Categories: ಬೀದರ

ವರದಿಗಾರಿಕೆಯಲ್ಲಿ ಓದುವ ಹಾಗೂ ಗೃಹಿಸುವಿಕೆಯನ್ನು ಬೆಳೆಸಿಕೊಳ್ಳಬೇಕು-ರಶ್ಮಿ.ಎಸ್.


18ಡಿಸೆಂಬರ್.16 ಬೀದರ್:- ಮಾಧ್ಯಮ ಕ್ಷೇತ್ರದಲ್ಲಿ ವರದಿಗಾರರು ಆಗಬಯಸುವ ವಿದ್ಯಾರ್ಥಿಗಳು ಪ್ರಸ್ತಕ ಓದುವಿಕೆ ಹಾಗೂ ವಿಷಯ ಗೃಹಿಸುವಿಕೆಯನ್ನು ಬೆಳೆಸಿಕೊಳ್ಳಬೇಕೆಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರು ಆಗಿರುವ ಪ್ರಜಾವಾಣಿ ಪತ್ರಿಕೆಯ ಉಪ ಸಂಪಾದಕರಾದ ರಶ್ಮಿ ಎಸ್.ಅವರು ಅಭಿಪ್ರಾಯಪಟ್ಟರು.


ಅವರು ಇಂದು ಬಿ.ವ್ಹಿ.ಭೂಮರೆಡ್ಡಿ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಲೇಖಕಿಯರ ಸಂಘದ ಸಂಯುಕ್ತಾಶ್ರಯದಲ್ಲಿ ಪತ್ರಿಕೋದ್ಯಮದಲ್ಲಿ ಅವಕಾಶಗಳು ಕುರಿತು ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಕನ್ನಡ ಭಾಷೆಯನ್ನು ಸಾಂಪ್ರದಾಯಕ ಹಾಗೂ ಪಾರಂಪರಿಕವಾಗಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಭಾಷೆಯನ್ನೆ ಬಂಡವಾಳವಾಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಅನುವಾದದ ಜಾಣ್ಮೆ ಇರಬೇಕು. ವಿಶೇಷ ಲೇಖನ ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜನರ ಜೊತೆ ಬೆರೆತುಕೊಂಡಷ್ಟು ಬರವಣಿಗೆಗೆ ವೈವಿದ್ಯಮಯ ದೃಷ್ಟಿಕೋನ ದೊರೆಯುತ್ತದೆ ಎಂದರು.


ಕರ್ನಾಟಕ ಲೇಖಕಿಯರ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ಭಾರತಿ ವಸ್ತ್ರದ ಅವರು ಮಾತನಾಡಿ, ಹುಟ್ಟಿನಿಂದ ಚಟ್ಟದವರೆಗೆ ತಾಯಿಭಾಷೆಯಾಗಿರುವ ಮಾತೃಭಾಷೆಯ ಮೇಲೆ ಹಿಡಿತಸಾಧಿಸಬೇಕೆಂದರು. ಎಲ್ಲರೂ ಪ್ರಥಮಭಾಷೆ ಕನ್ನಡದಲ್ಲಿ ಶಿಕ್ಷಣ ಕಲಿಯಬೇಕು. ಓದು ಬರಹ ಲೆಕ್ಕಾಚಾರದ ಮೂಲ ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಬೇಕೆಂದರು.


ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ ಮಾತನಾಡಿ, ಆಧುನಿಕ ವಿಜ್ಞಾನ ತಂತ್ರಜ್ಞಾನದಲ್ಲಿ ಮಾಧ್ಯಮದ ವಿಸ್ತಾರ ಸಾಕಷ್ಟು ಬೆಳೆದಿದೆ. ವಿದ್ಯಾರ್ಥಿಗಳು ಯುಟ್ಯೂಬ್ ಚಾನೆಲ್ ವೆಬ್ ಆಪ್‍ಗಳನ್ನು ಬಳಸಿ ಸುದ್ದಿ ಪ್ರಚಾರ ಮಾಡಬಹುದಾಗಿದೆಯೆಂದರು.


ವೇದಿಕೆಯಲ್ಲಿ ಉಪ ಪ್ರಾಚಾರ್ಯರ ಡಾ.ಅನಿಲಕುಮಾರ ಅಣದೂರೆ, ರೇಣುಕಾ ಮಳ್ಳಿ, ರತಿದೇವಿ ಜಿ.ಕೆ. ಹಾಗೂ ಇತರರು ವೇದಿಕೆಯಲ್ಲಿದ್ದರು.
ಅತಿಥಿಗಳಿಂದ ಆರಂಭದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಸಸಿಗೆ ನೀರೆರೆಯಲಾಯಿತು.

prajaprabhat

Share
Published by
prajaprabhat

Recent Posts

ನಮ್ಮ ಭಾಷೆಯ ಸೊಗಡ ಅಮೂಲ್ಯವಾಗಿದೆ ಸಾಹಿತಿ ಕೋಡಿ ಉಗನೆ ಮಂಜು.

ಯಳಂದೂರು.13.ಜೂನ್.25:- ಪಟ್ಟಣದ  ಅಂಬೇಡ್ಕರ್ ಭವನದ ಮುಂಭಾಗ ಬುದ್ಧ ಪ್ರಿಯ ಅಶೋಕ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿವೃತ್ತಿ ಪದವಿ ಪೂರ್ವ ಶಿಕ್ಷಣ…

1 hour ago

ಕರ್ನಾಟಕ ‘SSLC’ ಪರೀಕ್ಷೆ -2 ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ |Karnataka SSLC Exam-2 result

ಬೆಂಗಳೂರು.13.ಜೂನ್.25:- ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಈ ರೀತಿಯಾಗಿ ಫಲಿತಾಂಶ ಚೆಕ್…

1 hour ago

ಆಶಾ ಮಾರ್ಗದರ್ಶಕರ (ASHA Mentors) ಹುದ್ದೆಗಳು ಅಗತ್ಯವಿಲ್ಲವೆಂದು ‘ಕರ್ತವ್ಯದಿಂದ ಮುಕ್ತ’ಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.13.ಜೂನ್.25:- ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ…

3 hours ago

ಬೆಂಗಳೂರಿನಿಂದ ಬೀದರ್‌ಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ: ಕಲ್ಯಾಣ ಕರ್ನಾಟಕದ ಜನತೆಗೆ ಹೊಸ ಸಂಪರ್ಕದ ನೂತನ

ಬೆಂಗಳೂರು.13.ಜೂನ್.25:- ಬೀದರ್ ಬೆಂಗಳೂರು ಮತ್ತೊಂದು ವಿಶೇಷ ಟ್ರೈನ್ ಇದೇ 15 ಜೂನ್ ರಿಂದ ಪ್ರಾರಂಭ ಆಗ್ತಿದೆ. ಈ ಟ್ರೈನ್ ಕರ್ನಾಟಕದ…

3 hours ago

ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು.13.ಜೂನ್ .25:- ರಾಜ್ಯ ಸರ್ಕಾರಿ ನೌಕರರಿಗೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ…

4 hours ago

ಅತಿಥಿ ಶಿಕ್ಷಕರ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ.

ಬಳ್ಳಾರಿ.13.ಜೂನ್.25:- ರಾಜ್ಯದಲ್ಲಿ ಏಕಲವ್ಯ ಮಾದರಿ ಸ್ಕೂಲ್ ಗಳಲ್ಲಿ ಬೇಕಾಗಿರುವ ಶೀಕ್ಷಕರ ಹುದ್ದೆಗಳು ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ…

4 hours ago