02.ಮಾರ್ಚ್.25:- ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮೊಳಕಾಲ್ಮುರು ಘಟಕದ ವತಿಯಿಂದ ಕೆ.ಕೆ. ಪುರದಲ್ಲಿ ಆಯೋಜಿಸಲಾದ ಬೃಹತ್ ಸಮಾವೇಶದಲ್ಲಿ ಅರಣ್ಯ ಮತ್ತು ಪರಿಸರ ಸಚಿವರು ಹಾಗೂ ಮಹಾಸಭೆಯ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷರಾದ ಶ್ರೀ ಈಶ್ವರ ಖಂಡ್ರೆ ಅವರು ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅವರು ವೀರಶೈವ-ಲಿಂಗಾಯತ ಸಮಾಜವು ಶೈಕ್ಷಣಿಕ, ಆರ್ಥಿಕ ಹಾಗೂ ಸಾಂಸ್ಕೃತಿಕವಾಗಿ ಇನ್ನಷ್ಟು ಸದೃಢಗೊಳ್ಳಬೇಕಾದ ಅಗತ್ಯವಿದೆ ಎಂದು ತಿಳಿಸಿದರು. ಯುವಪೀಳಿಗೆಗೆ ಉತ್ತಮ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ಸಮಾಜವನ್ನು ಮತ್ತಷ್ಟು ಸಂಘಟಿತವಾಗಿ ಮುನ್ನಡೆಸುವ ಪ್ರಾಮುಖ್ಯತೆ ಬಗ್ಗೆ ಅವರು ವಿವರಿಸಿದರು.
ಸಮಾವೇಶದಲ್ಲಿ ಕ್ಷೇತ್ರದ ಶಾಸಕರು, ಚಿತ್ರದುರ್ಗದ ಸಂಸದರು, ಮಹಾಸಭೆಯ ತಾಲೂಕು ಘಟಕದ ಅಧ್ಯಕ್ಷರು, ವೀರಶೈವ-ಲಿಂಗಾಯತ ಮುಖಂಡರು, ಮಠಾಧೀಶರು ಭಾಗವಹಿಸಿದ್ದರು.
