*ವಿಶ್ವ ಹಿಂದು ಪರಿಷತ್ ಹಿರಿಯ ಮುಖಂಡ ಗೋಪಾಲ್‌ಜಿ ವಿಶೇಷ ಉಪನ್ಯಾಸ


ಬೀದರ ೧೨ರಂದು ಹನುಮ ಜಯಂತ್ಯುತ್ಸವ:
ಬೀದರ್‌ನಲ್ಲಿ ಭವ್ಯ ಶೋಭಾಯಾತ್ರೆ
ಬೀದರ್: ಶ್ರೀರಾಮ ಭಕ್ತ, ಸಂಕಟಮೋಚನ ಶ್ರೀ ಹನಮಾನ ಜಯಂತ್ಯುತ್ಸವ ಇದೇ ೧೨ರಂದು (ಶನಿವಾರ) ಬೀದರ್ ನಗರದಲ್ಲಿ ಅದ್ಧೂರಿಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ನಿಮಿತ್ತ ಸಾಂಸ್ಕೃತಿಕ ವೈಭವದೊಂದಿಗೆ ಭವ್ಯ ಶೋಭಾಯಾತ್ರೆ ನಡೆಯಲಿದೆ ಎಂದು ಭಜರಂಗ ದಳ ಜಿಲ್ಲಾ ಸಂಯೋಜಕ ಭೀಮಣ್ಣಾ ಸೋರಳ್ಳಿ ಆಣದೂರ ತಿಳಿಸಿದ್ದಾರೆ.


ನಗರದ ಜನವಾಡಾ ರಸ್ತೆಯ ಪ್ರಸಿದ್ಧ ರೋಕಡೆ ಹನುಮಾನ ಮಂದಿರದಲ್ಲಿ ಜಯಂತ್ಯುತ್ಸವ ನಿಮಿತ್ತ ಅಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ನಂತರ ಸಂಜೆ ೪ಕ್ಕೆ ಅಲ್ಲಿಂದ ಭವ್ಯ ಶೋಭಾಯಾತ್ರೆ ಆರಂಭವಾಗಲಿದೆ. ಜಿಲ್ಲಾ ವಿಶ್ವ ಹಿಂದು ಪರಿಷತ್ ಸಹಯೋಗದಲ್ಲಿ ಭಜರಂಗ ದಳದ ವತಿಯಿಂದ ಜಯಂತಿಯನ್ನು ಯಶಸ್ವಿ ಹಾಗೂ ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹನುಮಾನ ಮಂದಿರದಿoದ ಶುರುವಾಗುವ ಶೋಭಾಯಾತ್ರೆ ಜನವಾಡಾ ರಸ್ತೆ, ಡಾ. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಚೌಬಾರಾ, ಗವಾನ ಚೌಕ್, ಶಹಾಗಂಜ್ ಮುಖಾಂತರ ಮತ್ತೆ ಹನುಮಾನ ಮಂದಿರಕ್ಕೆ ಬಂದು ಕೊನೆಗೊಳ್ಳಲಿದೆ. ವಿಶ್ವ ಹಿಂದು ಪರಿಷತ್ ಕೇಂದ್ರೀಯ ಸಹ ಕಾರ್ಯದರ್ಶಿ ಹಾಗೂ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಉಸ್ತುವಾರಿಗಳಾದ ಎನ್. ಗೋಪಾಲ್‌ಜಿ ಅವರು ಶೋಭಾಯಾತ್ರೆಗೆ ಚಾಲನೆ ನೀಡುವರು. ಶೋಭಾಯಾತ್ರೆ ಬಸವೇಶ್ವರ ವೃತ್ತಕ್ಕೆ ಆಗಮಿಸಿದಾಗ ಅಲ್ಲಿ ಗೋಪಾಲ್‌ಜಿ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಬೌದ್ಧಿಕ ನೀಡುವರು. ಶಾಸಕರು, ಗಣ್ಯರು, ವಿವಿಧ ಸಂಘಟನೆ, ಸಮಾಜದ ಮುಖಂಡರು ಪಾಲ್ಗೊಳ್ಳುವರು ಎಂದು ವಿವರಿಸಿದ್ದಾರೆ.

ಕುಂದಾಪುರದ ಚಂಡಿ ವಾದ್ಯ, ಮಂಗಳೂರಿನ ಹನುಮ ವೇಷಧಾರಿ ತಂಡ, ವಾರಂಗಲ್ ಹಲಗೆ ಮೇಳ, ಸ್ಥಳೀಯರ ಕೋಲಾಟ, ಡಿಜೆ ವಾದ್ಯಮೇಳ ಮುಂತಾದವುಗಳು ಶೋಭಾಯಾತ್ರೆಗೆ ಸಾಂಸ್ಕೃತಿಕ ವೈಭವ ನೀಡಲಿವೆ. ಹನುಮಾನ ಜಯಂತಿ ಹಾಗೂ ಶೋಭಾಯಾತ್ರೆ ಅದ್ಧೂರಿ ನಡೆಸಲು ಇತ್ತೀಚೆಗೆ ವನವಾಸಿ ರಾಮ ಮಂದಿರದಲ್ಲಿ ನಡೆದ ಸಮಾಜದ ಪ್ರಮುಖರ ಪೂರ್ವಭಾವಿ ಸಭೆಯಲ್ಲಿ ರೂಪುರೇಷೆ ಸಿದ್ಧಪಡಿಸಲಾಗಿದೆ. ಹನುಮ ಭಕ್ತರು, ರಾಮಭಕ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಭೀಮಣ್ಣಾ ಸೋರಳ್ಳಿ ಮನವಿ ಮಾಡಿದ್ದಾರೆ.

prajaprabhat

Recent Posts

‘ಹರ ಘರ ತಿರಂಗಾ”ಕಾರ್ಯಕ್ರಮ

ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…

6 hours ago

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

9 hours ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

15 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

18 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

18 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

19 hours ago