17ಡಿಸೆಂಬರ್.24 ಬೀದರ್:- ಡಿಸೆಂಬರ್.14 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಜಿಲ್ಲೆಯ ಎಲ್ಲಾ ನ್ಯಾಯಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 73,628 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಒಟ್ಟು 23,43,28,647 ರೂ.ಗಳ ಪರಿಹಾರವನ್ನು ಕಕ್ಷಿದಾರರಿಗೆ ಒದಗಿಸಲಾಗಿದೆ ಎಂದು ಬೀದರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ತಿಳಿಸಿದರು.
ಅವರು ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸದರಿ ಲೋಕ ಅದಾಲತ್ನಲ್ಲಿ 10,191 (ಪೆಂಡಿಂಗನಲ್ಲಿನ) ಪ್ರಕರಣಗಳನ್ನು ಇತ್ಯರ್ಥಗೊಳಿಸಿ 13,16,69,342 ರೂ. ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ ಹಾಗೂ ಜಿಲ್ಲೆಯಾದ್ಯಾಂತ ಒಟ್ಟು 63,437 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು 10,26,59,305 ರೂ. ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ.
ಅದೇ ರೀತಿ ವೈವಾಹಿಕ ವ್ಯಾಜ್ಯವನ್ನು ಇತ್ಯರ್ಥಪಡಿಸಿ ಸಂದಾನದ ಮೂಲಕ 03 ಜೋಡಿ ದಂಪತಿಯನ್ನು ರಾಜಿ ಸಂಧಾನದ ಮೂಲಕ ಒಂದಾಗಿರುತ್ತಾರೆ ಎಂದರು.