ಬೀದರ.21.ಮೇ.25:- ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಸೇವೆಯಲ್ಲಿರುವ ವಾಹನ ಚಾಲಕ ಶಿವಪುತ್ರ ಮಲ್ಲಿಕಾರ್ಜುನ ಚೌಳೆ ಅವರು, ಬೀದರ್ ಮೋಟಾರ್ ವಾಹನ ತರಬೇತಿ ಶಾಲೆಯ ಅಧ್ಯಕ್ಷರು, ಸದಸ್ಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಸಂಗ ನಡೆಡಿದೆ.
ಮೇ. ೧೫ ರಂದು ಸಂಜೆ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಎಂ.ಎಸ್. ಬಿರಾದಾರ ಅವರಿಗೆ ಸಂಘದ ಅಧ್ಯಕ್ಷರಾದ ಪ್ರಕಾಶ್ ಗುಮ್ಮೆ ಹಾಗೂ ಸದಸ್ಯರು ಸೇರಿ, ಕಚೇರಿಗೆ ಬರುವ ಸಾರ್ವಜನಿಕರಿಗೆ ಹಾಗೂ ಕಾಯಂ ಚಾಲನಾ ಪತ್ರಕಾಗಿ ಬರುವ ಅಭ್ಯರ್ಥಿಗಳಿಗೆ, ರಸ್ತೆ ಸುರಕ್ಷತಾ ಅರಿವು ಮೂಡಿಸಿ ನಂತರ ಕಾಯಂ ಚಾಲನಾ (ಡಿ.ಎಲ್.ಟೆಸ್ಟ್) ನೋಡಬೇಕೆಂದು ಕೇಳಿದಾಗ, ಸ್ಥಳದಲ್ಲಿದ್ದ ಲಿಬ್ರಾ ಕಂಪೆನಿಯ ಹೊರಗುತ್ತಿಗೆ ಸಿಬ್ಬಂದಿ ಏಕವಚನದಲ್ಲಿ ನಿಂದಿಸಿದ್ದಾನೆ.
ಮುಂದೊರೆದು ನಮ್ಮ ಬಳಿ ಬಹಳ ಬೇರೆ ಕೆಲಸವಿದೆ. ನೀವೆಲ್ಲ ಹೇಳಿದಂತೆ ನಾವು ಕೇಳುವುದಿಲ್ಲ ಎಂದೂ ಹೆದರಿಸಿದ್ದಾನೆ ಮತ್ತು ನಿಮ್ಮನು ನೋಡಿಕೊಳ್ಳುತ್ತೇನೆಂದು ಬೆದರಿಕೆ ಒಡ್ಡಿ, ಗೂಂಡಾ ವರ್ತನೆ ತೋರಿದ್ದಾನೆ.
ಹೀಗಾಗಿ, ಈ ಗೂಂಡಾ ವಾಹನ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಮೇ.೧೫ ರಂದು ಮತ್ತು ಮೇ. ೧೬ ರಂದು ಜಿಲ್ಲಾಧಿಕಾರಿಗಳಿಗೆ ದೂರು ಪತ್ರ ಸಲ್ಲಿಸಲಾಗಿದೆ.
Àಂಘದ ಅಧ್ಯಕ್ಷ ಪ್ರಕಾಶ ಗುಮ್ಮೆ ಶಿವರಾಜ ಜಮಾದರ ಸಾಗರ ಉಂಡೆ ಸುದಾಕರ ಬಿರಾದರ ಮಕ್ಸುದ ಅಲಿ ಯೆಶೆಪ್ಪಾ ಚಿಟ್ಟಾ ಅಹ್ಮದ ಖಾನ ದತಾತ್ರಿ ಅಷ್ಟಿಗಿಕರ ಶೊಯೆಬ ಸಿದ್ದಿಕ ಹಾಗು ಸಂಘದ ಸದ್ಯಸರಿ ಹಾಜರಿದ್ದರು
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…