಬೆಂಬಲ ಬೆಲೆ ಲಾಭದಿಂದ ವಂಚಿತರಾಗುತ್ತಿದ್ದಾರೆ. ಇದಲ್ಲದೆ, ಸೋಯಾಬೀನ್ ಖರೀದಿಗೆ ಕಡಿಮೆ ಸಮಯ ನೀಡುತ್ತಿರುವುದರಿಂದ ಹೆಚ್ಚಿನ ರೈತರು ತಮ್ಮ ಉತ್ಪನ್ನವನ್ನು ಮಾರಾಟ ಮಾಡಲು ಆಗದೆ, ಬೆಂಬಲ ಬೆಲೆ ಸಿಗದೆ ವಂಚಿತರಾಗುತ್ತಿದ್ದಾರೆ.

ಈ ಸಮಸ್ಯೆಯನ್ನು ಪರಿಹರಿಸಲು ನಮ್ಮ ರೈತರು ಬೆಳೆಸಿದಂತ ಸೋಯಾಬೀನ್ ಅನ್ನು ಸಂಪೂರ್ಣವಾಗಿ ಖರೀದಿ ಮಾಡಬೇಕು ಮತ್ತು ಎಲ್ಲಾ ರೈತರಿಗೆ ಬೆಂಬಲ ಬೆಲೆಯ ಲಾಭ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಇದರೊಂದಿಗೆ ಭವಿಷ್ಯದಲ್ಲಿ ಇಂತಹ ಸಮಸ್ಯೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. *#ಕಾಯಕ ಯೋಗಿ# ಸನ್ಮಾನ್ಯ ಶ್ರೀ:ಈಶ್ವರ ಬಿ. ಖಂಡ್ರೆ* ಯುವರತ್ನ ಸನ್ಮಾನ್ಯ ಶ್ರೀ:ಸಾಗರ ಈಶ್ವರ ಖಂಡ್ರೆ

prajaprabhat

Recent Posts

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

2 hours ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

2 hours ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

3 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

3 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

9 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

11 hours ago