ಬೀದರ.21.ಮೇ.25:- ಜೇನಿನಲ್ಲಿ ಅನೇಕ ಔಷಧೀಯ ಗುಣಗಳು ಹೊಂದಿದ್ದು, ರೋಗಗಳನ್ನು ಗುಣಪಡಿಸುವಂತಹ ಶಕ್ತಿಯನ್ನು ಹೊಂದಿದ್ದು, ಮಾನವರಿಗೆ ಇದು ಒಂದು ದೇವರು ನೀಡಿರುವಂತಹ ಅಮೂಲ್ಯ ವರದಾನವಾಗಿದೆ ಎಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಹೇಳಿದರು.
ಅವರು ಮಂಗಳವಾರ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಮತ್ತು ತೋಟಗಾರಿಕೆ ಮಹಾವಿದ್ಯಾಲಯ, ಬೀದರ ಇವರುಗಳ ಸಹಯೋಗದೊಂದಿಗೆ ತೋಟಗಾರಿಕೆ ಮಹಾವಿದ್ಯಾಲಯ, ಬೀದರನಲ್ಲಿ ಹಮ್ಮಿಕೊಂಡಿದ್ದ “ವಿಶ್ವ ಜೇನು ದಿನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಶ್ವ ಜೇನುನೊಣ ದಿನವು ಜೇನುನೊಣ ಉತ್ಸಾಹಿಗಳು, ಜೇನುಸಾಕಣೆ ಸಂಘಗಳು ಮತ್ತು ಕ್ಲಬ್ಗಳು ಮತ್ತು ಜೇನುಸಾಕಣೆದಾರರು ಜೇನುನೊಣವನ್ನು ಆಚರಿಸುವ ಜಾಗೃತಿ ದಿನವಾಗಿದೆ.
ನಮ್ಮ ದೈನಂದಿನ ಜೀವನಕ್ಕೆ ಜೇನುನೊಣಗಳು ನೀಡುವ ಕೊಡುಗೆಯನ್ನು ಗುರುತಿಸುವ ದಿನವಾಗಿದೆ, ಜೊತೆಗೆ ಈ ಪ್ರಮುಖ ಪ್ರಭೇದವನ್ನು ರಕ್ಷಿಸಲು ನಾವು ತೆಗೆದುಕೊಳ್ಳಬಹುದಾದ ವಿವಿಧ ಹಂತಗಳ ಬಗ್ಗೆ ಕಲಿಯಲು ಇದು ಒಂದು ದಿನವಾಗಿದೆ ಹಾಗೂ ಹೆಚ್ಚು ಹೆಚ್ಚು ರೈತರನ್ನು ಜೇನು ಕೃಷಿ ಕೈಗೊಳ್ಳಲು ಉತ್ತೇಜಿಸಬೇಕೆಂದು ಕರೆ ನೀಡಿದರು.
ಬಾಗಲಕೋಟ ಪ್ರಾಧ್ಯಾಪಕರು ಹಾಗೂ ವಿಭಾಗ ಮುಖ್ಯಸ್ಥರು (ತೋಟಪಟ್ಟಿ ವಿಭಾಗ)ದ ಡಾ.ಮೊಹ್ಮದ ಫಾರೂಕ್ ಅವರು ಮಾತನಾಡಿ, ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸ್ವಲ್ಪ ಜೇನುತುಪ್ಪವನ್ನು ಸೇರಿಸುವುದರೊಂದಿಗೆ ಸಾಕಷ್ಟು ಪೌಷ್ಟಿಕಾಂಶದ ಪ್ರಯೋಜನಗಳಿವೆ. ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುವ ಕಾರಣ ಉತ್ತಮ ಗುಣಮಟ್ಟದ ಜೇನುತುಪ್ಪವು ಹಲವಾರು ಪ್ರಯೋಜನಗಳನ್ನು ನೀಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶ್ವ ಜೇನು ದಿನ ಆಚರಣೆ ಅಂಗವಾಗಿ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದಡಿಯಲ್ಲಿ ಕೀಟಶಾಸ್ತç ವಿಭಾಗದಿಂದ ಜೇನು ಕೃಷಿಗೆ ಬಳಸುವ ಉಪಕರಣಗಳು ಹಾಗೂ ಸಮಗ್ರ ತಾಂತ್ರಿಕ ಮಾಹಿತಿಯನ್ನೊಳಗೊಂಡoತಹ ಭಿತಿಚಿತ್ರಗಳ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರು (ಹಣ್ಣು ವಿಜ್ಞಾನ) ಡಾ. ಪ್ರವೀಣ ಜೋಳಗೀಕರ, ಸಹಾಯಕ ಪ್ರಾಧ್ಯಾಪಕರು (ಕೀಟಶಾಸ್ತç) ಡಾ. ಪ್ರಶಾಂತ, ಡಾ. ಅಬ್ದುಲ್ ಕರೀಮ್ ಎಂ., ಬೀದರ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದ ವಿಸ್ತರಣಾ ಮುಂದಾಳು ಡಾ. ವಿ.ಪಿ. ಸಿಂಗ್, ಬೀದರ ಜಿಲ್ಲೆಯ ರೈತರು, ತೋಟಗಾರಿಕೆ ಮಹಾವಿದ್ಯಾಲಯದ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…