ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶಿಕ್ಷಣ ಇಲಾಖೆಯಿಂದ ಬಿಡುಗಡೆ.

ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ.

ಶಿಕ್ಷಕರ ವರ್ಗಾವಣೆ ತಾಂತ್ರಿಕ ಕಾರಣಗಳಿಂದ ತಡೆ ನೀಡಲಾಗಿದ್ದ.

2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಕುರಿತು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುವ ಬಗ್ಗೆ.


ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶ

ಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣಾ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ ವರ್ಗಾವಣೆ(ಅನುಸೂಚಿ) ವಿಸ್ತ್ರತವಾದ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ಉಲ್ಲೇಖಿತ ಅಧಿಸೂಚನೆಯಂತೆ ಹೊರಡಿಸಲಾಗಿತ್ತು.

ಕೆಲವು ಆಡಳಿತಾತ್ಮಕ ಕಾರಣಗಳಿಂದ ವೇಳಾಪಟ್ಟಿಯನ್ನು ಉಲ್ಲೇಖಿತ-3ರ ಪ್ರಕಟಣೆ ದಿನಾಂಕ: 05/07/2025ರಲ್ಲಿ ತಿಳಿಸಿರುವಂತೆ ಈ ಕೆಳಕಂಡ ಅನುಬಂಧ-2 ರಲ್ಲಿರುವಂತೆ ಪರಿಷ್ಕರಿಸಿದೆ. ಉಳಿದಂತೆ ಉಲ್ಲೇಖಿತ ವರ್ಗಾವಣಾ ಅಧಿಸೂಚನೆಯಲ್ಲಿರುವ ಅನುಬಂಧ-1 ರಲ್ಲಿನ ಎಲ್ಲಾ ಮಾರ್ಗಸೂಚಿ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಈ ಪರಿಷ್ಕೃತ ವೇಳಾಪಟ್ಟಿಯ ಜೊತೆಯಲ್ಲಿ ಸದರಿ ಮಾರ್ಗಸೂಚಿ ಅಂಶಗಳನ್ನು ಓದಿಕೊಳ್ಳತಕ್ಕದ್ದು.

prajaprabhat

Recent Posts

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

2 hours ago

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

7 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

8 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

8 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

14 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

14 hours ago