ಬೆಂಗಳೂರು.01.ಮಾರ್ಚ್.25:- ಇಂದು ಬೆಂಗಳೂರಿನ ಬಸವ ಸಮಿತಿಯ ಸಭಾಂಗಣದಲ್ಲಿ “ವಚನದರ್ಶನ” ಮಿಥ್ಯ Vs ಸತ್ಯ ಪುಸ್ತಕ ಬಿಡುಗಡೆ ಕಾರ್ಯಕ್ರಮ ಒಂದು ಐತಿಹಾಸಿಕ ಹಾಗು ಹೊಸದೊಂದು ಬೆಳವಣಿಗೆಗೆ ನಾಂದಿ ಹಾಡಿತು.
ಪ್ರಪ್ರಥಮ ಬಾರಿಗೆ ಜಾಗತಿಕ ಲಿಂಗಾಯತ ಮಹಾಸಭಾ ಹಾಗು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಂಸ್ಥೆಗಳು ಒಂದೆ ವೇದಿಕೆಯಲ್ಲಿ ಸಮಾವೇಶಗೊಂಡವು.ಎರಡು ಸಂಸ್ಥೆಗಳು ಸಮುದಾಯದ ಹಿತಕ್ಕಾಗಿ ಸಮರಸದ ವಿಚಾರಗಳನ್ನು ವ್ಯಕ್ತಪಡಿಸಿದವು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷರಾದ ಶರಣ ಶಂಕರ ಬಿದರಿಯವರ ಮಾತುಗಳು ಹೃದಯಕ್ಕೆ ನಾಟಿದವು.ನನ್ನ ಕಣ್ಣಂಚಿನಿಂದ ಸಂತೋಷದ ನೀರು ನನಗೆ ಗೊತ್ತಿಲ್ಲದೆ ಹರಿದವು.ನಾಡಿನ ಎಲ್ಲ ಪ್ರಮುಖ ಪೂಜ್ಯರು ಉಪಸ್ಥಿತರಿದ್ದು ಸಕಾರಾತ್ಮಕ ಮಾತುಗಳನ್ನಾಡಿ ಒಗ್ಗಟ್ಟಿನಿಂದ ಲಿಂಗಾಯತ ಧರ್ಮಕ್ಕೆ ಮಾನ್ಯತೆ ಪಡೆಯೋಣ ಎಂಬ ವಿಚಾರ ಹಂಚಿಕೊಂಡರು.
“ವಚನದರ್ಶನ” ಮಿಥ್ಯ Vs ಸತ್ಯ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಶ್ರೀ ಎಂ.ಬಿ.ಪಾಟೀಲರು ಲಿಂಗಾಯತರು ಸರ್ವಧರ್ಮಗಳನ್ನು ಗೌರವಿಸುವರಾಗಿದ್ದೇವೆ ಆದರೆ ನಮ್ಮ ಅಸ್ಮಿತೆಗೆ ಯಾರಾದರು ಧಕ್ಕೆ ತಂದರೆ ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು.ಸನ್ಮಾನ್ಯ ಬಸವರಾಜ ಹೊರಟ್ಟಿ ,ಆಳಂದ ಶಾಸಕ ಶ್ರೀ ಬಿ.ಆರ್.ಪಾಟೀಲರು ಹಾಗು ವಿದ್ವಾಂಸರಾದ ಗೊ.ರು.ಚ ರವರು ತಮ್ಮ ವಿಚಾರ ಹಂಚಿಕೊಂಡರು.
ಕರ್ನಾಟಕದ ಎಲ್ಲ ಜಿಲ್ಲೆಗಳಿಂದ ಜನರು ಭಾಗವಹಿಸಿ ಸಭಾಂಗಣ ಕಿಕ್ಕಿರಿದು ತುಂಬಿತ್ತು. ಒಟ್ಟಾರೆ ಇದೊಂದು ಅವಿಸ್ಮರಣೀಯ ಹಾಗು ಅಭೂತಪೂರ್ವ ಕಾರ್ಯಕ್ರಮವಾಗಿತ್ತು.
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ್ಯಾಲಿ…