ಲೋಕಸಭೆಯಲ್ಲಿ 5 ವರ್ಷಗಳಿಂದ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ: ಸಂಸದ ಸಾಗರ್‌ ಖಂಡ್ರೆ

ಹೊಸ ದೆಹಲಿ.31.ಮಾರ್ಚ್.25:- ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. 2019ರಿಂದ ಲೋಕಸಭೆಯ ಉಪಸಭಾಧ್ಯಕ್ಷರ ಹುದ್ದೆ ತುಂಬಿಲ್ಲ. ಸಂವಿಧಾನದ 93ನೇ ವಿಧಿ ಉಲ್ಲಂಘಿಸಲಾಗಿದೆ’ ಎಂದು ಸಂಸದ ಸಾಗರ್‌ ಖಂಡ್ರೆ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.

ಸಂಸತ್ತಿನ ಕೆಳಮನೆ ಸಾಂವಿಧಾನಿಕವಾಗಿ, ಪ್ರಜಾಪ್ರಭುತ್ವದ ತತ್ವದಲ್ಲಿ ನಡೆಯಬೇಕು.

ಆದರೆ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತಾಳಿದೆ. ಸಂಸತ್ತು ಪ್ರಜಾಸತ್ತಾತ್ಮಕವಾಗಿ ನಡೆಯಬೇಕಾದರೆ, ಎಲ್ಲ ಜನಪ್ರತಿನಿಧಿಗಳಿಗೂ ಪಕ್ಷಭೇದವಿಲ್ಲದೆ ಸಮಾನ ಅವಕಾಶ ದೊರಕಬೇಕು.

ಸದಸ್ಯರು ಸಾಂವಿಧಾನಿಕ ಕರ್ತವ್ಯ ನಿಭಾಯಿಸುವಂತಹ ವಾತಾವರಣ ಇರಬೇಕು. ಆದರೆ, ಇತ್ತೀಚಿನ ಕೆಲವು ಪ್ರವೃತ್ತಿಗಳು ಈ ವ್ಯವಸ್ಥೆಯ ಪಾವಿತ್ರ‍್ಯತೆಗೆ ಧಕ್ಕೆ ತಂದಿವೆ. ಪ್ರಜಾಪ್ರಭುತ್ವದ ಮೂಲ ತತ್ವಗಳನ್ನೇ ಅಪಹಾಸ್ಯ ಮಾಡುತ್ತಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದನದಲ್ಲಿ ಪ್ರತಿಪಕ್ಷದ ಸದಸ್ಯರಿಗೆ ಮಾತನಾಡಲು ಸೂಕ್ತ ಅವಕಾಶ ಕಲ್ಪಿಸದೆ, ಅವರ ಹಕ್ಕನ್ನೇ ಮೊಟಕುಗೊಳಿಸಲಾಗುತ್ತಿದೆ. ಇದು ಸಂಸದೀಯ ಕಲಾಪದ ಚರ್ಚೆಯ ಸ್ವರೂಪವನ್ನು ದುರ್ಬಲಗೊಳಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷಗಳ ಸಂಸದರು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದಾಗ, ಅವರ ಮಾತುಗಳು ಕೇಳದ ರೀತಿಯಲ್ಲಿ ಮೈಕ್ರೊಫೋನ್‌ ಆಫ್ ಮಾಡಲಾಗುತ್ತಿದೆ. ಪ್ರತಿಪಕ್ಷ ಸದಸ್ಯರ ಧ್ವನಿಯನ್ನೇ ದಮನ ಮಾಡುವ ಅಪಾಯಕಾರಿ ಪ್ರವೃತ್ತಿ ಬೆಳೆಯುತ್ತಿದೆ. ಆದರೆ, ಆಡಳಿತ ಪಕ್ಷದ ಸದಸ್ಯರಿಗೆ ಮುಕ್ತ ಅವಕಾಶ ನೀಡಲಾಗುತ್ತಿದೆ. ಈ ತಾರತಮ್ಯ ಪ್ರವೃತ್ತಿ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ತಿಳಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆಯಲ್ಲಿ ಕೆಲವು ಪ್ರಮುಖ ಸಚಿವಾಲಯಗಳನ್ನು ಹೊರಗಿಡಲಾಗುತ್ತಿದೆ. ಇದರಿಂದ ಹಣಕಾಸು ಮೇಲ್ವಿಚಾರಣೆ ಮತ್ತು ಪಾರದರ್ಶಕತೆ ತೀವ್ರವಾಗಿ ಕುಗ್ಗುತ್ತಿದೆ. ತುರ್ತು ಮತ್ತು ಜನರಿಗೆ ಉಪಯುಕ್ತವಾದ ವಿಷಯಗಳ ಬಗ್ಗೆ ಚರ್ಚಿಸಲು ಇರುವ ನಿಯಮ 193ನ್ನು ಸಮರ್ಪಕವಾಗಿ ಬಳಸಲು ಅವಕಾಶ ನೀಡುತ್ತಿಲ್ಲ. ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಸಂಸದೀಯ ಸ್ಥಾಯಿ ಸಮಿತಿಗಳ ಸ್ವಾಯತ್ತತೆಯನ್ನು ಸಹ ಕಸಿದುಕೊಳ್ಳಲಾಗುತ್ತಿದೆ. ಕೆಲವು ಸಂದರ್ಭಗಳಲ್ಲಿ ಸ್ಪೀಕರ್ ಕಚೇರಿಯಿಂದಲೇ ವರದಿಗಳ ತಿದ್ದುಪಡಿಯ ಸೂಚನೆ ನೀಡಲಾಗುತ್ತಿದೆ.

ಶೂನ್ಯ ವೇಳೆಯಲ್ಲಿ ತುರ್ತು ವಿಷಯಗಳನ್ನು ಪ್ರಸ್ತಾಪಿಸಲು ಸಂಸದರಿಗೆ ನೀಡಲಾಗುತ್ತಿದ್ದ ಅವಕಾಶವನ್ನು ನಿರ್ಬಂಧಿಸಲಾಗುತ್ತಿದೆ. ಇದು ಸರ್ಕಾರದ ದಮನಕಾರಿ ಪ್ರವೃತ್ತಿ ಎಂದು ಸಾಗರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸದಸ್ಯರ ಮಸೂದೆಗಳು ಮತ್ತು ನಿರ್ಣಯಗಳಿಗೆ ಗಣನೀಯ ಹಿನ್ನಡೆಯಾಗುತ್ತಿದೆ. ಚರ್ಚೆಗೆ ಬೇಕಾದಷ್ಟು ಸಮಯ ಲಭಿಸುತ್ತಿಲ್ಲ. ಸಂಸತ್‌ ಟಿವಿಯಲ್ಲಿ ಪ್ರತಿಪಕ್ಷ ನಾಯಕರು ಮತ್ತು ಸದಸ್ಯರು ಮಾತನಾಡುವಾಗ ಅವರತ್ತ ಕ್ಯಾಮೆರಾ ಇರುತ್ತಿಲ್ಲ.

Agಸಭಾಧ್ಯಕ್ಷರು ಮತ್ತು ಸದನದ ಇತರ ದೃಶ್ಯಗಳನ್ನು ತೋರಿಸಲಾಗುತ್ತದೆ. ಇದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ಹೇಳಿದ್ದಾರೆ.

ಸಲಹಾ ಸಮಿತಿ ಸಭೆಗಳನ್ನು ನಿಯಮಿತವಾಗಿ ಕರೆಯದೆ, ನಿರ್ಲಕ್ಷಿಸಲಾಗುತ್ತಿದೆ. ಈ ಬೆಳವಣಿಗೆಳಿಂದ ನಮ್ಮ ಸಂಸದೀಯ ವ್ಯವಸ್ಥೆಯ ಮೂಲಭೂತ ತತ್ವಗಳಿಗೆ ಧಕ್ಕೆಯಾಗುತ್ತಿದೆ. ತಕ್ಷಣ ಸರಿಪಡಿಸುವ ಅಗತ್ಯವಿದೆ.

ನ್ಯಾಯಸಮ್ಮತ, ಪಾರದರ್ಶಕ ಮತ್ತು ಸಂವಿಧಾನದ ನಿಯಮಗಳ ಅನುಸರಣೆಯನ್ನು ಮರುಸ್ಥಾಪಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬ ಜನಪ್ರತಿನಿಧಿಗೂ ಸದನದಲ್ಲಿ ಧ್ವನಿ ಎತ್ತಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

4 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

5 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago