“ವಚನದರ್ಶನ” ಮಿಥ್ಯ Vs ಸತ್ಯ ಪುಸ್ತಕ ಬಿಡುಗಡೆ.!

ಬೆಂಗಳೂರು.01.ಮಾರ್ಚ್.25:- ಇಂದು ಬೆಂಗಳೂರಿನ ಬಸವ ಸಮಿತಿಯ ಸಭಾಂಗಣದಲ್ಲಿ “ವಚನದರ್ಶನ” ಮಿಥ್ಯ Vs ಸತ್ಯ ಪುಸ್ತಕ ಬಿಡುಗಡೆ ಕಾರ್ಯಕ್ರಮ ಒಂದು ಐತಿಹಾಸಿಕ ಹಾಗು ಹೊಸದೊಂದು ಬೆಳವಣಿಗೆಗೆ ನಾಂದಿ ಹಾಡಿತು.

ಪ್ರಪ್ರಥಮ ಬಾರಿಗೆ ಜಾಗತಿಕ ಲಿಂಗಾಯತ ಮಹಾಸಭಾ ಹಾಗು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಂಸ್ಥೆಗಳು ಒಂದೆ ವೇದಿಕೆಯಲ್ಲಿ ಸಮಾವೇಶಗೊಂಡವು.ಎರಡು ಸಂಸ್ಥೆಗಳು ಸಮುದಾಯದ ಹಿತಕ್ಕಾಗಿ ಸಮರಸದ ವಿಚಾರಗಳನ್ನು ವ್ಯಕ್ತಪಡಿಸಿದವು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷರಾದ ಶರಣ ಶಂಕರ ಬಿದರಿಯವರ ಮಾತುಗಳು ಹೃದಯಕ್ಕೆ ನಾಟಿದವು.ನನ್ನ ಕಣ್ಣಂಚಿನಿಂದ ಸಂತೋಷದ ನೀರು ನನಗೆ ಗೊತ್ತಿಲ್ಲದೆ ಹರಿದವು.ನಾಡಿನ ಎಲ್ಲ ಪ್ರಮುಖ ಪೂಜ್ಯರು ಉಪಸ್ಥಿತರಿದ್ದು ಸಕಾರಾತ್ಮಕ ಮಾತುಗಳನ್ನಾಡಿ ಒಗ್ಗಟ್ಟಿನಿಂದ ಲಿಂಗಾಯತ ಧರ್ಮಕ್ಕೆ ಮಾನ್ಯತೆ ಪಡೆಯೋಣ ಎಂಬ ವಿಚಾರ ಹಂಚಿಕೊಂಡರು.

“ವಚನದರ್ಶನ” ಮಿಥ್ಯ Vs ಸತ್ಯ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಶ್ರೀ ಎಂ.ಬಿ.ಪಾಟೀಲರು ಲಿಂಗಾಯತರು ಸರ್ವಧರ್ಮಗಳನ್ನು ಗೌರವಿಸುವರಾಗಿದ್ದೇವೆ ಆದರೆ ನಮ್ಮ ಅಸ್ಮಿತೆಗೆ ಯಾರಾದರು ಧಕ್ಕೆ ತಂದರೆ ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು.ಸನ್ಮಾನ್ಯ ಬಸವರಾಜ ಹೊರಟ್ಟಿ ,ಆಳಂದ ಶಾಸಕ ಶ್ರೀ ಬಿ.ಆರ್.ಪಾಟೀಲರು ಹಾಗು ವಿದ್ವಾಂಸರಾದ ಗೊ.ರು.ಚ ರವರು ತಮ್ಮ ವಿಚಾರ ಹಂಚಿಕೊಂಡರು.

ಕರ್ನಾಟಕದ ಎಲ್ಲ ಜಿಲ್ಲೆಗಳಿಂದ ಜನರು ಭಾಗವಹಿಸಿ ಸಭಾಂಗಣ ಕಿಕ್ಕಿರಿದು ತುಂಬಿತ್ತು. ಒಟ್ಟಾರೆ ಇದೊಂದು ಅವಿಸ್ಮರಣೀಯ ಹಾಗು ಅಭೂತಪೂರ್ವ ಕಾರ್ಯಕ್ರಮವಾಗಿತ್ತು.

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

1 hour ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

4 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

4 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

4 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

4 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

4 hours ago