ವಿಶ್ವವಿದ್ಯಾನಿಲಯ 11ನೇ ಘಟಿಕೋತ್ಸವದಲ್ಲಿ,46 ವಿದ್ಯಾರ್ಥಿಗಳು 87 ಚಿನ್ನದ ಪದಕ ಪಡೆದರೆ, 57  ಪಿಎಚ್.ಡಿ.  ಪಡೆಯಲಿದ್ದಾರೆ.

ದಾವಣಗೆರೆ.01.ಏಪ್ರಿಲ್.25:- ದಾವಣಗೆರೆ ವಿಶ್ವವಿದ್ಯಾಲಯೆಲ್ಲಿ ಹನ್ನೊಂದನೇ ಘಟಿಕೋತ್ಸವ ಸಿದ್ಧತೆ ವಿಶ್ವವಿದ್ಯಾಲಯೇಲ್ಲಿ ಸ್ನಾತಕ  ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 14,048 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. 46 ವಿದ್ಯಾರ್ಥಿಗಳು 87 ಚಿನ್ನದ ಪದಕ ಪಡೆದರೆ, 57 ಸಂಶೋಧನಾ ವಿದ್ಯಾರ್ಥಿಗಳು ಪಿಎಚ್.ಡಿ. ಪದವಿಯನ್ನು ಪಡೆಯಲಿದ್ದಾರೆ.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅವರು ಮಾತನಾಡಿ, ಈ ಬಾರಿ ಘಟಿಕೋತ್ಸವದಲ್ಲಿ 21 ಮಹಿಳೆಯರು ಮತ್ತು 36 ಪುರುಷರು ಸೇರಿ ಒಟ್ಟು 57 ಜನರು ಪಿಎಚ್.ಡಿ. ಪದವಿ ಪಡೆಯಲಿದ್ದಾರೆ. ಒಟ್ಟು 23 ವಿವಿಧ ವಿಭಾಗಗಳಲ್ಲಿ ಸಂಶೋಧನೆ ನಡೆಸಿದ್ದಾರೆ. ಆ ಮೂಲಕ ವಿಶ್ವವಿದ್ಯಾನಿಲಯವು ಶಿಕ್ಷಣದ ಜೊತೆಗೆ ಸಂಶೋಧನೆಯಲ್ಲಿಯೂ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಗೌರವ ಪಡೆಯಲು ಸಾಧ್ಯವಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 87 ಸ್ವರ್ಣ ಪದಕಗಳಿದ್ದು, 35 ವಿದ್ಯಾರ್ಥಿನಿಯರು ಮತ್ತು 11 ಪುರುಷರು ಸೇರಿ ಒಟ್ಟು 46 ವಿದ್ಯಾರ್ಥಿಗಳು ಪದಕಗಳನ್ನು ಹಂಚಿಕೊಂಡಿದ್ದಾರೆ. ಆ ಮೂಲಕ ಈ ಬಾರಿಯೂ ವಿದ್ಯಾರ್ಥಿನಿಯರೇ ಚಿನ್ನದ ಗಳಿಕೆಯಲ್ಲಿ ಮೇಲುಗೈ ಸಾಧಿಸಿದ್ದಾರೆ. ಇದರಲ್ಲಿ ಸ್ನಾತಕ ಪದವಿಯ 9 ಮತ್ತು ಸ್ನಾತಕೋತ್ತರ ಪದವಿಯ 26 ವಿದ್ಯಾರ್ಥಿನಿಯರು ಈ ಸಾಧನೆ ಮಾಡಿದ್ದಾರೆ.

ಕಳೆದ ಶೈಕ್ಷಣಿಕ ವರ್ಷದ ಸ್ನಾತಕ ಪದವಿಯ ವಿವಿಧ ಕೋರ್ಸ್ ಗಳಲ್ಲಿ ಒಟ್ಟು 12,129 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆ. ಅವರಲ್ಲಿ 7,645 ಮಹಿಳೆಯರು ಮತ್ತು 4,448 ಪುರುಷರು ಪದವೀಧರರಾಗಲಿದ್ದಾರೆ. ಅಲ್ಲದೆ ಸ್ನಾತಕ ಪದವಿಯ ತೇರ್ಗಡೆ ಫಲಿತಾಂಶ ಶೇ 61.14 ರಷ್ಟಾಗಿದೆ ಎಂದು ತಿಳಿಸಿದರು.

ಇನ್ನು ವಿಶ್ವವಿದ್ಯಾನಿಲಯ 24 ಕೋರ್ಸ್ ಗಳಲ್ಲಿ ಒಟ್ಟು 1,919 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯಲು ಅರ್ಹರಾಗಿದ್ದಾರೆ. ಇವರಲ್ಲಿ 1,192 ಮಹಿಳೆಯರು ಮತ್ತು 727 ಪುರುಷ ವಿದ್ಯಾರ್ಥಿಗಳು ಸೇರಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಶೇ 96.14ರಷ್ಟು ಫಲಿತಾಂಶ ಬಂದಿದೆ.

ರಾಜ್ಯಪಾಲರಿಂದ ಪದವಿ ಪ್ರದಾನ:

ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಏಪ್ರಿಲ್ 2ರಂದು ವಿವಿಯಲ್ಲಿ ನಡೆಯುವ 12ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಪಾಲರು ಪದವಿ ಪ್ರದಾನ ಜೊತೆಗೆ, ರ‍್ಯಾಂಕ್ ವಿಜೇತರಿಗೆ 87 ಚಿನ್ನದ ಪದಕ ನೀಡುವರು. 57 ಜನರಿಗೆ ಪಿಎಚ್.ಡಿ. ಪದವಿ ಪ್ರಮಾಣಪತ್ರ ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 14,048 ವಿದ್ಯಾರ್ಥಿಗಳಿಗೆ ಪದವಿ ಘೋಷಣೆ ಮಾಡಲಿದ್ದಾರೆ.

ವಿಶ್ವವಿದ್ಯಾನಿಲಯದ ಗೌರವಾನ್ವಿತ ಸಮಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಉಪಸ್ಥಿತರಿರುವರು. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರು ಎರಡರಿಂದ ಹತ್ತನೇ ರ‍್ಯಾಂಕ್ ವಿಜೇತರಿಗೆ ಪ್ರಮಾಣಪತ್ರ ವಿತರಿಸುವರು. ಭಾರತೀಯ ವಿಜ್ಞಾನ ಸಂಸ್ಥೆ ಮಾಜಿ ನಿರ್ದೇಶಕ, ಪದ್ಮಭೂಷಣ ಪ್ರೊ.ಪಿ. ಬಲರಾಮ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ.ಬಿ.ಡಿ.ಕುಂಬಾರ ತಿಳಿಸಿದರು.

ಕುಲಸಚಿವ ಪ್ರೊ.ಆರ್.ಶಶಿಧರ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

prajaprabhat

Recent Posts

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

38 minutes ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

46 minutes ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

7 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

8 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

10 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

11 hours ago