Categories: ದೇಶ

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಸರಿಸಬೇಕಾದ ನಡೆಗಳ ಕುರಿತು ಕಾಂಗ್ರೆಸ್ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ

26 ನೋವೆಂಬರ್ 25 ನ್ಯೂ ದೆಹಲಿ:-ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಸರಿಸಬೇಕಾದ ನಡೆಗಳ ಕುರಿತು ಕಾಂಗ್ರೆಸ್ ಅಧ್ಯಕ್ಷರು ಆಗಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆ ನಡೆಯಿತು.


ಸಭೆಯಲ್ಲಿ ಮೈತ್ರಿಕೂಟದ ಹಲವು ನಾಯಕರು ಪಾಲ್ಗೊಂಡು ಎರಡು ಸದನಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಿದರು.
ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವ ಮೈತ್ರಿಕೂಟ ಅಬೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತ ಯಂತ್ರಗಳ ಲೋಪ ಸೇರಿದಂತೆ ಮತ್ತು ಇತರ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಸಭೆಯಲ್ಲಿ ತಂತ್ರರೂಪಿಸಿದರು.


ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಸೇರಿದಂತೆ ಪ್ರಮುಖ ಮಸೂದೆಗಳನ್ನು ಕೇಂದ್ರ ಸರ್ಕಾರ ಉಭಯ ಸದನಗಳಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ಮುಂದಾಗಿದೆ.


ಕಲಾಪ ಆರಂಭವಾಗುವುದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿರುವ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆಯ ಮುಖಂಡ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ವಿದ್ಯಮಾನ ಮತಯಂತ್ರಗಳು ಬಿಜೆಪಿ ಪರವಾಗಿ ಕೆಲಸ ಮಾಡಿವೆ. ಇದರಿಂದಾಗಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು ಬಂದಿದೆ, ಹೀಗಾಗಿ ಮತಪತ್ರಗಳನ್ನು ಮತ್ತೆ ಜಾರಿ ಮಾಡಬೇಕೆಂದು ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.


ಸಂಸತ್ ಕಲಾಪ ಆರಂಭವಾಗುವುದಕ್ಕೂ ಮುನ್ನ ನಿನ್ನೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷಗಳ ನಾಯಕರ ಸಭೆ ಕರೆದು ಸುಗಮ ಕಲಾಪಕ್ಕೆ ಮನವಿ ಮಾಡಲಾಗಿದೆ. ಆದರೆ ಪ್ರತಿ ಬಾರಿಯಂತೆಯೂ ಈ ಬಾರಿಯೂ ಕಲಾಪ ಕಾವೇರಿದ ಕಲಾಪ ನಡೆಯುವ ಸಾಧ್ಯತೆ ಇದೆ.

prajaprabhat

Share
Published by
prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

1 hour ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

2 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

2 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

2 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

2 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

5 hours ago