ರೋಹಿತ್ ವೇಮುಲ ವಿಧೇಯಕ ಅಧಿವೇಶನದಲ್ಲಿ ಮಂಡನೆಗೆ ರಾಜ್ಯ ಸರ್ಕಾರದ ತಯಾರಿ.

ಬೆಂಗಳೂರು.15.ಜುಲೈ.25:- ರಾಜ್ಯ ಸರ್ಕಾರ ರಾಜ್ಯದ ಪರಿಶಿಷ್ಟರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ  ಸಾರ್ವಜನಿಕ, ಖಾಸಗಿ, ಡೀಮ್ಡ್‌ ಸೇರಿದಂತೆ ಎಲ್ಲವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಘನತೆಯ ಹಕ್ಕು ರಕ್ಷಣೆ ಮಾಡಲು ‘ರೋಹಿತ್‌ ವೇಮುಲ’ ಹೆಸರಿನಲ್ಲಿ ಹೊಸ ಕಾಯಿದೆ ಜಾರಿಗೆ  ತರಲು ತಯಾರಿ.

ಈ ವಿಧೇಯಕ ಮುಂಬರುವ 2 ಆಗಸ್ಟ್ ತಿಂಗಳಿನಲ್ಲಿ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆಗೆ ಸಿದ್ಧತೆ.

ವಿಧೇಯಕ -2025′ ಕರಡು ಅಂತಿಮಗೊಂಡಿದ್ದು, ಆಗಸ್ಟ್‌ 2ನೇ ವಾರದಲ್ಲಿ‌ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆಗೆ ಬಯಸಿದೆ. ರೋಹಿತ್‌ ವೇಮುಲ ವಿಧೇಯಕ ಕುರಿತು ಈಗಾಗಲೇ ಚರ್ಚೆ ಆರಂಭವಾಗಿದೆ.

ಯಾವುದೇ ವಿದ್ಯಾರ್ಥಿ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ತಾರತಮ್ಯಕ್ಕೆ ಒಳಗಾಗದಂತೆ ರಕ್ಷಣೆ ನೀಡುವುದು ವಿಧೇಯಕದ ಆಶಯ. ಕಾಯಿದೆ ಉಲ್ಲಂಘನೆಯು ಜಾಮೀನು ರಹಿತ ಅಪರಾಧವಾಗಲಿದ್ದು, ತಪ್ಪಿತಸ್ಥರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಜತೆಗೆ ಸಂಬಂಧಪಟ್ಟ ಸಂಸ್ಥೆಗೆ ಸರ್ಕಾರದ ಎಲ್ಲರೀತಿಯ ಹಣಕಾಸು ನೆರವು ಮತ್ತು ಅನುದಾನ ನಿಲ್ಲಿಸಲು ವಿಧೇಯಕದಲ್ಲಿಅವಕಾಶ ಕಲ್ಪಿಸಲಾಗಿದೆ.

ನೂತನ ವಿಧೇಯಕದ ಕರಡು ಸಿದ್ಧವಾಗಿ ಕಾನೂನು ಇಲಾಖೆ ಪರಾಮರ್ಶೆಗೆ ಒಳಪಟ್ಟಿದ್ದು, ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆಗೆ ಬರಲಿದೆ. ಆಗಸ್ಟ್‌ 11ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನದಲ್ಲಿವಿಧೇಯಕ ಮಂಡಿಸಿ ಹೊಸ ಕಾಯಿದೆ ರೂಪಿಸಲು ಸರಕಾರ ಉದ್ದೇಶಿಸಿದೆ.


ಜಾಮೀನು ರಹಿತ ಅಪರಾಧ

ರೋಹಿತ್‌ ವೇಮುಲ ಕಾಯಿದೆಯಡಿ ಪ್ರತಿಯೊಂದು ಅಪರಾಧವು ಸಂಜ್ಞೆಯ ಮತ್ತು ಜಾಮೀನು ರಹಿತವಾಗಿರುತ್ತದೆ. ಕಾಯಿದೆ ಉಲ್ಲಂಘನೆಗೆ ಸಂಬಂಧಿತ ಸಂಸ್ಥೆಯ ವ್ಯವಹಾರಗಳ ಉಸ್ತುವಾರಿ ಹೊಂದಿರುವ ವ್ಯಕ್ತಿ ಅಥವಾ ವ್ಯಕ್ತಿಗಳು ಹೊಣೆಗಾರರಾಗಲಿದ್ದು, ಒಂದು ವರ್ಷದ ಅವಧಿಗೆ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಅಪರಾಧ 2ನೇ ಬಾರಿಗೆ ಪುನಾವರ್ತನೆಯಾದರೆ ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡಕ್ಕೆ ಗುರಿಯಾಗಬೇಕಾಗುತ್ತದೆ.

ಜಾತಿ, ಧರ್ಮದ ಆಧಾರದಲ್ಲಿ ತಾರತಮ್ಯ ಅಥವಾ ಘನತೆಗೆ ಕುಂದು ತರುವ ಜತೆಗೆ ಅದಕ್ಕೆ ಪ್ರಚೋದನೆ ನೀಡುವ ವ್ಯಕ್ತಿ ಅಥವಾ ವ್ಯಕ್ತಿಗಳೂ ಶಿಕ್ಷೆ ಮತ್ತು ದಂಡ ಅನ್ವಯ ಆಗಲಿದೆ. ಜತೆಗೆ ಅಂತಹ ಸಂಸ್ಥೆಗೆ ರಾಜ್ಯ ಸರ್ಕಾರದ ಯಾವುದೇ ಹಣಕಾಸಿನ ನೆರವು ಅಥವಾ ಅನುದಾನ ನೀಡುವಂತಿಲ್ಲ ಎಂಬ ಅಂಶವನ್ನು ವಿಧೇಯಕದ ಕರಡಿನಲ್ಲಿ ಸೇರ್ಪಡೆ ಮಾಡಲಾಗಿದೆ.
ಮುಕ್ತ ಪ್ರವೇಶ

ವರ್ಗ, ಜಾತಿ, ಧರ್ಮ ಮತ್ತು ಲಿಂಗ ಬೇಧವಿಲ್ಲದೆ ಉನ್ನತ ಶಿಕ್ಷಣ ಸಂಸ್ಥೆಗಳ ಪ್ರವೇಶವು ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಅರ್ಹತಾ ಪರೀಕ್ಷೆ ಮತ್ತು ಮೀಸಲು ನೀತಿ ಅನ್ವಯ ಇರಬೇಕು. ಈ ವಿಚಾರದಲ್ಲಿ ಯಾವುದೇ ವ್ಯಕ್ತಿಗೆ ತಾರತಮ್ಯ ಇರಬಾರದು ಎಂದು ಉದ್ದೇಶಿತ ಕಾಯಿದೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ತಾರತಮ್ಯಕ್ಕೆ ಒಳಗಾದ ವ್ಯಕ್ತಿ, ಅವನ ಪೋಷಕರು, ಸಹೋದರ, ಸಹೋದರಿ ಅಥವಾ ರಕ್ತ ಸಂಬಂಧಿ ಅಥವಾ ಸಹೋದ್ಯೋಗಿ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿಕಾಯಿದೆ ಉಲ್ಲಂಘನೆಗಾಗಿ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರೋಹಿತ್ ವೇಮುಲ ಆತ್ಮಹತ್ಯೆ: ಹೈದರಾಬಾದ್‌ನಲ್ಲಿ ರಾಹುಲ್ ಗಾಂಧಿ
ರೋಹಿತ್‌ ವೇಮುಲ ಯಾರು?

ಹೈದರಾಬಾದ್‌ ವಿಶ್ವವಿದ್ಯಾಲಯದ 26 ವರ್ಷಗಳ ಹರೆಯದ ಸಂಶೋಧನಾ ವಿದ್ಯಾರ್ಥಿ ರೋಹಿತ್‌ ವೇಮುಲ ಆತ್ಮಹತ್ಯೆ ಪ್ರಕರಣ ರಾಷ್ಟ್ರಾದ್ಯಂತ ಸಂಚಲನ ಸೃಷ್ಟಿಸಿತ್ತು. ರಾಜ್ಯ ಪ್ರಾಯೋಜಿತ ಜಾತಿ ತಾರತಮ್ಯದಿಂದ ಈ ಸಾವು ಸಂಭವಿಸಿದೆ ಎಂದು ದೇಶಾದ್ಯಂತ ನಾನಾ ವಿಶ್ವವಿದ್ಯಾಲಯಗಳಲ್ಲಿಪ್ರತಿಭಟನೆ ನಡೆದಿದ್ದವು. ಈ ಪ್ರಕರಣದಲ್ಲಿಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆ ಹಾಗೂ ಶೋಷಿತ ಸಮುದಾಯಗಳ ವಿದ್ಯಾರ್ಥಿಗಳ ಘನತೆ ರಕ್ಷಣೆಗಾಗಿ ಕಠಿಣ ಕಾನೂನು ರೂಪಿಸುವ ಅಗತ್ಯವನ್ನು ಕಾಂಗ್ರೆಸ್‌ ಪ್ರತಿಪಾದಿಸಿತ್ತು.
ರಾಹುಲ್‌ ಕಾಳಜಿ

ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಮಾನ ಪ್ರವೇಶ ಅವಕಾಶ ನೀಡುವ ಜತೆಗೆ, ಜಾತಿ, ಧರ್ಮ, ಲಿಂಗದ ಆಧಾರದಲ್ಲಿ ತಾರತಮ್ಯಕ್ಕೆ ಆಸ್ಪದವಾಗದಂತೆ ಘನತೆಯಿಂದ ನಡೆಸಿಕೊಳ್ಳಲು ಪೂರಕವಾಗಿ ಸ್ಪಷ್ಟ ಕಾಯಿದೆ ರೂಪಿಸುವಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪಕ್ಷದ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದರು. ಇದಕ್ಕೆ ಸ್ಪಂದಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶೀಘ್ರ ಹೊಸ ಕಾಯಿದೆ ರೂಪಿಸುವುದಾಗಿ ಕಳೆದ ಏಪ್ರಿಲ್‌ ತಿಂಗಳಲ್ಲಿ ಪ್ರಕಟಿಸಿದ್ದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

26 minutes ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

1 hour ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

1 hour ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

2 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

2 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

3 hours ago