ಬೀದರ.20.ಜುಲೈ.25:-ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದೊಂದಿಗೆ, ಸರ್ವತೋಮುಖ ಕ್ರಿಯಾಶೀಲ ಮನೋಭಾವ ಬೆಳೆಯುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರರ ನುಡಿದರು.
ಅವರು ಇತ್ತೀಚಿಗೆ ಬೀದರ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಳಚಾಪೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಅಭ್ಯಾಸದ ಸಂದರ್ಭದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಅವಕಾಶ ಕಲ್ಪಿಸುತ್ತದೆ. ಯುವ ಜನಾಂಗದ ಮೇಲೆ ಮಹತ್ವದ ಜವಾಬ್ದಾರಿಯಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕೆಂದರು.
ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್. ಮಾತನಾಡಿ, ಶ್ರಮ ಸಂಸ್ಕೃತಿ, ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಬೇಕು. ಮನುಷ್ಯನಲ್ಲಿ ಅಹಂ ಬರಬಾರದು, ಸೂರ್ಯ-ಚಂದ್ರ, ನಕ್ಷತ್ರಗಳು ನಿಸ್ವಾರ್ಥದಿಂದ ಈ ಜಗತ್ತನ್ನು ಬೆಳಗುತ್ತಿವೆ. ಈ ಜಗತ್ತಿನಲ್ಲಿ ಮನುಷ್ಯ ಒಂದು ಕಣ ಮಾತ್ರ. ಮನುಷ್ಯ ಜನ್ಮವೇ ಕ್ಷಣಿಕ. ಹೀಗಾಗಿ ನಿರಹಂಕಾರದಿಂದ ಬಾಳುತ್ತಾ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾಗಿದೆ. ಪದವಿಗಿಂತ ವ್ಯಕ್ತಿತ್ವ ಮುಖ್ಯವಾಗುತ್ತದೆ. ಜೀವನದಲ್ಲಿ ಶಿಸ್ತು ಮುಖ್ಯವಾಗುತ್ತದೆ.
ಜೀವನದಲ್ಲಿ ತಾಳ್ಮೆ, ಸಹನೆ, ನಿಷ್ಠೆ ಮುಖ್ಯವಾಗಿದೆ. ಹೀಗಾಗಿ ಎಲ್ಲರೂ ಉತ್ತಮ ಜೀವನ ರೂಪಿಸಿಕೊಳ್ಳಬೇಕಾಗಿದೆ ಎಂದರು.
ಬೀದರ ತಾಲ್ಲೂಕು ಪಂಚಾಯತ್ನ ಅಧಿಕಾರಿ ಚಂದ್ರಶೇಖರ ಮಾತನಾಡಿ, ವಿದ್ಯಾರ್ಥಿಗಳು ಈ ಮಹತ್ವದ ಜೀವನವನ್ನು ವ್ಯರ್ಥ ಮಾಡಿಕೊಳ್ಳದೆ ಸಾರ್ಥಕ ಮಾಡಿಕೊಳ್ಳಬೇಕು. ಜೀವನದ ಪ್ರತಿ ಕ್ಷಣವೂ ಸಹ ಮಹತ್ವದ್ದಾಗಿದೆ. ಕಳೆದ ಸಮಯ ಬಾರದು ಹಾಗಾಗಿ ಸಮಯಕ್ಕೆ ಮಹತ್ವ ನೀಡಬೇಕೆಂದರು.
ಈ ಸಂದರ್ಭದಲ್ಲಿ ಬೀದರ ವಿಶ್ವವಿದ್ಯಾಲಯದ ವಾಣಿಜ್ಯ ನಿಕಾಯದ ಡೀನರಾದ ಡಾ.ಶರಣಪ್ಪ ಮಲಗೊಂಡ, ಬೀದರ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಡಾ.ರವೀಂದ್ರನಾಥ ವಿ.ಗಬಾಡಿ ಬೀದರ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ರಾಮಚಂದ್ರ ಗಣಾಪೂರ, ಮಳಚಾಪೂರ ಗ್ರಾಮದ ಮುಖಂಡರಾದ ಪ್ರಭು ಪಾಟೀಲ, ಗುಂಡಪ್ಪ ಜ್ಯಾಂತೆ ಸೇರಿದಂತೆ ಬೀದರ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳು, ಗ್ರಾಮಸ್ಥರು, ವಿಶ್ವವಿದ್ಯಾಲಯದ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಾಣಿಶ್ರೀ ಪ್ರಾರ್ಥಿಸಿದರು, ಅಭಿಷೇಕರವರು ಕಾರ್ಯಕ್ರಮ ನಿರೂಪಿಸಿದರು.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…