04.ಜ.25.ಬೀದರ:- ಬೀದರ ಜಿಲ್ಲೆಗೆ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೋಳಿ ಅವರು ಜನವರಿ.7 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅವರು ಅಂದು ಬೆಳಿಗ್ಗೆ 11 ಗಂಟೆಗೆ ಹುಮನಾಬಾದ ತಾಲ್ಲೂಕಿನ ಜಿಲ್ಲಾ ಮುಖ್ಯ ರಸ್ತೆ ಎನ್ಎಚ್.9 ರಲ್ಲಿ ಕಿ.ಮೀ.6.40 ರಿಂದ 9.20 ವರೆಗಿನ ಚಿಟಗುಪ್ಪಾ ವಯಾ ಶಮತಬಾದ್ ರಸ್ತೆಯಲ್ಲಿ ಕೈಗೊಂಡಿರುವ ಕಾಮಗಾರಿಯ ಪರಿವೀಕ್ಷಣೆ ಮಾಡಲಿದ್ದಾರೆ.
ನಂತರ ಮಧ್ಯಾಹ್ನ 2 ಗಂಟೆಗೆ
ನೌಬಾದ್-ಕಮಲನಗರ-ನಾಬಾದ್ (ಬೀದರ) ಮಹಾರಾಷ್ಟ್ರ ಗಡಿ ಭಾಗದ ರಾಷ್ಟ್ರೀಯ ಹೆದ್ದಾರಿ-50 ರ ಕಿ.ಮೀ. 0.00 ದಿಂದ ಕಿ.ಮೀ. 54.370 ನೌಬಾದ್ವರೆಗಿನ ಕೈಗೊಳ್ಳಲಾಗಿರುವ ರಸ್ತೆ ಕಾಮಗಾರಿಗಳ ಪರಿವೀಕ್ಷಣೆ ನಡೆಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಬೀದರ್ ಜಿಲ್ಲಾ ಕಾಂಗ್ರೆಸ್ ಕಛೇರಿ ಭೇಟಿ ನೀಡುವರು.
ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಲೋಕೋಪಯೋಗಿ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.