ಬೆಂಗಳೂರು.01.ಮಾರ್ಚ್.25:- ಇಂದು ಬೆಂಗಳೂರಿನ ಬಸವ ಸಮಿತಿಯ ಸಭಾಂಗಣದಲ್ಲಿ “ವಚನದರ್ಶನ” ಮಿಥ್ಯ Vs ಸತ್ಯ ಪುಸ್ತಕ ಬಿಡುಗಡೆ ಕಾರ್ಯಕ್ರಮ ಒಂದು ಐತಿಹಾಸಿಕ ಹಾಗು ಹೊಸದೊಂದು ಬೆಳವಣಿಗೆಗೆ ನಾಂದಿ ಹಾಡಿತು.
ಪ್ರಪ್ರಥಮ ಬಾರಿಗೆ ಜಾಗತಿಕ ಲಿಂಗಾಯತ ಮಹಾಸಭಾ ಹಾಗು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಂಸ್ಥೆಗಳು ಒಂದೆ ವೇದಿಕೆಯಲ್ಲಿ ಸಮಾವೇಶಗೊಂಡವು.ಎರಡು ಸಂಸ್ಥೆಗಳು ಸಮುದಾಯದ ಹಿತಕ್ಕಾಗಿ ಸಮರಸದ ವಿಚಾರಗಳನ್ನು ವ್ಯಕ್ತಪಡಿಸಿದವು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷರಾದ ಶರಣ ಶಂಕರ ಬಿದರಿಯವರ ಮಾತುಗಳು ಹೃದಯಕ್ಕೆ ನಾಟಿದವು.ನನ್ನ ಕಣ್ಣಂಚಿನಿಂದ ಸಂತೋಷದ ನೀರು ನನಗೆ ಗೊತ್ತಿಲ್ಲದೆ ಹರಿದವು.ನಾಡಿನ ಎಲ್ಲ ಪ್ರಮುಖ ಪೂಜ್ಯರು ಉಪಸ್ಥಿತರಿದ್ದು ಸಕಾರಾತ್ಮಕ ಮಾತುಗಳನ್ನಾಡಿ ಒಗ್ಗಟ್ಟಿನಿಂದ ಲಿಂಗಾಯತ ಧರ್ಮಕ್ಕೆ ಮಾನ್ಯತೆ ಪಡೆಯೋಣ ಎಂಬ ವಿಚಾರ ಹಂಚಿಕೊಂಡರು.
“ವಚನದರ್ಶನ” ಮಿಥ್ಯ Vs ಸತ್ಯ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಶ್ರೀ ಎಂ.ಬಿ.ಪಾಟೀಲರು ಲಿಂಗಾಯತರು ಸರ್ವಧರ್ಮಗಳನ್ನು ಗೌರವಿಸುವರಾಗಿದ್ದೇವೆ ಆದರೆ ನಮ್ಮ ಅಸ್ಮಿತೆಗೆ ಯಾರಾದರು ಧಕ್ಕೆ ತಂದರೆ ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು.ಸನ್ಮಾನ್ಯ ಬಸವರಾಜ ಹೊರಟ್ಟಿ ,ಆಳಂದ ಶಾಸಕ ಶ್ರೀ ಬಿ.ಆರ್.ಪಾಟೀಲರು ಹಾಗು ವಿದ್ವಾಂಸರಾದ ಗೊ.ರು.ಚ ರವರು ತಮ್ಮ ವಿಚಾರ ಹಂಚಿಕೊಂಡರು.
ಕರ್ನಾಟಕದ ಎಲ್ಲ ಜಿಲ್ಲೆಗಳಿಂದ ಜನರು ಭಾಗವಹಿಸಿ ಸಭಾಂಗಣ ಕಿಕ್ಕಿರಿದು ತುಂಬಿತ್ತು. ಒಟ್ಟಾರೆ ಇದೊಂದು ಅವಿಸ್ಮರಣೀಯ ಹಾಗು ಅಭೂತಪೂರ್ವ ಕಾರ್ಯಕ್ರಮವಾಗಿತ್ತು.
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…