ಬೀದರ, 04ಡಿಸೆಂಬರ್24:- ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ಉದ್ಯೋಗ, ಮಶಾಶನ ಹಾಗೂ ವೈದ್ಯಕೀಯ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸರಕಾರದಿಂದ ಎಲ್ಲ ರೀತಿಯ ಕ್ರಮ ಕೈಗೊಳ್ಳುವುದಾಗಿ ಅರಣ್ಯ, ಪರಿಸರ ಮತ್ತು ಜೀವಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ (ರಿ) ಎಮ್.ಆರ್.ಡಬ್ಲೂö್ಯ., ವಿ.ಆರ್.ಡಬ್ಲೂö್ಯ., ಯು.ಆರ್.ಡಬ್ಲೂö್ಯ., ಸ್ವಯಂ ಸೇವಾ ಸಂಘ ಸಂಸ್ಥೆಗಳ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಡಾ.ಪೂಜ್ಯ ಚನ್ನಬಸವ ಪಟ್ಟದೇವರು ರಂಗಮAದಿರದಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡುತ್ತಾ, ಅಂಗವಿಕಲರ ಅಭಿವೃದ್ಧಿಗಾಗಿ ಅಗತ್ಯ ಸೌಲಭ್ಯಗಳನ್ನು ದೊರಕಿಸಿಕೊಡಲು ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಕೆ.ಕೆ.ಆರ್.ಡಿ.ಬಿ. ವತಿಯಿಂದ ವಿಶೇಷ ಚೇತನರ ಅಭಿವೃದ್ಧಿಗೆ ಒಟ್ಟು ಅನುದಾನದ ಶೇ.5% ರಷ್ಟು ಅನುದಾನವನ್ನು ಮೀಸಲಿಡಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗುವುದು. ಜಿಲ್ಲೆಯ ಎಲ್ಲ ವಿಶೇಷಚೇತನರಿಗೆ ವಸತಿ, ನಿವೇಶನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಈಗಾಗಲೇ ಸರ್ಕಾರದ ವತಿಯಿಂದ ನೀಡುತ್ತಿರುವ ಮಾಶಾಸನವನ್ನು 800 ದಿಂದ 2 ಸಾವಿರಕ್ಕೆ ಹೆಚ್ಚಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಅಂಗವಿಕಲರ ಅಭಿವೃದ್ಧಿಗಾಗಿ ಇರುವ ಎಲ್ಲ ಅನುದಾನವನ್ನು ಸರಿಯಾಗಿ ಬಳಸಿಕೊಳ್ಳಲು ಅಂಗವಿಕಲರ ಕೋಶ ಸ್ಥಾಪನೆಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದೆಂದರು.
ಬುದ್ಧಿಮಾಂದ್ಯರು ಸಾಕಷ್ಟು ಒತ್ತಡದಲ್ಲಿದ್ದು, ವಿಶೇಷ ಶಾಲೆಯನ್ನು ಸ್ಥಾಪಿಸಲಾಗುವುದು. ಈಗಾಗಲೇ ಚಾಲ್ತಿಯಲ್ಲಿರುವ ಅಂಧ ಶಾಲೆಗಳಿಗೆ ಹೆಚ್ಚಿನ ಅನುದಾನ ಕೆ.ಕೆ.ಆರ್.ಡಿ.ಬಿ.ಯಿಂದ ನೀಡುವಂತೆ ಕ್ರಮಕೈಗೊಳ್ಳಲಾಗುವುದು ಎಂದರು.
ಬಿ.ಆರ್.ಡಬ್ಲೂö್ಯ., ಎಂ.ಆರ್.ಡಬ್ಲೂö್ಯ. ಅವರ ವೇತನ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. 10ನೇ ತರಗತಿಯವರ ಶುಲ್ಕ ಮರು ಪಾವತಿ ಯೋಜನೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ, ಪಿಯುಸಿ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪಟಾಪ್, ಬ್ರೆöÊಲ್ ಲಿಪಿಯ ಲ್ಯಾಪ್ಟ್ಯಾಪ್ ವಿತರಿಸಲು ಈಗಾಗಲೇ ಅಧಿಕಾರಿಗಳು ಕ್ರಮಕೈಗೊಂಡಿರುತ್ತಾರೆ. ವಿಶೇಷಚೇತನರು ರಾಜ್ಯ, ರಾಷ್ಟç ವಿಶ್ವದಾದ್ಯಂತ ಅನೇಕರು ಸಾಧನೆ ಮಾಡಿದ್ದಾರೆ. ಅಂಗವಿಕಲತೆ ಶಾಪವಲ್ಲ, ಅಂಗವಿಕಲತೆಯನ್ನು ಸಮರ್ಪಕವಾಗಿ ಎದುರಿಸಲು ಪೂರಕ ವಾತಾವರಣ ನಾವೆಲ್ಲರೂ ಪಾಲಿಸಬೇಕಿದೆ. ಎಂದರು.
ಎಲ್ಲ ಅಂಗವಿಕಲರು ಖುದ್ದಾಗಿ ಬಂದು ಅರ್ಜಿ ಹಾಕಲು ಆಗುವುದಿಲ್ಲ. ಅಧಿಕಾರಿಗಳು ಮನೆ ಮನೆಗೆ ತೆರಳಿ ಮಾಶಾಸನ ಹಾಗೂ ಇತರೇ ಸೌಲಭ್ಯ ವಿತರಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಅನುದಾನದಡಿ 25 ಲಕ್ಷ ರೂ. ಹಾಗೂ ಸಂಸದರಾದ ಸಾಗರ ಖಂಡ್ರೆ ಅವರ ಅನುದಾನದಡಿ 50 ಲಕ್ಷ ರೂ. ಖರ್ಚಿನಲ್ಲಿ ಅಂಗವಿಕಲರಿಗೆ ವಿಶೇಷ ಸಲಕರಣೆಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಪೌರಾಡಳಿತ ಮತ್ತು ಹಜ್ ಖಾತೆ ಸಚಿವರಾದ ರಹೀಮ ಖಾನ್ ಅವರು ಮಾತನಾಡಿ, ವಿಶೇಷ ಚೇತನ ಮಕ್ಕಳು ಸಾಮಾನ್ಯ ಮಕ್ಕಳಿಗಿಂತ ಯಾವುದೇ ವಿಭಾಗದಲ್ಲಿ ಕಡಿಮೆ ಇರುವುದಿಲ್ಲ ಅವರ ಪ್ರತಿಭೆಯನ್ನು ಪ್ರೋತ್ಸಾಹಿಸಿ ಹೊರ ತರಲು ಅವರನ್ನು ಪೋಷಕರು ಹಾಗೂ ಶಿಕ್ಷಕರು ಸಹಾನುಭೂತಿಯಿಂದ ಸಹಕರಿಸಬೇಕು ಹಾಗೂ ಸರ್ಕಾರದ ವತಿಯಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ ವಿಕಲಚೇತನರಿಗೆ ಅಲಿಮಕೋ ಸಂಸ್ಥೆ ವತಿಯಿಂದ ಸಾಧನ ಸಲಕರಣೆ ಹಾಗೂ ಇಲಾಖೆ ವತಿಯಿಂದ ತ್ರಿಚಕ್ರ ವಾಹನ ನೀಡಲಾಯಿತು. ಅದೇ ರೀತಿ ವಿಕಲಚೇತನರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀಧರ ಎಂ., ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಬಲೀಕರಣ ಅಧಿಕಾರಿ ರತ್ನಸುಭಾಷ, ವಿಕಲಚೇತನರ ಸಂಘ ಸಂಸ್ಥೆಗಳ ಅನೀಲ ಬೆಲ್ದಾರ, ರಾಜು ಕಡ್ಯಾಳ ಸೇರಿದಂತೆ ಸಂಘ ಸಂಸ್ಥೆಯ ಪದಾಧಿಕಾರಿಗಳು, ವಿಶೇಷಚೇತನರು ಉಪಸ್ಥಿತರಿದ್ದರು
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…