ಲೈಂಗಿಕ್ ಕಿರುಕುಳ ಶೀ-ಬಾಕ್ಸ್ ಬಗ್ಗೆ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.27.ಜೂನ್.25:- ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆಯ ನಿಬಂದನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೆ ತರುವುದಕ್ಕೋಸ್ಕರ SHe Box Portal  ನ್ನು ಪ್ರಾರಂಭಿಸಲಾಗಿರುತ್ತದೆ. ಸದರಿ ಪೋರ್ಟಲ್, ಎಲ್ಲಾ ಸಾರ್ವಜನಿಕ, ಸರಕಾರಿ/ಖಾಸಗಿ, ಸಾರ್ವಜನಿಕ , ಸಂಘಟಿತ ಅಥವಾ ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬ ಮಹಿಳಾ ಉದ್ಯೋಗಿಯು ತನ್ನ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಲು ಹಾಗೂ ಅದರ ಸ್ಥಿತಿಯನ್ನು ಪತ್ತೆ ಹಚ್ಚಲು ಮಾರ್ಗವನ್ನು ಒದಗಿಸುತ್ತದೆ.

ಈ ಪೋರ್ಟಲ್‍ನ  ಲಿಂಕ್ ಅನ್ನು ಎಲ್ಲಾ ವೆಬ್‍https://shebox.wcd.gov.inಸೈಟ್‍ಗಳಲ್ಲಿ ಹೈಲೈಟ್ ಮಾಡಲು ಹಾಗೂ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚಿಸಿರುತ್ತಾರೆ.


ಈಗಾಗಲೇ ತಿಳಿಸಿರುವಂತೆ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013 ಅಧಿನಿಯಮದಡಿಯಲ್ಲಿ, ಬೀದರ ಜಿಲ್ಲೆಯ 10 ಹಾಗೂ 10ಕ್ಕಿಂತ ಹೆಚ್ಚು ಜನ ಕರ್ತವ್ಯ ನಿರ್ವಹಿಸುವ ಎಲ್ಲಾ ಸರಕಾರಿ/ಖಾಸಗಿ, ಸಾರ್ವಜನಿಕ, ಸಂಘಟಿತ ಅಥವಾ ಅಸಂಘಟಿತ ವಲಯಗಳಲ್ಲಿ ರಚಿಸಿರುವ ಆಂತರಿಕ ದೂರು ಸಮಿತಿಯ ವಿವರಗಳನ್ನು SHe Box Portal  ನಲ್ಲಿ ಅಪ್ಲೋಡ್ ಮಾಡದೇ ಇದ್ದಲ್ಲಿ, ಗೌರವಾನ್ವಿತ ಸುಪ್ರೀಂ ಕೋರ್ಟ್ ಆದೇಶದಂತೆ, ಕಡ್ಡಾಯವಾಗಿ ಅಪ್‍ಲೋಡ್ ಮಾಡುವಂತೆ ಹಾಗೂ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳವನ್ನು ಎದುರಿಸುತ್ತಿರುವ ಹೆಚ್ಚು ಮಹಿಳಾ ಉದ್ಯೋಗಿಗಳು ಇದನ್ನು ಬಳಸಲು ಸಾಧ್ಯವಾಗುವಂತೆ ಕ್ರಮ ಕೈಗೊಳ್ಳಲು, ಜಿಲ್ಲೆಯ ಎಲ್ಲಾ ಸರಕಾರಿ, ಸಾರ್ವಜನಿಕ, ಖಾಸಗಿ, ಸಂಘಟಿತ ಅಥವಾ ಅಸಂಘಟಿತ ವಲಯಗಳ ಅಧಿಕಾರಿಗಳಿಗೆ/ಮುಖ್ಯಸ್ಥರಿಗೆ ಸೂಚಿಸಿರುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರ ಬೀದರ ದೂರವಾಣಿ:  9980702545, 8310032095 ಗೆ ಸಂಪರ್ಕಿಸಬಹುದಾಗಿದೆ.

prajaprabhat

Recent Posts

ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮ ಮತ್ತು ಶಾಂತಿಗಾಗಿ ಭರವಸೆಯನ್ನು ತರುತ್ತದೆ.

ಶ್ವೇತಭವನ: ಆಪರೇಷನ್ 'ಮಿಡ್‌ನೈಟ್ ಹ್ಯಾಮರ್' ಇರಾನ್ ಪರಮಾಣು ಬೆದರಿಕೆಯನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿದೆ, ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮ ಮತ್ತು…

3 hours ago

ರಾಷ್ಟ್ರೀಯ ಅಕ್ವಾಟಿಕ್ಸ್: 400 ಮೀಟರ್ ಐಎಂನಲ್ಲಿ ಶಾನ್ ಗಂಗೂಲಿ ಕೂಟ ದಾಖಲೆ; ಪದಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ

ಒಡಿಶಾದ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ 78ನೇ ಸೀನಿಯರ್ ರಾಷ್ಟ್ರೀಯ ಅಕ್ವಾಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಶಾನ್ ಗಂಗೂಲಿ 400 ಮೀಟರ್…

3 hours ago

ತುರ್ತು ಪರಿಸ್ಥಿತಿ ದೇಶದ ನೈತಿಕತೆಯನ್ನು ಕುಗ್ಗಿಸಿತು, ಸ್ವಾತಂತ್ರ್ಯದ ಮೌಲ್ಯವನ್ನು ಕಲಿಸಿತು: ವಿದೇಶಾಂಗ ಸಚಿವ ಜೈಶಂಕರ್

ಹೊಸ ದೆಹಲಿ.27.ಜೂನ್.25:- 1975 ರಲ್ಲಿ ಹೇರಲಾದ ತುರ್ತು ಪರಿಸ್ಥಿತಿಯು ದೇಶ ಮತ್ತು ಸಮಾಜದ ನೈತಿಕತೆಯನ್ನು ಮುರಿಯುವ ಗುರಿಯನ್ನು ಹೊಂದಿತ್ತು ಎಂದು…

3 hours ago

ಪುರಿಯಲ್ಲಿ ಭಗವಾನ್ ಜಗನ್ನಾಥ ಮತ್ತು ಅವರ ಇಬ್ಬರು ಸಹೋದರರ ವಿಶ್ವಪ್ರಸಿದ್ಧ ರಥಯಾತ್ರೆ ಇಂದು ಪ್ರಾರಂಭವಾಗಿದೆ.

ಪುರಿಯಲ್ಲಿ.27.ಜೂನ್.25:- ನಡೆಯುವ ರಥೋತ್ಸವ ಎಂದೂ ಕರೆಯಲ್ಪಡುವ ಅತ್ಯಂತ ನಿರೀಕ್ಷಿತ, ಅತಿದೊಡ್ಡ ವಾರ್ಷಿಕ ರಥಯಾತ್ರೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಇದು ದೇಶ ಮತ್ತು…

3 hours ago

ಬೋಧಕೇತರ ಸಾರ್ವತ್ರಿಕ ವರ್ಗಾವಣೆ ಸರ್ಕಾರದಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು.27.ಜೂನ್.25:- ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆಗಳ ಬಗ್ಗೆ ಶಿಕ್ಷಣ ಇಲಾಖೆಯು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಸರ್ಕಾರದ…

5 hours ago

7, 10ನೇ ತರಗತಿ ಮೇಲೇ ಉದ್ಯೋಗ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವು ದೊಡ್ಡ ಘೋಷಣೆ ಮಾಡಿದೆ. ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನ?*…

7 hours ago