07/08/2025 12:40 PM

Translate Language

Home » ಲೈವ್ ನ್ಯೂಸ್ » ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

Facebook
X
WhatsApp
Telegram


ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅನಿರೀಕ್ಷಿತ ಭೇಟಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರೊಂದಿಗೆ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಗ್ಯಾಸ್ಟ್ರೋಎಂಟರಾಲಜಿ ಸಂಸ್ಥೆ, ಅಪಘಾತ, ಆಘಾತ ಮತ್ತು ತುರ್ತು ಆರೈಕೆ ಕೇಂದ್ರ ಮತ್ತು ವಾಣಿ ವಿಲಾಸ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಮತ್ತು ರೋಗಿಗಳ ಕುಶಲ ವಿಚಾರಿಸಿದರು.

ಉಭಯ ನಾಯಕರು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ವೇಳೆಯಲ್ಲಿ, ಆಸ್ಪತ್ರೆಯಲ್ಲಿ ಹಲವಾರು ರೋಗಿಗಳ ಜೊತೆ ಮಾತನಾಡಿದರು. ಡಾಕ್ಟರ್‌ಗಳು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ, ಊಟ ಚೆನ್ನಾಗಿದೆ ಎಂದು ರೋಗಿಗಳು ಪ್ರತಿಕ್ರಿಯಿಸಿದರು.
ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು.

ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಮುಖ್ಯಮಂತ್ರಿಗಳು ಮತ್ತು ಸಚಿವರು ಸೂಚನೆ ನೀಡಿದರು. ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ಮತ್ತು ಸಚಿವರು ತಿಳಿಸಿದರು.

ಸರ್ಕಾರದ 108 ಆಂಬ್ಯುಲೆನ್ಸ್ ಲಭ್ಯ: ಖಾಸಗಿ ಆಂಬ್ಯುಲೆನ್ಸ್ ಹಾವಳಿಯ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರದ 108 ಆಂಬ್ಯುಲೆನ್ಸ್ ದೊರೆಯುತ್ತದೆ. ದಿನಕ್ಕೆ 40ಕ್ಕೂ ಹೆಚ್ಚು ಹೆರಿಗೆಗಳು ವಾಣಿ ವಿಲಾಸ ಆಸ್ಪತ್ರೆಯಲ್ಲಿ ನಡೆಯುತ್ತಿದೆ. ಬೇರೆ ಬೇರೆ ರಾಜ್ಯದ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಗ್ಯಾಸ್ಟ್ರೋ ಎಂಟ್ರಾಲಜಿ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು, ಅಂಗಾoಗ ದಾನಕ್ಕೆ 30 ರಿಂದ 40 ಲಕ್ಷ ವೆಚ್ಚವಾಗುತ್ತದೆ. ಆದರೆ ಇಲ್ಲಿ ಉಚಿತವಾಗಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಮತ್ತು ಸಚಿವರು ಮಾಹಿತಿ ನೀಡಿದರು.
300 ಹಾಸಿಗೆಗಳ ಆಸ್ಪತ್ರೆ: 120 ಹಾಸಿಗೆಗಳ ಆಸ್ಪತ್ರೆಯನ್ನು 300 ಹಾಸಿಗೆಗಳಿಗೆ ಹೆಚ್ಚಿಸುವ ಬಗ್ಗೆ ಬೇಡಿಕೆಯಿದೆ. ಈ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದನ್ನು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಿಎಂ, ಸಚಿವರಿಂದ ಆಹಾರ ಗುಣಮಟ್ಟ ಪರಿಶೀಲನೆ: ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕ್ಯಾಂಟೀನ್ ಊಟದ ಗುಣಮಟ್ಟವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಪರೀಕ್ಷಿಸಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD