ವಸತಿ ಶಾಲೆಯಲ್ಲಿ ಖಾಲಿ ಸ್ಥಾನಗಳಿಗೆ ನೇರ ಪ್ರವೇಶ

ಚಿತ್ರದುರ್ಗ.07.ಜುಲೈ.25:- ರಾಜ್ಯದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಇಂದಿರಾಗಾoಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 9 ಮತ್ತು 10 ನೇ ತರಗತಿಯಲ್ಲಿ ಸ್ಥಾನಗಳಿಗೆ ನೇರ ಪ್ರವೇಶ ನೀಡಲಾಗುತ್ತಿದೆ.

ಈಗಾಗಲೇ ಸರ್ಕಾರ ಆದೇಶದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆ ಸಮಿತಿಯಲ್ಲಿ ತಾಲ್ಲೂಕುವಾರು ಖಾಲಿ ಇರುವ ಸ್ಥಾನಗಳಿಗೆ ಮೀಸಲಾತಿ ಗುರುತಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 8 ಹಾಗೂ 10ನೇ ತರಗತಿಗೆ 28 ಸ್ಥಾನಗಳು ಖಾಲಿಯಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 6 ಹಾಗೂ 10ನೇ ತರಗತಿಗೆ 13, ಹಿರಿಯೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 5 ಹಾಗೂ 10ನೇ ತರಗತಿಗೆ 22, ಹೊಳಲ್ಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 15 ಹಾಗೂ 10ನೇ ತರಗತಿಗೆ 27,ಹೊಸದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 18 ಹಾಗೂ 10ನೇತರಗತಿಗೆ 19 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 2 ಹಾಗೂ 10ನೇ ತರಗತಿಗೆ 1 ಸ್ಥಾನ ಖಾಲಿಯಿದೆ.

ಅರ್ಹ ಅಭ್ಯರ್ಥಿಗಳು ತಮಗೆ ಸಮೀಪವಿರುವ ವಸತಿ ಶಾಲೆಗೆ ಭೇಟಿ ನೀಡಿ ನೇರ ಪ್ರವೇಶ ಪಡೆಯಬಹುದು. 2024-25ನೇ ಸಾಲಿನಲ್ಲಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಶೇ.75ಕ್ಕಿಂತ ಹೆಚ್ಚಿನ ಅಂಕಗಳೊoದಿಗೆ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮೊಹಮ್ಮದ್ ಜಿಲಾನಿ ಖುರೇಷಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ಜಾರಿ : ಸರ್ಕಾರ ನಿರ್ಧಾರ

ಬೆಂಗಳೂರು.08.ಜುಲೈ.25:- ರಾಜ್ಯದಲ್ಲಿ ದಿನಾಲು ಯುವ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ 'ಹೃದಯ ತಪಾಸಣೆ' ನಡೆಸಲು ಈ…

5 hours ago

ರಾಜ್ಯದಲ್ಲಿ ಪುರುಷರಿಗೂ ಉಚಿತ ಸಾರಿಗೆ ಬಸ್ ಪ್ರಯಾಣ : ಶಾಸಕ ಬಸವರಾಜ ರಾಯರೆಡ್ಡಿ ಘೋಷಣೆ..!

ಕೊಪ್ಪಳ.07.ಜುಲೈ.25:- ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟೀ ನಂತರ ಮಾತೊಂದು ಗ್ಯಾರಂಟಿ ಘೋಷಣೆ ಮಾಡಿ ಮಾಡಿದಾರೆ ಇನ್ಮುಂದೇ ರಾಜ್ಯ ಸರ್ಕಾರ…

6 hours ago

ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6,000 ಹುದ್ದೆಗಳಿಗೆ ನೇಮಕ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ 6000 ಭಾರತಿ ಖಾಯಂಹಿಡೆಗಳನು ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ಜಮೀನು ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಇಲಾಖೆಯಲ್ಲಿ ಖಾಲಿ…

6 hours ago

ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರ ನೇಮಕಾತಿಗೆ ವಾಕ್ ಇನ್ ಸಂದರ್ಶನ

ಕಲಬುರಗಿ.07.ಜುಲೈ.25:- ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಇತರರ 29 ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೌಕರರ ರಾಜ್ಯ…

6 hours ago

ಆಸ್ತಿ ಮಾಲೀಕ’ರಿಗೆ  ಜು.31 ರವರೆಗೆ ವಿಶೇಷ ‘ಇ-ಖಾತಾ’ ಆಂದೋಲನ.

ಬೆಂಗಳೂರು.07.ಜುಲೈ.25:- ರಾಜ್ಯದಲ್ಲಿ ಆಸ್ತಿ ಮಾಲೀಕರಿಗೆ ಜು.31 ರವರೆಗೆ ವಿಶೇಷ ಇ-ಖಾತಾ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.2025ರ ಜುಲೈ 1 ರಿಂದ…

6 hours ago

ಪತ್ರಕರ್ತರಿಗೆ 3 ದಿನಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.07.ಜುಲೈ.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ…

6 hours ago